ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ

ಮಂಗಳ ಮುಖಿಯರ ಟಾರ್ಚರ್ ಗೆ ಅಪ್ರಾಪ್ತ ಬಾಲಕ ಬಲಿ

ಮಂಗಳಮುಖಿಯರ ಕಿರುಕುಳಕ್ಕೆ ಮನನೊಂದ ಅಪ್ರಾಪ್ತ ವಯಸ್ಸಿನ ಬಾಲಕ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಹುಣಸೂರು ತಾಲೂಕಿನ ಹೆಜ್ಜೂರು ಗ್ರಾಮದಲ್ಲಿ ನಡೆದಿದೆ.ರಾಹುಲ್ ಮೌರ್ಯ(17) ಮೃತದುರ್ದೈವಿ.ಘಟನೆ ಬಗ್ಗೆ ಸೂಕ್ತ ತೆನಿಖೆ ನಡೆಸುವಂತೆ ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಹುಣಸೂರಿನ ಕಿರಜಾಜಿ ಸರ್ಕಲ್ ಬಳಿ ಎಳೆನೀರು ವ್ಯಾಪಾರ ಮಾಡುತ್ತಿದ್ದ ರಾಹುಲ್ ಮೌರ್ಯ ಮಂಗಳಮುಖಿಯ ಜೊತೆ ಆಗಾಗ ಮಾತನಾಡುತ್ತ ಸ್ನೇಹ ಬೆಳೆಸಿದ್ದ.ನಾಲ್ಕು ತಿಂಗಳ ಹಿಂದೆ ರಾಹುಲ್ ಮೌರ್ಯ ನಾಪತ್ತೆಯಾಗಿದ್ದಾನೆ.ಆಗಾಗ ತನ್ನ ತಾಯಿ ಜೊತೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ರಾಹುಲ್ ಮೌರ್ಯ ತಾನು ಇರುವ ಸ್ಥಳ ತಿಳಿಸಿಲ್ಲ.ಜೂನ್ 21 ರಂದು ರಾಹುಲ್ ಮೌರ್ಯ ಹೆಜ್ಜೂರು ಗ್ರಾಮದ ತನ್ನ ದೊಡ್ಡಮ್ಮನ ಮನೆಗೆ ಹಿಂದಿರುಗಿದ್ದಾನೆ.ಜೂನ್ 23 ರಂದು ಕೆಲವು ಮಂಗಳಮುಖಿಯರು ಕಿರಜಾಜಿಯಲ್ಲಿರುವ ರಾಹುಲ್ ಮೌರ್ಯ ಮನೆಗೆ ಬಂದು ಕುಟುಂಬಸ್ಥರ ಜೊತೆ ಜಗಳವಾಡಿ ಕೂಗಾಡಿದ್ದಾರೆ.ನಮ್ಮ ಹುಡುಗಿಯೊಬ್ಬಳನ್ನ ಕರೆದೊಯ್ದಿದ್ದಾನೆಂದು ಆರೋಪಿಸಿ ಕಿರುಚಾಡಿ ಹೋಗಿದ್ದಾರೆ.ಅದೇ ಸಂಜೆ 5 ಗಂಟೆಗೆ ಹೆಜ್ಜೂರು ಗ್ರಾಮದ ಜಮೀನಿನಲ್ಲಿರುವ ಬಿದಿರುಶೆಡ್ ನಲ್ಲಿ ರಾಹುಲ್ ಮೌರ್ಯ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ.ಘಟನೆಯಿಂದ ಮನನೊಂದು ಮಗ ಆತ್ಮಹತ್ಯೆಗೆ ಶರಣಾಗಿದ್ದಾನೆಂದು ತಂದೆ ಕುಮಾರ್ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಸೂಕ್ತ ತನಿಖೆ ನಡೆಸಿ ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ…

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!