ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಆಂಟಿ !

ಮದುವೆಯಾಗಿ 20 ವರ್ಷದ ಮಕ್ಕಳಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಚಾಟಿಂಗ್ ಮಾಡುತ್ತಾ ಮದುವೆ ಆಗುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಮದುವೆಯಾಗಿ 20 ವರ್ಷದ ಮಕ್ಕಳಿರುವ ಕೋಮಲಾ ಅಂಟಿಯ ಕಣ್ಸನ್ನೆ ಹಾಗೂ ಮೆಸೇಜ್ಗಳಿಗೆ ಫಿದಾ ಆಗದ ಅಂಕಲ್ಗಳೇ ಇಲ್ಲ. ಸಾಮಾಜಿಕ ಜಾಲತಾಣದಲ್ಲಿ ಬಣ್ಣ ಬಣ್ಣದ ರೀಲ್ಸ್ ಮಾಡುತ್ತಾ ಪೋಸ್ಟ್ ಹಂಚಿಕೊಳ್ಳುವ ಈ ಆಂಟಿ ಆನ್ಲೈನ್ನಲ್ಲಿ ತನಗೆ ಸಂದೇಶ ಕಳಿಸುವ ಅಂಕಲ್ಗಳೇ ಈಕೆಯ ಟಾರ್ಗೆಟ್ ಆಗಿದ್ದಾರೆ. ನಾನು ವಿಧವೆ ಗಂಡನಿಲ್ಲ, ಮಕ್ಕಳಿಲ್ಲ ಎಂದೆಲ್ಲಾ ಹೇಳಿಕೊಳ್ಳುವ ಈ ಕೋಮಲಾ ಆಂಟಿ ಮದುವೆ ಪ್ರಸ್ತಾಪ ಮಾಡಿ ಅಂಕಲ್ಗಳಿಂದ ಲಕ್ಷ ಲಕ್ಷ ಹಣ, ಆಭರಣ ದುಬಾರಿ ಉಡುಗೊರೆಗಳನ್ನು ಪಂಗನಾಮ ಹಾಕುತ್ತಿದ್ದಾಳೆ.

ಮದುವೆ ಮಾಡಿಕೊಳ್ಳುವ ನೆಪದಲ್ಲಿ ರಾಜ್ಯದ ಅನೇಕ ಪುರುಷರಿಗೆ ವಂಚನೆ ಮಾಡುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತ ಮಹಿಳೆ ಕೋಮಲ ಎಂಬಾಕೆ ಆಗಿದ್ದಾಳೆ. ಸುಮಾರು 38ರಿಂದ 40 ವರ್ಷದ ಈ ಮಹಿಳೆಗೆ ಈಗಾಗಲೇ ಮದುವೆ ಆಗಿ 21 ವರ್ಷವಾಗಿದೆ. ಈಕೆಗೆ 20 ವರ್ಷದ ಮಗ ಹಾಗೂ 16 ವರ್ಷದ ಮಗಳಿದ್ದಾಳೆ. ತಾನಾಯ್ತು, ತನ್ನ ಸಂಸಾರವಾಯ್ತು ಎಂದು ಯಾವುದಾದರೂ ದುಡಿಮೆ ಮಾಡಿಕೊಂಡು ಮಕ್ಕಳಿಗೆ ಒಳ್ಳೆಯ ಭವಿಷ್ಯ ರೂಪಿಸುವುದನ್ನು ಬಿಟ್ಟು ರೀಲ್ಸ್ ಮಾಡುತ್ತಾ ಅಂಕಲ್ಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಮುಂದಾಗಿದ್ದಾಳೆ. ಹೀಗೆ, ನಾಲ್ಕೈದು ಅಂಕಲ್ಗಳನ್ನು ಬುಟ್ಟಿಗೆ ಬೀಳಿಸಿಕೊಂಡು ಲಕ್ಷಾಂತರ ರೂ. ಹಣ ವಂಚನೆ ಮಾಡಿದ ನಂತರ ಈಗ ಪೊಲೀಸರ ಅತಿಥಿಯಾಗಿದ್ದಾಳೆ.

 

ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ನಿವಾಸಿ ರಾಘವೇಂದ್ರ ಎಂಬುವರ ಜೊತೆಯಲ್ಲಿ ಚಾಟಿಂಗ್ ಮಾಡುತ್ತಾ ಮದುವೆಯಾಗುವುದಾಗಿ ಹೇಳಿ ವಂಚನೆ ಮಾಡಿದ ಘಟನೆ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡುತ್ತಾ ಪೋಸ್ಟ್ ಮಾಡುತ್ತುದ್ದ ಕೋಮಲಾ ಆಂಟಿಗೆ ಯಾರಾದರೂ ಲೈಕ್ ಮಾಡಿದರೆ, ಕಾಮೆಂಟ್ ಮಾಡಿದರೆ ಅವರೊಂದಿಗೆ ಚಾಟಿಂಗ್ ಮಾಡುತ್ತಾರೆ. ನಂತರ, ಕಾಮೆಂಟ್ ಮಾಡಿದವರ ಪೂರ್ವಾಪರ ತಿಳಿದುಕೊಂಡು ಅಲುಗೆ ಬೆಳೆಸಿಕೊಳ್ಳುತ್ತಾರೆ. ನಂತರ, ಮದುವೆ ಆಗದಿರುವ ಪುರುಷರು, ಹೆಂಡತಿಗೆ ಡಿವೋರ್ಸ್ ನೀಡಿ ಒಬ್ಬಂಟಿಯಾಗಿರುವ ಪುರುಷರಿಗೆ ಮದುವೆ ಮಾಡಿಕೊಳ್ಳುವುದಾಗಿ ನಂಬಿಸುತ್ತಾಳೆ. ತನಗೆ ಈಗಾಗಲೇ ಮದುವೆ ಆಗಿದ್ದು, ಗಂಡ ತೀರಿ ಹೋಗಿದ್ದಾರೆ. ನನಗೆ ಮಕ್ಕಳಿಲ್ಲ, ಮದುವೆ ಮಾಡಿಕೊಂಡು ಬಾಳು ಕೊಡುತ್ತೀರಾ? ಎಂದು ಕೇಳುತ್ತಾಳೆ. ಇನ್ನು ಮೊದಲೇ ಹೆಣ್ಣು ಸಿಗದೇ ಪರಿತಪಿಸುವವರು ಈಕೆಯ ಬುಟ್ಟಿಗೆ ಸುಲಭವಾಗಿ ಬೀಳುತ್ತಾರೆ.

ತನ್ನ ಮೋಸಲ ಜಾಲಕ್ಕೆ ಬಿದ್ದ ಅಂಕಲ್ಗಳೊಂದಿಗೆ ಸ್ವಲ್ಪ ಸಲುಗೆಯಿಂದಲೇ ಚಾಟಿಂಗ್ ಮಾಡುವ ಕೋಮಲಾ ಆಂಟಿ, ತೀರಾ ಪರ್ಸನಲ್ ಎನ್ನುವಂತೆ ಅವರೊಂದಿಗೆ ಮಾತನಾಡುತ್ತಾಳೆ. ನಂತರ, ಮನೆ ನಿರ್ವಹಣೆ, ಇತ್ಯಾದಿ ಎಂದು ಹೇಳಿ ಲಕ್ಷ ಲಕ್ಷ ರೂ. ಹಣವನ್ನು ಪೀಕುತ್ತಾಳೆ. ನಂತರ ಅವರ ಸಂಪರ್ಕಕ್ಕೆ ಸಿಗದೇ ವಂಚನೆ ಮಾಡಿ ಚಾಟಿಂಗ್ ಮಾಡುತ್ತಿದ್ದವರನ್ನು ಬ್ಲ್ಯಾಕ್ ಲಿಸ್ಟ್ಗೆ ಸೇರಿಸುತ್ತಾಳೆ. ಹೀಗೆ, ರಾಘವೇಂದ್ರ ಎಂಬುವವರನ್ನು ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬರೋಬ್ಬರಿ 7.40 ಲಕ್ಷ ರೂಪಾಯಿ ಪಡೆದು ವಂಚನೆ ಮಾಡಿದ್ದಾಳೆ. ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರು ವಂಚನೆಗೊಳಗಾದ ಮಹಿಳೆಯ ವಿರುದ್ಧ ಪೊಲೀಸರಿಗೆ ದೂರು ನಿಡಿದ್ದಾರೆ.

Related Posts

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

RTI ಕಾರ್ಯಕರ್ತ ಗಂಗರಾಜು ಜಾಮೀನು ಅರ್ಜಿ ನಾಳೆಗೆ ಮುಂದೂಡಿದೆ.

ಮೈಸೂರು : RTI ಕಾರ್ಯಕರ್ತ ಗಂಗರಾಜು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ನಾಳೆಗೆ ಮುಂದೂಡಿದೆ. ಮೈಸೂರಿನ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಮಂಗಳವಾರ ಅರ್ಜಿ ವಿಚಾರಣೆ ನಡೆಯಿತು. ವಿಚಾರಣೆ ವೇಳೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!