ಮದುವೆಯಾಗಲು ವಧು ತೋರುವ ನೆಪದಲ್ಲಿ ಹನಿಟ್ರ್ಯಾಪ್, ಸುಲಿಗೆ.

ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮೂಲಕ ಸುಲಿಗೆ ಮಾಡುತ್ತಿದ್ದ ಆರು ಆರೋಪಿಗಳನ್ನು ಬೆಂಗಳೂರಿನ ಹೆಬ್ಬಾಳ ಪೊಲೀಸರು ಬಂಧಿಸಿದ್ದಾರೆ. ನಾಲ್ವರು ಮಹಿಳೆಯರು ಮತ್ತು ಇಬ್ಬರು ಪುರುಷರು ಈ ಕೃತ್ಯದಲ್ಲಿ ಭಾಗಿಯಾಗಿದ್ದರು. ಪೊಲೀಸರು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಬೆಂಗಳೂರು, (ಫೆಬ್ರವರಿ 01) : ವಧು ತೋರಿಸುವ ನೆಪದಲ್ಲಿ ಹನಿಟ್ರ್ಯಾಪ್ ಮೂಲಕ ಖೆಡ್ಡಾಕ್ಕೆ ಕೆಡವಿಕೊಂಡು ಸುಲಿಗೆ ಮಾಡುತ್ತಿದ್ದ ನಾಲ್ವರು ಮಹಿಳೆಯರು ಸೇರಿದಂತೆ ಆರು ಆರೋಪಿಗಳನ್ನು ಹೆಬ್ಬಾಳ ಠಾಣೆ ಪೊಲೀಸರು ಬಂಧಿಸಿದ್ದಾರೆ. ಗೀತಾ, ಮಂಜುಳಾ, ವಿಜಯಲಕ್ಷ್ಮಿ, ಲೀಲಾವತಿ, ಹರೀಶ್, ವೆಂಕಟೇಶ ಬಂಧಿತ ಆರೋಪಿಗಳು.

ಕೆಲ ದಿನಗಳ ಹಿಂದೆ ಸಂತ್ರಸ್ತ ಯುವಕನಿಗೆ ಆರೋಪಿ ಮಂಜುಳ ಪರಿಚಿತರಾಗಿದ್ದಳು. ಪರಸ್ಪರ ಮೊಬೈಲ್ ನಂಬರ್ ಬದಲಾಯಿಸಿಕೊಂಡಿದ್ದರು. ಸಂತ್ರಸ್ತ ಯುವಕ “ತಾನು ವಧು ಹುಡುಕುತ್ತಿದ್ದು ಕನ್ಯೆ ಇದ್ದರೆ ಹೇಳಿ” ಎಂದು ಮಂಜುಳಗೆ ಹೇಳಿದ್ದರು. ಸಂತ್ರಸ್ತ ಯುವಕ ಜನವರಿ 20 ರಂದು ಮಂಜುಳಾಗೆ ಕರೆ ಮಾಡಿ ವಿಚಾರಿಸಿದಾಗ, ಹೆಬ್ಬಾಳದ ತನ್ನ ಸ್ನೇಹಿತೆ ಮನೆಗೆ ಹೋದರೆ ಕನ್ಯೆ ತೋರಿಸುವುದಾಗಿ ಹೇಳಿದ್ದಳು.
ಅದರಂತೆ ಮಂಜುಳ ಸ್ನೇಹಿತೆ ವಿಜಯಲಕ್ಷ್ಮಿ ಮನೆಗೆ ಸಂತ್ರಸ್ತ ಯುವಕ ಹೋಗಿದ್ದನು. ಮನೆಯಲ್ಲಿ ಲೀಲಾವತಿ ಎಂಬ ಯುವತಿಯನ್ನು ಯುವಕನಿಗೆ ವಿಜಯಲಕ್ಷ್ಮಿ ಪರಿಚಯ ಮಾಡಿಸಿದ್ದಾಳೆ. “ಟೀ ತಯಾರಿಸುತ್ತಿರು ಬರುತ್ತೇನೆ” ಎಂದು ಹೇಳಿ, ಯುವಕನಿಂದ ಹಣ ಪಡೆದು ವಿಜಯಲಕ್ಷ್ಮಿ ಮನೆಯಿಂದ ತೆರಳಿದ್ದಾಳೆ.
ಮನೆಯಲ್ಲಿ ಒಂಟಿಯಾಗಿದ್ದ ಸಂತ್ರಸ್ತ ಯುವಕ ಮತ್ತು ಲೀಲಾವತಿ ಇಬ್ಬರೇ ಇದ್ದಾರೆ. ಈ ವೇಳೆ ಪೊಲೀಸರ ಸೋಗಿನಲ್ಲಿ ಗೀತಾ, ಹರೀಶ ಮತ್ತು ವೆಂಕಟೇಶ ಬಂದಿದ್ದಾರೆ. ಮನೆಯಲ್ಲಿ ವೈಶ್ಯಾವಾಟಿಕೆ ನಡೆಸುತ್ತಿದ್ದೀರಾ? ಇಬ್ಬರನ್ನೂ ಬಂಧಿಸಿ ಜೈಲಿಗೆ ಕಳುಹಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಇದರಿಂದ ಹೆದರಿದ ಸಂತ್ರಸ್ತ ಯುವಕ, ಆರೋಪಿಗಳಿಗೆ ಪೋನ್ ಪೇ ಮೂಲಕ 50 ಸಾವಿರ ಹಣ ಕಳುಹಿಸಿದ್ದಾನೆ.
ಬಳಿಕ, ತಾನು ಮೋಸ ಹೋಗಿದ್ದೇನೆ ಎಂದು ತಿಳಿದ ಸಂತ್ರಸ್ತ ಯುವ, ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ದೂರು ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರು ಜನ ಆರೋಪಿಗಳನ್ನ ಬಂಧಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!