ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು..!!!

ದೇಶದ ಅತ್ಯಂತ ಮೇಧಾವಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎರಡು ಬಾರಿ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಯೋಜನೆಗಳು ಇಂದಿಗೂ ಮುಂದುವರೆದಿವೆ. ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಮನಮೋಹನ್ ಸಿಂಗ್ ತಂದಿದ್ದಾರೆ.
ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿಯೂ ದೇಶದಲ್ಲಿ ಅರ್ಥಕ್ರಾಂತಿಯನ್ನೇ ಸೃಷ್ಟಿಸಿದ್ದರು. ದಿವಾಳಿಯಂಚಿನಲ್ಲಿದ್ದ ದೇಶವನ್ನು ಜಗ್ಗತ್ತಿನಲ್ಲಿ ಎರಡನೇ ಅಭಿವೃದ್ಧಿ ಹೊಂದಿತ್ತಿರುವ ರಾಷ್ಟ್ರವನ್ನಾಗಿಸಿದ ಕೀರ್ತಿ ಮನಮೋಹನ್ ಸಿಂಗ್ಗೆ ಸಲ್ಲುತ್ತದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು.

ದೇಶದ ರೂಪಾಯಿಗೆ ಸಹಿ ಹಾಕುವ ಹಕ್ಕು ಕೇವಲ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ಗೆ ಮಾತ್ರ ಇರುತ್ತದೆ. ಭಾರತದಲ್ಲಿ ಪ್ರಚಲಿತದಲ್ಲಿರುವ ಪ್ರತಿಯೊಂದು ನೋಟುಗಳ ಮೇಲೆ ರಿಸರ್ವ್ ಬ್ಯಾಂಕ್ ಗವರ್ನರ್ ಅವರ ಸಹಿ ಇದೆ. ಹಾಗಿದ್ದರೆ.

ಮನಮೋಹನ್ ಸಿಂಗ್ ಪ್ರಧಾನಿ, ಹಣಕಾಸು ಸಚಿವರಾಗುವ ಮುನ್ನ ಮನಮೋಹನ್ ಸಿಂಗ್ ಅವರು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅಂದರೆ 1982ರಲ್ಲಿ ಆರ್ಬಿಐ ಗವರ್ನರ್ ಹುದ್ದೆಗೇರಿದರು. 1982 ರಿಂದ 1985ರವರೆಗೆ ಮನಹೋನ್ ಸಿಂಗ್ ಆರ್ಬಿಐ ಗವರ್ನರ್ ಆಗಿದ್ದರು. ಈ ಕಾಲಾವಧಿಯಲ್ಲಿ ಮುದ್ರಿತವಾದ ನೋಟುಗಳ ಮೇಲೆ ಮನಹೋನ್ ಸಿಂಗ್ ಸಹಿ ಇದೆ.
ಮನಮೋಹನ್ ಸಿಂಗ್ ಪಂಜಾಬ್ ವಿವಿಗೆ ಪ್ರವೇಶ ಪಡೆದು, 1952 ಮತ್ತು 1954ರಲ್ಲಿ ಕ್ರಮವಾಗಿ ಅರ್ಥಶಾಸ್ತ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ಗೆ ತೆರಳಿ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವಿ ಪಡೆದರು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಡಿಫಿಲ್ (ಡಾಕ್ಟರ್ ಆಫ್ ಫಿಲಾಸಫಿ)ಯನ್ನು ಪೂರೈಸಿದರು.

ಮನಮೋಹನ್ ಸಿಂಗ್ 1990 ರಿಂದ 1991 ರವರೆಗೆ ಪ್ರಧಾನ ಮಂತ್ರಿಗಳ ಹಣಕಾಸು ಸಲಹೆಗಾರರಾಗಿದ್ದರು. 1991ರಲ್ಲಿ ಹಣಕಾಸು ಸಚಿವರಾಗುವವರೆಗೆ ಯುಜಿಸಿಗೆ ಮೂರು ತಿಂಗಳ ಕಾಲ ಅಧ್ಯಕ್ಷರಾಗಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!