ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು..!!!

ದೇಶದ ಅತ್ಯಂತ ಮೇಧಾವಿ ಪ್ರಧಾನಿ, ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರ ಕಂಬನಿ ಮಿಡಿಯುತ್ತಿದೆ. ಎರಡು ಬಾರಿ ದೇಶದ ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಯೋಜನೆಗಳು ಇಂದಿಗೂ ಮುಂದುವರೆದಿವೆ. ತಮ್ಮ ಆಡಳಿತಾವಧಿಯಲ್ಲಿ ಅನೇಕ ಸುಧಾರಣೆಗಳನ್ನು ಮನಮೋಹನ್ ಸಿಂಗ್ ತಂದಿದ್ದಾರೆ.
ಮನಮೋಹನ್ ಸಿಂಗ್ ಆರ್ಥಿಕ ಸಚಿವರಾಗಿಯೂ ದೇಶದಲ್ಲಿ ಅರ್ಥಕ್ರಾಂತಿಯನ್ನೇ ಸೃಷ್ಟಿಸಿದ್ದರು. ದಿವಾಳಿಯಂಚಿನಲ್ಲಿದ್ದ ದೇಶವನ್ನು ಜಗ್ಗತ್ತಿನಲ್ಲಿ ಎರಡನೇ ಅಭಿವೃದ್ಧಿ ಹೊಂದಿತ್ತಿರುವ ರಾಷ್ಟ್ರವನ್ನಾಗಿಸಿದ ಕೀರ್ತಿ ಮನಮೋಹನ್ ಸಿಂಗ್ಗೆ ಸಲ್ಲುತ್ತದೆ. ಪ್ರಧಾನಿಯಾಗಿದ್ದ ಮನಮೋಹನ್ ಸಿಂಗ್ ಅವರ ಸಹಿ ಹಳೇಯ ನೋಟುಗಳಲ್ಲಿ ಕಾಣಬಹುದು.

ದೇಶದ ರೂಪಾಯಿಗೆ ಸಹಿ ಹಾಕುವ ಹಕ್ಕು ಕೇವಲ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ಗೆ ಮಾತ್ರ ಇರುತ್ತದೆ. ಭಾರತದಲ್ಲಿ ಪ್ರಚಲಿತದಲ್ಲಿರುವ ಪ್ರತಿಯೊಂದು ನೋಟುಗಳ ಮೇಲೆ ರಿಸರ್ವ್ ಬ್ಯಾಂಕ್ ಗವರ್ನರ್ ಅವರ ಸಹಿ ಇದೆ. ಹಾಗಿದ್ದರೆ.

ಮನಮೋಹನ್ ಸಿಂಗ್ ಪ್ರಧಾನಿ, ಹಣಕಾಸು ಸಚಿವರಾಗುವ ಮುನ್ನ ಮನಮೋಹನ್ ಸಿಂಗ್ ಅವರು ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ಅಂದರೆ 1982ರಲ್ಲಿ ಆರ್ಬಿಐ ಗವರ್ನರ್ ಹುದ್ದೆಗೇರಿದರು. 1982 ರಿಂದ 1985ರವರೆಗೆ ಮನಹೋನ್ ಸಿಂಗ್ ಆರ್ಬಿಐ ಗವರ್ನರ್ ಆಗಿದ್ದರು. ಈ ಕಾಲಾವಧಿಯಲ್ಲಿ ಮುದ್ರಿತವಾದ ನೋಟುಗಳ ಮೇಲೆ ಮನಹೋನ್ ಸಿಂಗ್ ಸಹಿ ಇದೆ.
ಮನಮೋಹನ್ ಸಿಂಗ್ ಪಂಜಾಬ್ ವಿವಿಗೆ ಪ್ರವೇಶ ಪಡೆದು, 1952 ಮತ್ತು 1954ರಲ್ಲಿ ಕ್ರಮವಾಗಿ ಅರ್ಥಶಾಸ್ತ್ರದಲ್ಲಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದುಕೊಂಡರು. ಬಳಿಕ ಉನ್ನತ ವ್ಯಾಸಂಗಕ್ಕಾಗಿ ಬ್ರಿಟನ್ಗೆ ತೆರಳಿ ಕೇಂಬ್ರಿಜ್ ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರ ಪದವಿ ಪಡೆದರು. ಆಕ್ಸ್ಫರ್ಡ್ ವಿಶ್ವವಿದ್ಯಾಲಯದಲ್ಲಿ ಡಿಫಿಲ್ (ಡಾಕ್ಟರ್ ಆಫ್ ಫಿಲಾಸಫಿ)ಯನ್ನು ಪೂರೈಸಿದರು.

ಮನಮೋಹನ್ ಸಿಂಗ್ 1990 ರಿಂದ 1991 ರವರೆಗೆ ಪ್ರಧಾನ ಮಂತ್ರಿಗಳ ಹಣಕಾಸು ಸಲಹೆಗಾರರಾಗಿದ್ದರು. 1991ರಲ್ಲಿ ಹಣಕಾಸು ಸಚಿವರಾಗುವವರೆಗೆ ಯುಜಿಸಿಗೆ ಮೂರು ತಿಂಗಳ ಕಾಲ ಅಧ್ಯಕ್ಷರಾಗಿದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!