ಮಹಿಳೆಗೆ ಬೆದರಿಕೆಯೊಡ್ಡಿದ : ಒಬ್ಬ ಪೊಲೀಸ್ ಕಾನ್‌ಸ್ಟೇಬಲ್, ಇಬ್ಬರು ಮೈಸೂರು ಮೂಲದ ಪತ್ರಕರ್ತರು ಸೇರಿ ಮೂವರ ಬಂಧನ.

ಮೈಸೂರು :- ಮಹಿಳೆ ಮನೆಗೆ ಅಕ್ರಮವಾಗಿ ಪ್ರವೇಶಿಸಿ ಆಕೆಯ ವಿರುದ್ಧ ವೇಶ್ಯಾವಾಟಿಕೆ ಆರೋಪ ಹೊರಸಿ ಆಕೆಗೆ ಬೆದರಿಕೆಯೊಡ್ಡಿ ಚಿನ್ನದ ಓಲೆ ಕಸಿದುಕೊಂಡ ಆರೋಪದ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಎಂದು ಹೇಳಿಕೊಂಡಿದ್ದ ವ್ಯಕ್ತಿ ಹಾಗೂ ಇಬ್ಬರು ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
ಕೆ.ಎಚ್.ಹನುಮಂತರಾಜ್, ಪತ್ರಕರ್ತರಾದ ರವಿಚಂದ್ರ ಹಂಚ್ಯಾ ಹಾಗೂ ಮಂಜುನಾಥ್ ಬಂಧಿತರು. ಮತ್ತೊಬ್ಬ ಪತ್ರಕರ್ತ ಸೂರ್ಯವರ್ಧನ್, ಯೋಗೇಶ್ ಹಾಗೂ ದೊರೆಸ್ವಾಮಿ ತಲೆಮರೆಸಿಕೊಂಡಿದ್ದಾರೆ.
ಬಂಧಿತರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದ್ದು, ಪ್ರಕರಣದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವ ಮೂವರ ಬಂಧನಕ್ಕೆ ಹೆಬ್ಬಾಳ ಠಾಣೆ ಪೊಲೀಸರು ಬಲೆ ಬೀಸಿದ್ದಾರೆ.
ಮಾಧ್ಯಮದ ಹೆಸರೇಳಿಕೊಂಡ ಈ ಆರೋಪಿಗಳು ಡಿ.೨೮ ರಂದು ಸಂಜೆ ನಗರದ ಹೆಬ್ಬಾಳಿನ ಮಹಿಳೆಯ ಮನೆಗೆ ತೆರಳಿ, ನೀವು ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದೀರಿ ಎಂದು ಬೆದರಿಸಿ, ನಮ್ಮೊಂದಿಗೆ ಪೊಲೀಸರೂ ಬಂದಿದ್ದಾರೆ. ನಿಮ್ಮ ವಿರುದ್ಧ ಪ್ರಕರಣ ದಾಖಲಿಸುತ್ತೇವೆ ಎಂಬುದಾಗಿ ಭಯ ಹುಟ್ಟಿಸಿದರು ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
ನಾನು ವೇಶ್ಯಾವಾಟಿಕೆ ನಡೆಸುತ್ತಿಲ್ಲ ಎಂದರೂ ಒಪ್ಪದ ಅವರು, ಈ ವಿಚಾರವನ್ನು ಎಲ್ಲಿಯೂ ಹೇಳದಿರಲು ೧ ಲಕ್ಷ ರೂ. ಹಣ ನೀಡಬೇಕು ಎಂದು ಬೇಡಿಕೆ ಒಡ್ಡಿದರು. ನನ್ನ ಬಳಿ ಅಷ್ಟು ಹಣವಿಲ್ಲವೆಂದಾಗ, ಆ ಮಹಿಳೆಯ ಕಿವಿಯ ಚಿನ್ನದ ಓಲೆಯನ್ನು ಬಲವಂತದಿಂದ ಬಿಚ್ಚಿಸಿ ಪಡೆದರು ಎಂದು ದೂರಿನಲ್ಲಿ ತಿಳಿಸಲಾಗಿದೆ.
ನಂತರ ಹಣವನ್ನು ಆದಷ್ಟು ಬೇಗ ನೀಡುವಂತೆ ತಿಳಿಸಿ ಅವರು ಅಲ್ಲಿಂದ ತೆರಳಿದ್ದರು. ಘಟನೆಯ ಬಳಿಕ ದೂರು ನೀಡಿದ್ದು, ಸಮಸ್ಯೆಯಾಗುತ್ತದೆ ಎಂಬ ಕಾರಣಕ್ಕೆ ಕಿವಿಯೋಲೆ ನೀಡಿರುವ ವಿಚಾರವನ್ನು ಮನೆಯಲ್ಲಿ ತಿಳಿಸಿರಲಿಲ್ಲ. ಅವರನ್ನು ಕರೆದು ಎಚ್ಚರಿಕೆ ನೀಡುವಂತೆ ಪೊಲೀಸರಲ್ಲಿ ಮನವಿ ಮಾಡಿದ್ದೆ. ನಂತರ ಆರೋಪಿಗಳು ಓಲೆ ವಾಪಸ್ ನೀಡಿ, ೧ ಲಕ್ಷ ರೂ. ನೀಡುವಂತೆ ಬೆದರಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದು, ತಲೆಮರೆಸಿಕೊಂಡಿರುವವರ ಪತ್ತೆಗೆ ಮುಂದಾಗಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!