ಮಾಜಿ ಸಚಿವ ರೇವಣ್ಣ ನಷ್ಟದ ಆತಂಕವನ್ನು ವ್ಯಕ್ತಪಡಿಸಿದ್ದಾರೆ…

ರಾಜ್ಯ ಸರ್ಕಾರವು ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳಿ (ಕೆಎಂಎಫ್)ನಿಂದ ಹಾಲು ಮತ್ತು ಮೊಸರಿನ ದರವನ್ನು ಲೀಟರಿಗೆ 4 ರೂ. ಹೆಚ್ಚಿಸಿದ್ದು, ಸರ್ಕಾರದ ಈ ನಿರ್ಧಾರದಿಂದ ಸಂಸ್ಥೆಗೆ ಭಾರಿ ನಷ್ಟವಾಗಲಿದ್ದು, ಇದಕ್ಕೆ ಯಾರು ಜವಬ್ಧಾರರು? ಒಕ್ಕೂಟದಲ್ಲಿ ಹಣ ಮುಗಿಯುವರೆಗೂ ಸಿ.ಎಂ ಆದೇಶ ಪಾಲನೆ ಮಾಡಲಾಗುವುದು ಎಂದು ಹಮುಲ್ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರಶ್ನೆ ಮಾಡಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ನಗರದ ಡೈರಿ ವೃತ್ತದ ಬಳಿ ಇರುವ ಹಾಸನ ಹಾಲು ಒಕ್ಕೂಟದ ಕಚೇರಿ ಸಭಾಂಗಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿ, ಹಾಲು ಹೆಚ್ಚಿಸಿ ಎಂದು ನಿಮಗೆ ಯಾರು ಕೇಳಿದವರು? ನಮ್ಮ ಒಕ್ಕೂಟದಲ್ಲಿ ಪ್ರತಿದಿನ 12,58,000 ಲೀಟರ್ ಹಾಲು ಉತ್ಪಾದನೆಯಾಗುತ್ತದೆ. ಆದರೆ, ಕೇವಲ 1,98,000ಲೀಟರ್ ಹಾಲು ಮಾತ್ರ ಮಾರಾಟವಾಗುತ್ತಿದೆ. ಇದರ ಜೊತೆಗೆ 1,2೦,೦೦೦ ಲೀಟರ್ ಮೊಸರು ಮಾರಾಟವಾಗುತ್ತಿದೆ. ಆದರೆ ಸಂಗ್ರಹವಾಗುವ ಹಾಲಿನಲ್ಲಿ ಪ್ರತಿದಿನ 9,40,000 ಲೀಟರ್ ಹಾಲು ಉಳಿಕೆಯಾಗುತ್ತದೆ. ಮಳೆಗಾಲದಲ್ಲಿ ಈ ಪ್ರಮಾಣ 12,೦೦,೦೦೦ ಲೀಟರ್ಗೆ ಏರಿಕೆಯಾಗುತ್ತದೆ. ಇದರಿಂದ ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟವಾಗುತ್ತದೆ ಎಂದರು. ಹಾಸನ ಹಾಲು ಒಕ್ಕೂಟದಲ್ಲಿ ಐದುವರೆಯಿಂದ ಆರು ಕೋಟಿ ರೂ ಹಣವಿದ್ದು, ಈ ದುಡ್ಡು ಮುಗಿಯುವವರೆಗೂ ಮುಖ್ಯಮಂತ್ರಿ ಆದೇಶ ಪಾಲಿಸುತ್ತೇವೆ. ಹಾಲಿನ ಧರದ ವಸ್ತು ಸ್ಥಿತಿ ಏನಿದೆ ನಮ್ಮ ಬೋರ್ಡಿನಲ್ಲಿ ಸಭೆ ಮಾಡಿ ತೀರ್ಮಾನ ಮಾಡಲಾಗಿದೆ. ಈ ಬಗಗೆ ಸರ್ಕಾರಕ್ಕೆ ಪತ್ರ ಬರೆದು ಇಲ್ಲಿನ ಒಕ್ಕೂಟದ ಸ್ಥಿತಿ ತಿಳಿಸಲಾಗಿದೆ.

ಮುಖ್ಯಮಂತ್ರಿಗಳ ಮಾತಿಗೆ ಬೆಲೆ ಕೊಟ್ಟು 4ರೂ. ಹೆಚ್ಚಳ ಮಾಡಲಾಗಿದೆ. ಆದರೆ ಈ ಹೆಚ್ಚಳದಿಂದ ಉಂಟಾಗುವ ನಷ್ಟಕ್ಕೆ ಯಾರು ಜವಾಬ್ದಾರರು ಎಂದು ಅವರು ಪ್ರಶ್ನಿಸಿದರು. 3 ರೂ. ಹೆಚ್ಚಿಸಿ, 2.5 ರೂ. ರೈತರಿಗೆ ನೀಡೋಣ ಎಂದು ಮುಖ್ಯಮಂತ್ರಿಗಳು ಹೇಳಿದ್ದರು. ಆದರೆ, 4 ರೂ. ಹೆಚ್ಚಳ ಮಾಡಿದವರು ಯಾರು?” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು. ಪ್ರತಿದಿನ 36 ಲಕ್ಷ ರೂ. ನಷ್ಟವಾಗುತ್ತಿದ್ದು, ಈ ಬಗ್ಗೆ ಜಿಲ್ಲಾ ಮಂತ್ರಿಗಳು ಸೇರಿದಂತೆ, ರಾಜ್ಯಮಟ್ಟದ ಅಧಿಕಾರಿಗಳ ಗಮನಕ್ಕೂ ತರಲಾಗುವುದು. ಈ ರೀತಿ ಮುಂದುವರೆದರೆ ಸಂಸ್ಥೆಯನ್ನು ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗುತ್ತದೆ ಎಂದು ಎಚ್ಚರಿಸಿದರು.

ಈ ಸಂಸ್ಥೆಯನ್ನು ಹಾಳು ಮಾಡಬೇಡಿ. ಸರ್ಕಾರ ರೈತರಿಗೆ ಕೇವಲ 2 ತಿಂಗಳು ಹೆಚ್ಚುವರಿ ಹಣ ನೀಡುತ್ತಾರೆ, ನಂತರ ನಿಲ್ಲಿಸುತ್ತಾರೆ. ಮೈಸೂರು 5 ಕೋಟಿ, ಮಂಡ್ಯ 7 ಕೋಟಿ, ಶಿವಮೊಗ್ಗ 4.5 ಕೋಟಿ ನಷ್ಟ ಅನುಭವಿಸುತ್ತಿವೆ ಎಂದು ಅಂಕಿ ಅಂಶ ನೀಡಿದರು. ಒಂದು ಸಂಸ್ಥೆಯನ್ನು ಕಟ್ಟುವುದು ಸುಲಭವಲ್ಲ, ಕಟ್ಟಿರುವುದನ್ನು ಉಳಿಸಿಕೊಳ್ಳಬೇಕು ಎಂದು ಅವರು ಈ ಆತಂಕವನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇನೆ ಎಂದು ಹೇಳಿದರು. ನಷ್ಟವಾದರೆ ಯಾರು ಜವಾಬ್ದಾರಿ ಹೊರುತ್ತಾರೆ? ಕೆಎಂಎಫ್ ಅಥವಾ ಸರ್ಕಾರ ನಷ್ಟವನ್ನು ಭರಿಸುತ್ತವೆಯೇ?” ಎಂದು ಅವರು ಪ್ರಶ್ನಿಸಿದರು.ಕೆಲವರು ಮುಖ್ಯಮಂತ್ರಿಗಳ ಹೇಳಿಕೆಯನ್ನು ಉಲ್ಲೇಖಿಸಿ 4 ರೂಪಾಯಿ ದರ ಹೆಚ್ಚಿಸಲು ಒತ್ತಡ ಹೇರಿದ್ದಾರೆ. ತಿಂಗಳಿಗೆ 9 ಕೋಟಿ ರೂಪಾಯಿ ನಷ್ಟದಲ್ಲಿ ಹಾಲು ಮಾರಾಟ ಮಾಡುವುದು ಸಾಧ್ಯವೇ? ಈ ವಸ್ತುಸ್ಥಿತಿಯನ್ನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ಹೇಳಿದರು. ಈ ಬಗ್ಗೆ ಮುಖ್ಯಮಂತ್ರಿ, ಸರ್ಕಾರದ ಕಾರ್ಯದರ್ಶಿ ಹಾಗೂ ಕೆಎಂಎಫ್ಗೆ ಎರಡು ಬಾರಿ ಪತ್ರ ಬರೆದು ತಮ್ಮ ಆತಂಕವನ್ನು ವ್ಯಕ್ತಪಡಿಸಿದ್ದೇನೆ ಎಂದು ಮಾಹಿತಿ ನೀಡಿದರು. ಈ ಎಲ್ಲಾ ವಿಷಯಗಳನ್ನು ಆಧರಿಸಿ ಅಂಕಿ ಅಂಶಗಳ ಜೊತೆಗೆ ಮಾಹಿತಿಯನ್ನು ನೀಡಿದರು.

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!