ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್ ಕಿರೀಟ ಮುಡಿಗೇರಿಸಿಕೊಂಡ ಮದ್ದೂರಿನ ಸೊಸೆ ಡಾ. ಪ್ರಿಯಾ ಗೋಸ್ವಾಮಿ.

ನವದೆಹಲಿ :- ಮಂಡ್ಯ ಜಿಲ್ಲೆ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಮಿಸೆಸ್ ಇಂಡಿಯಾ ಆಫ್ ನೇಷನ್-2024 ಎಂಚಾಟಿಂಗ್ ವಿಭಾಗದ ಕಿರೀಟವನ್ನು ಗೆದ್ದಿದ್ದಾರೆ. ಪಶು ವೈದ್ಯೆಯಾಗಿರುವ ಇವರು ಭಾರತೀಯ ಸೇನೆಯ ಕರ್ನಲ್ ಸಂಜೀತ್ ಅವರ ಪತ್ನಿ, ಇತ್ತೀಚೆಗೆ ನವದೆಹಲಿಯಲ್ಲಿ ಮದುವೆಯಾದ ಸ್ತ್ರೀಯರಿಗಾಗಿ ನಡೆದ ಸೌಂದರ್ಯ ಸ್ಪರ್ಧೆ ಮಿಸೆಸ್ ಇಂಡಿಯಾ ಪ್ರೈಡ್ ಆಫ್ ನೇಷನ್- 2024 ಕಿರೀಟವು ಕನ್ನಡತಿ ಡಾ.ಪ್ರಿಯಾ ಗೋಸ್ವಾಮಿಗೆ ಒಲಿದು ಬಂದಿದೆ.
ನವದೆಹಲಿಯಲ್ಲಿ ಐದು ದಿನಗಳು ನಡೆದ ಅಂತಿಮ ಸುತ್ತಿನಲ್ಲಿ ಕರ್ನಾ ಟಕದ ಮದ್ದೂರಿನ ಸೊಸೆ ಡಾ.ಪ್ರಿಯಾ ಗೋಸ್ವಾಮಿ ಅವರು ಎಂಚಾಟಿಂಗ್ ವಿಭಾಗದ ಕಿರೀಟ ಗೆದ್ದು ಬೀಗಿದ್ದಾರೆ. ಜೊತೆಗೆ ಅದೇ ವೇದಿಕೆಯಲ್ಲಿ ಸೋಷಿ ಯಲ್ ಇನ್ನುಯೆನ್ಸರ್ ಗೌರವಕ್ಕೂ ಪಾತ್ರ ರಾಗಿದ್ದಾರೆ. ವೃತ್ತಿಯಿಂದ ಪಶುವೈದ್ಯರಾದ ಡಾ ಪ್ರಿಯಾ ಗೋಸ್ವಾಮಿ, ಮೂಲತಃ ಪಂಜಾಬಿಯಾದರೂ ಗೋವಾದಲ್ಲಿ ಬೆಳೆ ದವರು. ಕಳೆದ ಎರಡು ದಶಕಗಳಿಂದ ಮದ್ದೂರಿನ ನಿವಾಸಿಯಾಗಿ ಕನ್ನಡತಿಯಾಗಿ ದ್ದಾರೆ.
ಭಾರತೀಯ ಸೇನೆಯಲ್ಲಿರುವ ಇವರ ಪತಿ ಕರ್ನಲ್ ಸಂಜೀತ್ ಮಂಡ್ಯ ಜಿಲ್ಲೆಯ ಮದ್ದೂರಿನವರು. ಮದ್ದೂರಿನ ಎಚ್.ಕೆ. ವೀರಣ್ಣಗೌಡ ಕಾಲೇಜಿನ ನಿವೃತ್ತ ಕನ್ನಡ ಪ್ರಾಧ್ಯಾಪಕ ಪ್ರೊ.ಬಿ.ಸಿದ್ದೇಗೌಡ ಅವರ ಪುತ್ರರಾದ ಕರ್ನಲ್ ಸಂಜೀತ್, ಪ್ರಸ್ತುತ ಉತ್ತರಖಾಂಡ್‌ನಲ್ಲಿ ಭಾರತೀಯ ಸೇನೆಯ ಕುದುರೆ ತರಬೇತಿ ವಿಭಾಗದ ಡೆಪ್ಯೂಟಿ ಕಮಾಂಡೆಂಟ್ ಆಗಿದ್ದಾರೆ. ಪಶುವೈದ್ಯರಾಗಿರುವ ಡಾ.ಪ್ರಿಯಾ
ಕೂಡ ಭಾರತೀಯ ಸೇನೆಯ ಕೆಲವು ಕಾರ್ಯಗಳಲ್ಲಿ ತೊಡಗಿಸಿಕೊಂಡಿ ದ್ದಾರೆ. 16 ವರ್ಷದ ಮಗಳು ಧ್ರುವಿ ಸಂಜಿತ್ ಹಾಗೂ 9 ವರ್ಷದ ಮಗ ಶೌರ್ಯಗೌಡ, ಮಾವ ಸಿದ್ದೇಗೌಡ, ಅತ್ತೆ ಸುಮಿತ್ರಮ್ಮ ಅವರ ಸಹಕಾರ ಹಾಗೂ ಪತಿ ಕರ್ನಲ್ ಸಂಜಿತ್, ನಾದಿನಿ ಸುಪ್ರೀತಾ ಅವರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣ ಎಂದು ಡಾ.ಪ್ರಿಯಾ ಗೋಸ್ವಾಮಿ ಸಂತಸ ಹಂಚಿಕೊಂಡಿ ದ್ದಾರೆ. ಈ ಕಾರ್ಯಕ್ರಮದ ನಿರ್ದೇಶಕ ರಾದ ಭಾರ್ಕಾ ನಂಗಿಯಾ ಮತ್ತು ಅಭಿಷೇಕ್ ಅವರ ಸಲಹೆಗಳೇ ಗೆಲುವಿಗೆ ದಾರಿ ತೋರಿಸಿದವು ಎಂದು ಸ್ಮರಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!