ಮುಂಗಾರು ಮಳೆಗೆ ಮೈತುಂಬಿ ಹರಿಯುತ್ತಿವೆ ಕೊಡಗಿನ ಜಲಪಾತಗಳು….

ಕೊಡಗು ಜಿಲ್ಲೆಯಲ್ಲಿ ಈ ವರ್ಷ ಮುಂಗಾರು ಮಳೆ ಅತಿ ಬೇಗ ಆರಂಭವಾಗಿದೆ. ಇದರಿಂದ ಜಿಲ್ಲೆಯ ಎಲ್ಲಾ ಜಲಪಾತಗಳು ಮೈದುಂಬಿ ಹರಿಯುತ್ತಿವೆ. ಪ್ರವಾಸಿಗರು ಈ ಅದ್ಭುತ ನೈಸರ್ಗಿಕ ದೃಶ್ಯವನ್ನು ಕಣ್ತುಂಬಿಕೊಳ್ಳಲು ಧಾವಿಸುತ್ತಿದ್ದಾರೆ. ಆದರೆ, ದುಬಾರೆಯಲ್ಲಿ ನದಿ ದಾಟಲು ನಿರ್ಬಂಧ ಹೇರಲಾಗಿದೆ. ಮಳೆಯಿಂದಾಗಿ ಕೆಲವು ಅನಾನುಕೂಲಗಳೂ ಇವೆ. ಆದರೂ, ಪ್ರವಾಸಿಗರು ಸಂತೋಷದಿಂದ ಕೊಡಗಿನ ಸೌಂದರ್ಯವನ್ನು ಆಸ್ವಾದಿಸುತ್ತಿದ್ದಾರೆ.

ಕೊಡಗು ಜಿಲ್ಲೆಯಲ್ಲಿ ಕಳೆದ 15-20 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿತ್ತು. ಇದರಿಂದ ಅವಾಂತರಗಳು ಸೃಷ್ಟಿಯಾಗಿದ್ದವು. ಈ ನಡುವೆಯೇ ನಿರಂತರ ಮಳೆಯಿಂದ ಜಲಪಾತಗಳು ಮೈದುಂಬಿ ಹರಿಯುತ್ತಿದೆ. ಮೈದುಂಬಿ ಹರಿಯುತ್ತಿರು ಜಲಪಾತಗಳನ್ನು ವೀಕ್ಷಿಸಲು ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಹಾಗಿದ್ದರೆ ಯಾವೆಲ್ಲ ಜಲಪಾತಗಳು ಧುಮ್ಮುಕ್ಕುತ್ತಿವೆ? ಇಲ್ಲಿದೆ ವಿವರ. ಇನ್ನು ಪ್ರವಾಸಿಗರು ಪ್ರವಾಸಿ ತಾಣಗಳಿಗೆ ಭೇಟಿ ನೀಡಿದಾಗ ಮುನ್ನ ಸರ್ಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಿ. ರಾಜ್ಯಾದ್ಯಂತ ಸುರಿಯುತ್ತಿರುವ ಮುಂಗಾರು ಮಳೆ ಸಾಕಷ್ಟು ಅವಾಂತರಗಳನ್ನು ಸೃಷ್ಟಿಸಿದೆ. ಈ ಮಳೆ ಬಹಳಷ್ಟು ಜನರಿಗೆ ಸಂಕಷ್ಟಗಳನ್ನು ತಂದೊಡ್ಡಿದೆ. ಹಾಗೇ, ಮಳೆಯಿಂದ ಸಾಕಷ್ಟು ಅನುಕೂಲವೂ ಆಗಿದೆ. ಮಳೆಗಾಲ ಆರಂಭವಾಗಿದ್ದರಿಂದ ಪ್ರವಾಸಿ ಜಿಲ್ಲೆ ಕೊಡಗಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ತೆರಳುತ್ತಿದ್ದಾರೆ. ಇಲ್ಲಿನ ಪ್ರಕೃತಿ ಸೌಂದರ್ಯವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ.ಕೊಡಗು ಜಿಲ್ಲೆಯ ಪ್ರಸಿದ್ಧ ಅಬ್ಬಿ ಜಲಪಾತ ಧುಮ್ಮುಕ್ಕುತ್ತಿದೆ. ಸಾಮಾನ್ಯವಾಗಿ ಮೇ ತಿಂಗಳಲ್ಲಿ ಕೊಡಗಿನ ಯಾವುದೇ ಜಲಪಾತಗಳಲ್ಲಿ ಇಷ್ಟೊಂದು ಪ್ರಮಾಣದಲ್ಲಿ ನೀರು ಇರಲ್ಲ. ಆದರೆ, ಈ ವರ್ಷ ಮುಂಗಾರು ಬೇಗನೆ ಆರಂಭವಾಗಿರುವುದರಿಂದ ಅಬ್ಬಿ ಜಲಪಾತ ಮೈದುಂಬಿ ಹರಿಯುತ್ತಿದೆ.

ಇದು ಪ್ರವಾಸಿಗರಿಗೆ ಇನ್ನಿಲ್ಲದ ಖುಷಿ ನೀಡಿದೆ. ಮಡಿಕೇರಿ ನಗರದ ವೀವ್ ಪಾಯಿಂಟ್ ರಾಜಸೀಟ್ನಲ್ಲೂ ಪ್ರವಾಸಿಗರ ದಂಡೇ ಹರಿದುಬರುತ್ತಿದೆ. ಜಿಜಟಿಪಿಟಿ ಮಳೆಯ ಮಧ್ಯೆಯೂ ಪ್ರವಾಸಿಗರು ರಾಜಾಸೀಟ್ನತ್ತ ಆಗಮಿಸುತ್ತಿದ್ದಾರೆ. ಆಗ್ಗಾಗೆ ಮಳೆ-ಬಿಸಿಲು ಬರುತ್ತಿರುವುದರಿಂದ ಜನರು ಕೊಡೆ, ರೈನ್ ಕೋಟ್ ಧರಿಸಿಕೊಂಡು ಆಗಮಿಸುತ್ತಿದ್ದಾರೆ. ಇನ್ನು, ದುಬಾರೆಯಲ್ಲಿ ನದಿ ದಾಟಲು ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಹೀಗಾಗಿ ನದಿ ದಾಟಿ ಆನೆಗಳನ್ನು ನೋಡುವ ಆಸೆ ಕಮರಿ ಹೋಗಿದೆ. ಮಳೆಯ ಅಬ್ಬರದಿಂದ ಜಿಲ್ಲೆಯ ಮಲ್ಲಳ್ಳಿ, ಅಬ್ಬಿ, ಇರ್ಪು, ಚೇಲಾವರ ಜಲಪಾತಗಳು ಧುಮ್ಮುಕ್ಕುತ್ತಿವೆ. ಸಾಮಾನ್ಯವಾಗಿ ಜುಲೈ ಆಗಸ್ಟ್ ತಿಂಗಳಲ್ಲಿ ಸಿಗುವ ಮಳೆಗಾಲದ ಅನುಭವ ಈ ಬಾರಿ ಪ್ರವಾಸಿಗರಿಗೆ ಮೇ ತಿಂಗಳಲ್ಲೇ ಸಿಗುತ್ತಿದೆ. ಹೀಗಾಗಿ ಜಿಲ್ಲೆಗೆ ಆಗಮಿಸಿರುವ ಪ್ರವಾಸಿಗರು ಖುಷಿಯಿಂದಲೇ ಒಳ್ಳೆಯ ಅನುಭವ ಪಡೆದು ಹಿಂದಿರುಗುತ್ತಿದ್ದಾರೆ.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!