ಮೈಸೂರು ಹುಡುಗರ Reels ಗೆ ಫಿದಾ ಆದ ಧ್ರುವ, ಪ್ರೇಮ್

ಧ್ರುವ ಸರ್ಜಾ ಹಾಗೂ ಪ್ರೇಮ್ ಕಾಂಬಿನೇಷನ್ನಲ್ಲಿ ‘ಕೆಡಿ’ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದ ಬಗ್ಗೆ ಫ್ಯಾನ್ಸ್ ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಪ್ರೇಮ್ ಸಿನಿಮಾಗಳಲ್ಲಿ ಹೆಚ್ಚು ಹೈಲೈಟ್ ಆಗೋದು ಹಾಡುಗಳು. 2024ರ ಅಂತ್ಯದಲ್ಲಿ ‘ಕೆಡಿ’ ಚಿತ್ರದ ‘ಶಿವ ಶಿವ..’ ಹಾಡನ್ನು ರಿಲೀಸ್ ಮಾಡಲಾಯಿತು. ಈ ಹಾಡು ಕೇಳುಗರಿಗೆ ಇಷ್ಟ ಆಗಿದೆ. ಈ ಹಾಡಿಗೆ ಸಾಕಷ್ಟು ಮಂದಿ ರೀಲ್ಸ್ ಮಾಡುತ್ತಿದ್ದಾರೆ. ಈಗ ಮೈಸೂರಿನ ಹುಡುಗರು ಮಾಡಿದ ರೀಲ್ಸ್ ನಿರ್ದೇಶಕ ಪ್ರೇಮ್ ಹಾಗೂ ನಟ ಧ್ರುವ ಅವರಿಗೆ ಸಖತ್ ಇಷ್ಟ ಆಗಿದೆ. ಅವರು ಸೋಶಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಬರೆದುಕೊಂಡಿದ್ದಾರೆ.

ಮೈಸೂರಿನವರಾದ ಸಿದ್ದಾರ್ಥ್, ಅಭಿರಥ, ಹರ್ಷ, ಮಂಜು, ಸಂಜಯ್ ‘ಶಿವ ಶಿವ..’ ಹಾಡಿಗೆ ರೀಲ್ಸ್ ಮಾಡಿದ್ದಾರೆ. ಕೆಲವು ದಿನಗಳ ಹಿಂದೆ ಈ ವಿಡಿಯೋನ ಹಂಚಿಕೊಳ್ಳಲಾಗಿದ್ದು, ಅದು ಸಖತ್ ವೈರಲ್ ಆಗಿದೆ. ಈ ಹಾಡು 45 ಲಕ್ಷಕ್ಕೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಈ ರೀಲ್ಸ್ನ ಧ್ರುವ ಹಾಗೂ ಪ್ರೇಮ್ ಮೆಚ್ಚಿಕೊಂಡು ಹೊಗಳಿದ್ದಾರೆ.
ಈ ರೀಲ್ಸ್ಗೆ ಕಮೆಂಟ್ ಮಾಡಿರೋ ಧ್ರುವ ಸರ್ಜಾ, ‘ಫೆಂಟಾಸ್ಟಿಕ್, ಧನ್ಯವಾದಗಳು, ಜೈ ಹನುಮಾನ್’ ಎಂದಿದ್ದಾರೆ. ರೀಷ್ಮಾ ನಾಣಯ್ಯ ಅವರು ‘ಬೆಂಕಿ’ ಎಂದು ಕಮೆಂಟ್ ಮಾಡಿದ್ದಾರೆ. ಈ ರೀಲ್ಸ್ಗೆ ಈ ರೀತಿಯ ಹಲವು ಕಮೆಂಟ್ಗಳು ಬಂದಿವೆ. ಇನ್ನು ಪ್ರೇಮ್ ಅವರು ಇವರಿಗೆ ದೂರವಾಣಿ ಕರೆ ಮಾಡಿ ಭೇಟಿ ಮಾಡುವ ಆಶಯ ಹೊರಹಾಕಿದ್ದಾರೆ.

‘ನಿಮ್ಮ ವಿಡಿಯೋ ನೋಡಿದೆ. ಸಖತ್ ಆಗಿ ಮಾಡಿದ್ದೀರಾ. ಇನ್ನು ಕೆಲವೇ ದಿನಗಳಲ್ಲಿ ಕಾಲ್ ಮಾಡ್ತೀನಿ. ಭೇಟಿ ಮಾಡೋಣ. ವಿಡಿಯೋ ಉತ್ತಮವಾಗಿದೆ, ಧನ್ಯವಾದಗಳು’ ಎಂದು ಪ್ರೇಮ್ ಅವರು ರೀಲ್ಸ್ ಮಾಡಿದವರ ಜೊತೆ ಮಾತನಾಡಿದ್ದಾರೆ. ಅವರ ಮಾತನ್ನು ಕೇಳಿ ಸಖತ್ ಖುಷಿ ಆಗಿದೆ. ಆ ವಿಡಿಯೋನ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರೇಮ್ ಅವರ ನಿರ್ದೇಶನದಲ್ಲಿ ‘ಕೆಡಿ’ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದಲ್ಲಿ ಸಂಜಯ್ ದತ್, ಶಿಲ್ಪಾ ಶೆಟ್ಟಿ ಕೂಡ ನಟಿಸಿದ್ದಾರೆ. ‘ಶಿವ ಶಿವ..’ ಹಾಡಿಗೆ ಪ್ರೇಮ್ ಹಾಗೂ ಖೈಲಾಶ್ ಖೇರ್ ಧ್ವನಿ ಆಗಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ಚಿತ್ರಕ್ಕಿದೆ. ಈ ವರ್ಷ ಸಿನಿಮಾ ರಿಲೀಸ್ ಆಗಲಿದೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!