ಯಮನ ರೀತಿಯಲ್ಲಿ ಫುಟ್ಪಾತ್ ಗೆ ವಿಸಿಟ್ ಕೊಟ್ಟ ಸಿಂಹ….

ಸಾಮಾಜಿಕ ಜಾಲತಾಣದಲ್ಲಿ ದಿನನಿತ್ಯ ಒಂದಲ್ಲ ಒಂದು ವಿಡಿಯೋಗಳು ವೈರಲ್ ಆಗುತ್ತಿರುತ್ತದೆ. ಕೆಲವು ವಿಡಿಯೋಗಳನ್ನು ನೋಡಿದಾಗ ಎದೆಯಲ್ಲಿ ನಡುಕ ಉಂಟಾಗುತ್ತದೆ. ಆದರೆ ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲಿ ಸಿಂಹವೊಂದು ನಡೆದುಕೊಂಡು ಹೋಗಿದ್ದು ಈ ದೃಶ್ಯವು ಎಂತಹವರ ಎದೆಯನ್ನು ಝಲ್ ಎನ್ನುವಂತೆ ಮಾಡುತ್ತದೆ.. ಈ ವಿಡಿಯೋಗೆ ನೆಟ್ಟಿಗರು ಪ್ರತಿಕ್ರಿಯೆಗಳನ್ನು ನೀಡಿದ್ದು, ಈ ವ್ಯಕ್ತಿಯ ಅದೃಷ್ಟ ಚೆನ್ನಾಗಿದ್ದೀರಬೇಕು ಎಂದು ಇನ್ನು ನಾನಾ ರೀತಿಯ ವಿಭಿನ್ನ ಕಾಮೆಂಟ್‌ಗಳನ್ನು ಮಾಡಿದ್ದಾರೆ.

ಮನುಷ್ಯನ ಸ್ವಾರ್ಥದಿಂದ ಕಾಡು ಸಂಪೂರ್ಣವಾಗಿ ನಾಶವಾಗಿದೆ. ಈ ಕಾಡಿನ ವಿನಾಶದಿಂದ ಅರಣ್ಯದಲ್ಲಿನ ಪ್ರಾಣಿಗಳೆಲ್ಲಾ ಆಹಾರವನ್ನರಸುತ್ತಾ ನಾಡಿನ ಕಡೆಗೆ ಬರುವುದು ಹೊಸದೇನಲ್ಲ. ಹೀಗೆ ಆಹಾರವನ್ನರಸುತ್ತಾ ಬರುವ ಈ ಪ್ರಾಣಿಗಳು ಜನರು, ಶ್ವಾನ ಮತ್ತು ದನಕರುಗಳ ಮೇಲೆ ದಾಳಿ ಮಾಡುತ್ತವೆ. ಆದರೆ ಇದೀಗ ಎದೆ ಝಲ್ ಎನಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಪುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿಯೊಬ್ಬನ ಪಕ್ಕದಲ್ಲೇ ರಾಜಾರೋಷವಾಗಿ ಸಿಂಹಿಣಿಯೊಂದು ನಡೆದುಕೊಂಡು ಹೋಗಿದೆ. ಈ ಬಗ್ಗೆ ಅರಿವಿಲ್ಲದೇ ವ್ಯಕ್ತಿಯೂ ಗಾಢ ನಿದ್ರೆಯಲ್ಲಿ ಮುಳುಗಿದ್ದಾನೆ. ಈ ವಿಡಿಯೋವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈ ದೃಶ್ಯ ಕಂಡು ಬೆಚ್ಚಿ ಬಿದ್ದಿದ್ದಾರೆ.

ವೈರಲ್ ಆಗಿರುವ ಈ ವಿಡಿಯೋಗೆ ಹಲವಾರು ಬಳಕೆದಾರರು ನಾನಾ ರೀತಿಯ ಕಾಮೆಂಟ್ ಗಳನ್ನು ಮಾಡಿದ್ದಾರೆ. ಒಬ್ಬ ಬಳಕೆದಾರರು, ಇದು ಎಐನಿಂದ ರಚಿಸಲಾದ ವಿಡಿಯೋ ಎಂದಿದ್ದಾರೆ. ಮತ್ತೊಬ್ಬರು, ಆ ವ್ಯಕ್ತಿಯೂ ಈ ವಿಡಿಯೋ ನೋಡಿದರೆ ಇನ್ನು ಜನ್ಮದಲ್ಲಿಯೂ ಈ ಪುಟ್ ಪಾತ್ ನಲ್ಲಿ ಮಲಗುವ ಸಾಹಸಕ್ಕೆ ಕೈ ಹಾಕಲ್ಲ ಎಂದು ಕಾಮೆಂಟ್ ನಲ್ಲಿ ತಿಳಿಸಿದ್ದಾರೆ. ಇನ್ನೊಬ್ಬ ಬಳಕೆದಾರ, ಈ ಸ್ಥಳ ಗುಜರಾತ್ ಆಗಿರಬೇಕು, ಅಲ್ಲಿ ಇಂತಹ ದೃಶ್ಯಗಳು ಆಗಾಗ ಕಾಣಸಿಗುತ್ತದೆ ಎಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!