ಯುವಕರ ನೆಚ್ಚಿನ ಹಳ್ಳಿಕಾರ್ ತಳಿ “ಮೈಸೂರು ರಾಣಿ” ಇನ್ನಿಲ್ಲ!

ಮೈಸೂರು: ಮೈಸೂರು ರಾಣಿ ಅಂದ್ರೆ ರೇಸ್ ಗೆ ನಿಂತರೆ ಅದನ್ನಾ ಮೀರಿಸೋರೆ ಇರಲಿಲ್ಲ. ಮೈಸೂರಷ್ಟೇ ಅಲ್ಲ ಮಂಡ್ಯ, ತುಮಕೂರು, ಬೆಂಗಳೂರು, ಚಿಕ್ಕಮಗಳೂರು ಪಂದ್ಯದಲ್ಲೂ ಸೈ ಎನಿಸಿಕೊಂಡಿದ್ದ ಹಂಚ್ಯಾ ಗ್ರಾಮದ ಯುವಕರ ನೆಚ್ಚಿನ ಮೈಸೂರು ರಾಣಿ ಇನ್ನಿಲ್ಲ.

ಮೈಸೂರು ತಾಲ್ಲೂಕಿನ ಹಂಚ್ಯಾಗ್ರಾಮದ ಶ್ರೀಧರ್ ಗೌಡ ಅವರು ಸಾಕಿದ್ದ ರೇಸ್ ಹಸು ತಡರಾತ್ರಿ ಆಕಸ್ಮಿಕವಾಗಿ ಸಾವನಪ್ಪಿದೆ. ಜೋಡೆತ್ತಿನ ಗಾಡಿ ಓಟದಲ್ಲಿ ಇದುವರೆವಿಗೂ ಬರೋಬ್ಬರಿ 70 ಕ್ಕೂ ಹೆಚ್ಚು ರೇಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಮೈಸೂರು ರಾಣಿ ಖ್ಯಾತಿಯ ಹಸು ಮೈಸೂರಿನ ರೇಸ್ ಹುಡುಗರ ಮನಸ್ಸು ಗೆದ್ದ ರಾಣಿಯಾಗಿತ್ತು. ಜೋಡೆತ್ತಿನ ಗಾಡಿ ಸ್ಪರ್ಧೆ ಎಲ್ಲೇ ನಡೆದಿದ್ದರೂ ಅಲ್ಲಿ ಭಾಗವಹಿಸುತ್ತಿದ್ದ ಮೈಸೂರು ರಾಣಿ ನಿಧನಕ್ಕೆ ಇಡೀ ಗ್ರಾಮದ ಜನತೆ ಶೋಕ ವ್ಯಕ್ತಪಡಿಸಿದೆ.

ಹಳ್ಳಿಕಾರ್ ತಳಿ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಯುವಪಡೆ ಅದನ್ನು ಚಿಕ್ಕ ಕರುವಿನಿಂದಲೂ ಸಾಕಿ, ತರಬೇತಿ ನೀಡಿದ್ದರು. ಇದರ ಫಲವಾಗಿಯೇ 70 ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸತ್ತಲ್ಲದೆ, ಭಾಗವಹಿಸಿದ ಸ್ಪರ್ಧೆಗಳೆಲ್ಲದರಲ್ಲೂ ಪ್ರಥಮ ಅಥವಾ ದ್ವೀತಿಯ ಸ್ಥಾನ ಪಡೆದಿತ್ತು. ಮಾತ್ರವಲ್ಲದೆ 70 ಕ್ಕೂ ಹೆಚ್ಚು ಯುವಕರು ಹಾಗೂ ಹಿರಿಯರ ಪ್ರೀತಿಯ ರಾಣಿಯಾಗಿ ಇನ್ನಿಲ್ಲದಕ್ಕೆ ವಿವಿಧ ಗ್ರಾಮದ ಯುವಕರು ಸಂತಾಪ ವ್ಯಕ್ತಪಡಿಸಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!