ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ ಮಗುವಿನ ಜನ್ಮದ ಸಂತೋಷದ ಕುರಿತು ವಿವರಗಳಿವೆ. ದೀಪಿಕಾ ಅವರ ಜನ್ಮದಿನದ ಸಂದರ್ಭದಲ್ಲಿ ಈ ವಿಡಿಯೋಗಳು ಮತ್ತೆ ವೈರಲ್ ಆಗಿವೆ.
ದೀಪಿಕಾ ಹಾಗೂ ರಣವೀರ್ ಪ್ರೀತಿಸಿ ವಿವಾಹ ಆದವರು. ಒಂದೇ ಸಿನಿಮಾದಲ್ಲಿ ನಟಿಸಿದ ಇವರಿಗೆ ಸೆಟ್ನಲ್ಲೇ ಪ್ರೀತಿ ಮೂಡಿತು. ರಣವೀರ್ ಸಿಂಗ್ ಹಾಗೂ ದೀಪಿಕಾ ಈಗ ಪಾಲಕರೂ ಹೌದು. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ದೀಪಿಕಾ ಕಳೆದ ವರ್ಷ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ರಣವೀರ್ ಹಾಗೂ ದೀಪಿಕಾ ಪ್ರೀತಿ ಶುರುವಾಗಿದ್ದು ದಶಕಗಳ ಹಿಂದೆ. ಈಗ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ದೀಪಿಕಾ ಪಡುಕೋಣೆ ಅವರಿಗೆ ಇಂದು ಜನ್ಮದಿನದ ಸಂಭ್ರಮ. ಈ ವೇಳೆ ಅವರ ಹಳೆಯ ವಿಡಿಯೋಗಳು ವೈರಲ್ ಆಗುತ್ತಿವೆ.
ದೀಪಿಕಾ ಪಡುಕೋಣೆ ಅವರು ಕರ್ನಾಟಕದವರು. ಅವರಿಗೆ ಕನ್ನಡ ಬರುತ್ತದೆ. ಬೆಂಗಳೂರಲ್ಲಿ ದೀಪಿಕಾ ಶಿಕ್ಷಣ ಪಡೆದಿದ್ದರು. ಅವರು ನಟಿಸಿದ ಮೊದಲ ಸಿನಿಮಾ ‘ಐಶ್ವರ್ಯಾ’ ಕನ್ನಡದ್ದು. ಅವರಿಗೆ ಕನ್ನಡದ ಬಗ್ಗೆ ವಿಶೇಷ ಪ್ರೀತಿ ಇದೆ. ರಣವೀರ್ ಸಿಂಗ್ ಅವರದ್ದು ಪಂಜಾಬಿ ಕುಟುಂಬ. ಅವರು ಕೆಲವೊಮ್ಮೆ ಬೆಂಗಳೂರಿಗೆ ಬಂದ ಉದಾಹರಣೆ ಇದೆ. ಅವರಿಗೆ ಕನ್ನಡದ ಬರುವುದಿಲ್ಲ. ಅವರು ಈ ಮೊದಲು ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ ಮಾಡಿದ್ದರು ಅನ್ನೋದು ವಿಶೇಷ.
ರಣವೀರ್ ಸಿಂಗ್ ಅವರು ಅವಾರ್ಡ್ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಾ ಇರುತ್ತಾರೆ. ಅದೇ ರೀತಿ ಅವರು ಅವಾರ್ಡ್ ಕಾರ್ಯಕ್ರಮಕ್ಕೆ ತೆರಳಿದ್ದರು. ಅಲ್ಲಿ ಯಶ್ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಅವರ ಜೊತೆ ಇದ್ದಿದ್ದು, ಕನ್ನಡದ ಅಕುಲ್ ಬಾಲಾಜಿ. ಅವರು ಕನ್ನಡದ ಹಲವು ಶೋಗಳನ್ನು ನಡೆಸಿಕೊಟ್ಟಿದ್ದಾರೆ. ಆ ಶೋನ ಅಕುಲ್ ನಡೆಸಿಕೊಡುತ್ತಾ ಇದ್ದರು. ಈ ವೇಳೆ ರಣವೀರ್ ಸಿಂಗ್ಗೆ ಕನ್ನಡದಲ್ಲಿ ಪ್ರಪೋಸ್ ಮಾಡೋದನ್ನು ಹೇಗೆ ಎಂದು ಹೇಳಿಕೊಟ್ಟರು ಅಕುಲ್.
‘ದೀಪಿಕಾ, ಓ ನನ್ನ ದೀಪಿಕಾ’ ಎಂದರು ಅಕುಲ್. ರಣವೀರ್ ಸಿಂಗ್ಗೆ ತಪ್ಪಾಗಿ ಏನಾದರೂ ಹೇಳಿಕೊಟ್ಟರೆ ಎಂಬ ಭಯ ಅತಿಯಾಗಿ ಕಾಡಿತ್ತು. ಈ ಕಾರಣದಿಂದಲೇ ‘ನನಗೆ ಮನೆಗೆ ಹೋಗಬೇಕು, ನಾನು ಇದನ್ನು’ ಎಂದರು ರಣವೀರ್ ಸಿಂಗ್. ಆಗ, ಅಕುಲ್ ಅವರು ತಪ್ಪಾಗಿ ಏನನ್ನೂ ಹೇಳಿಕೊಡಲ್ಲ ಎಂದು ಪ್ರಾಮಿಸ್ ಮಾಡಿದರು. ಆ ಬಳಿಕ ‘ದೀಪಿಕಾ, ಓ ನನ್ನ ದೀಪಿಕಾ, ನೀನೆ ನನ್ನ ಜೀವನದ ದೀಪ’ ಎಂದು ಅಕುಲ್ ಹೇಳಿಕೊಟ್ಟರು. ದೀಪ ಎನ್ನುತ್ತಿದ್ದಂತೆ ‘ಯು ಆರ್ ದಿ ಲೈಟ್ ಆಫ್ ಮೈ ಲೈಫ್’ ಎಂದರು
ರಣವೀರ್ ಸಿಂಗ್ ..

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು