ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಶೂಟ್ ವೇಳೆ ಅರಣ್ಯಕ್ಕೆ ಹಾನಿ? ಗ್ರಾಮಸ್ಥರ ಆಕ್ರೋಶ .

ರಿಷಬ್ ಶೆಟ್ಟಿ ಅವರ ‘ಕಾಂತಾರ 2’ ಚಿತ್ರೀಕರಣದ ಸಂದರ್ಭದಲ್ಲಿ ಅರಣ್ಯ ಪ್ರದೇಶದಲ್ಲಿ ಬೆಂಕಿ ಹಚ್ಚಲಾಗಿದೆ ಎಂಬ ಆರೋಪದಿಂದಾಗಿ ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿತ್ರತಂಡದ ವಿರುದ್ಧ ಪ್ರತಿಭಟನೆಯ ಎಚ್ಚರಿಕೆಯನ್ನು ನೀಡಲಾಗಿದೆ. ಪರಿಸರ ಹಾನಿ ಹಾಗೂ ವನ್ಯಜೀವಿಗಳಿಗೆ ಉಂಟಾಗಬಹುದಾದ ಅಪಾಯದ ಬಗ್ಗೆ ಗ್ರಾಮಸ್ಥರು ಆತಂಕ ವ್ಯಕ್ತಪಡಿಸಿದ್ದಾರೆ.
‘ಕಾಂತಾರ’ ಸಿನಿಮಾ ಹಿಟ್ ಆದ ಬಳಿಕ ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಇದು ಚಿತ್ರದ ಪ್ರೀಕ್ವೆಲ್. ಈ ಸಿನಿಮಾದ ಶೂಟಿಂಗ್ ಕುಂದಾಪುರದ ಸುತ್ತಮುತ್ತ ಸಾಗುತ್ತಿದೆ. ಇದರಲ್ಲಿಯೂ ಮಣ್ಣಿನ ಕಥೆ ಹೇಳಲು ರಿಷಬ್ ಶೆಟ್ಟಿ ರೆಡಿ ಆಗಿದ್ದಾರೆ. ಹೀಗಿರುವಾಗಲೇ ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪ ತಂಡದ ಮೇಲೆ ಬಂದಿದೆ. ಸಿನಿಮಾ ತಂಡದ ವಿರುದ್ಧ ಪ್ರತಿಭಟನೆ ಮಾಡುವ ಎಚ್ಚರಿಕೆಯನ್ನು ಗ್ರಾಮಸ್ಥರು ನೀಡಿದ್ದಾರೆ.
‘ಕಾಂತಾರ’ ಯಶಸ್ಸಿನ ಬಳಿಕ ಹೊಂಬಾಳೆ ಫಿಲ್ಮ್ಸ್ ‘ಕಾಂತಾರ 2’ ಮಾಡುವ ಆಸಕ್ತಿ ತೋರಿಸಿತು. ರಿಷಬ್ ಶೆಟ್ಟಿ ಅವರು ಹೊಸ ಕಥೆಯೊಂದಿಗೆ ಎರಡನೇ ಪಾರ್ಟ್ ಮಾಡಲು ರೆಡಿ ಆಗಿದ್ದಾರೆ. ಚಿತ್ರದ ಶೂಟಿಂಗ್ ಹಾಗೂ ಅದರ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕುಂದಾಪುರದಲ್ಲೇ ನಡೆಯುತ್ತಿದೆ. ಈ ಕಾರಣಕ್ಕೆ ರಿಷಬ್ ಅವರು ತಮ್ಮ ಹುಟ್ಟೂರಿಗೆ ಶಿಫ್ಟ್ ಆಗಿದ್ದಾರೆ.
ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ಶೂಟಿಂಗ್ ನಡೆಸಲಾಗುತ್ತಿದೆ. ಜನವರಿ 2ರಿಂದ ಈ ಭಾಗದಲ್ಲಿ ಚಿತ್ರೀಕರಣ ಮಾಡಲಾಗುತ್ತಿದೆ. ಚಿತ್ರತಂಡ, ಶೂಟಿಂಗ್ಗಾಗಿ ಗೋಮಾಳ ಜಾಗಕ್ಕೆ ಪರವಾನಗಿ ಪಡೆದಿದೆ. ಆದರೆ, ಅರಣ್ಯ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿಮಾಡುತ್ತಿರುವ ಆರೋಪವನ್ನು ಗ್ರಾಮಸ್ಥರು ಮಾಡಿದ್ದು,
‘ಚಿತ್ರೀಕರಣಕ್ಕೆ ಯಾವೆಲ್ಲಾ ಪರವಾನಿಗೆ ನೀಡಿದ್ದಾರೆ ಎಂಬ ಮಾಹಿತಿ ಕೊಡಬೇಕು. ಅರಣ್ಯ, ಕಂದಾಯ ಇಲಾಖೆಯವರು ಮಾಹಿತಿ ಬಹಿರಂಗಪಡಿಸಬೇಕು’ ಎಂದು ಆಗ್ರಹಿಸಿದ್ದಾರೆ. ಸದ್ಯ ಕಾಡಿನಲ್ಲಿ ಬೆಂಕಿ ಹಚ್ಚಿದ್ದರಿಂದ ಕಾಡುಪ್ರಾಣಿಗಳು ಜನವಸತಿ ಪ್ರದೇಶಕ್ಕೆ ಬರುತ್ತಿವೆ ಎನ್ನಲಾಗಿದೆ. ವನ್ಯಜೀವಿಗಳಿರುವ ಪ್ರದೇಶದಲ್ಲಿ ಚಿತ್ರೀಕರಣ ನಡೆಸಬಾರದು ಎಂಬುದು ಗ್ರಾಮಸ್ಥರ ಆಗ್ರಹ. ‘ಕೂಡಲೇ ಶೂಟಿಂಗ್ ಸ್ಥಗಿತಗೊಳಿಸಿ ಪರಿಸರ ಉಳಿಸಿ. ಇಲ್ಲವಾದರೆ ಡಿಸಿ ಕಚೇರಿ ಮುಂದೆ ಧರಣಿ ನಡೆಸುತ್ತೇವೆ’ ಎಂದು ಗ್ರಾಮಸ್ಥರ ಎಚ್ಚರಿಕೆ ನೀಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!