ರೈತರು ಜಾಗೃತರಾದರೆ ಅಪಾಯ ಕಡಿಮೆ. ಶೋಷಣೆ ಮೆಟ್ಟಿ ನಿಲ್ಲಬಹುದು : ರಾಜ್ಯಾಧ್ಯಕ್ಷ ಶಾಂತಕುಮಾರ್.

ಇಂದು ಕೆರಗಳ್ಳಿಯಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟದ ಘಟಕ ತೆಂಗಿನ ಗಿಡ ನೆಡುವ ಮೂಲಕ ಉದ್ಘಾಟಿಸಿದ ರಾಜ್ಯಾಧ್ಯಕ್ಷ ರೈತರತ್ನ ಕುರುಬುರ್ ಶಾಂತಕುಮಾರ್ ಮಾತನಾಡುತ್ತ ರೈತ ಕೃಷಿಯಲ್ಲಿ ಜೂಜಾಟ ಆಡುತ್ತಿದ್ದಾನೆ ಪ್ರಕೃತಿ ಮುನಿದಾಗ ಜೂಜಾಟದಲ್ಲಿ ಸೋಲುತ್ತಿದ್ದಾನೆ ಎಂದು ತಿಳಿಸಿದರು.

ಕಳೆದ ವರ್ಷ ಶುಂಠಿ ಬೆಲೆ 12 ಸಾವಿರ ಇತ್ತು ಈಗ 1ಸಾವಿರ ರೂಗೆ ಇಳಿದಿದೆ. ರೈತರ ಒತ್ತಾಯಕ್ಕೆ ಈಗ ರಾಜ್ಯ ಸರ್ಕಾರ 7,000 ರೂಗೆ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ಕೇಂದ್ರಕ್ಕೆ ವರದಿ ಸಲ್ಲಿಸುತ್ತಿದೆ ರೈತರು ದಳ್ಳಾಳಿಗೆಗೆ ಮಾರಾಟ ಮಾಡದೆ ಸ್ವಲ್ಪ ದಿನ ಕಾಯುವಂತಾಗಬೇಕು ಇಂದು ಮಧ್ಯವರ್ತಿಗಳು ದಲ್ಲಾಳಿಗಳು ಬಂಡವಾಳ ಶಾಹಿಗಳು. ಭೂ ಮಾಫಿಯಾದವರು ರೈತರನ್ನ ಒಕ್ಕಲಿಬ್ಬಿಸುವ ಕಾರ್ಯದಲ್ಲಿ ಮುಂದಾಗುತ್ತಿದ್ದಾರೆ. ಸರ್ಕಾರದ ಇಬ್ಬಗೆಯ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿವೆ. ತೊಗರಿ ಬೆಳೆಗೆ ಹೆಚ್ಚುವರಿ 500ರೂ ಪ್ರೋತ್ಸಾಹ ಧನ ನೀಡಿದ ರಾಜ್ಯ ಸರ್ಕಾರ ರಾಜ್ಯದಲ್ಲಿ 20 ಲಕ್ಷ ರೈತರು ಭತ್ತ ಬೆಳೆಯುತ್ತಿದ್ದರು ರಾಜ್ಯ ಸರ್ಕಾರದ ನಿರ್ಲಕ್ಷ ಧೋರಣೆಯಿಂದ ಖರೀದಿ ಕೇಂದ್ರಗಳು ಆರಂಭವಾಗದೆ ಹೆಚ್ಚುವರಿ ಪ್ರೋತ್ಸಾದನ ನೀಡದೇ ಇದ್ದ ಕಾರಣ ಭತ್ತ ಬೆಳೆದ ರೈತರು ಎಂ ಎಸ್ ಪಿ ಗಿಂತ ಕಡಿಮೆ ಬೆಲೆಗೆ ಬತ್ತ ಮಾರಾಟ ಮಾಡಿ ನಷ್ಟ ಅನುಭವಿಸುವಂತಾಯಿತು. ಇಂತಹ ಇಬ್ಬಂದಿ ನೀತಿಗಳು ರೈತರನ್ನ ಸಂಕಷ್ಟಕ್ಕೆ ತಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬರಡನಪುರ ನಾಗರಾಜ್ ಮಾತನಾಡಿ ದೆಹಲಿ ರೈತರ ಹೋರಾಟ ಸರ್ಕಾರಕ್ಕೆ ಎಚ್ಚರಿಕೆಯ ಸಂದೇಶ ನೀಡಿದೆ. ಭೂ ಮಾಫಿಯಾದವರು ರೈತರ ಜಮೀನು ಖರೀದಿಸಿ ವಂಚನೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಇದಕ್ಕೆ ಕಡಿವಾಣ ಹಾಕಲು ನಮ್ಮ ಸಂಘಟನೆ ಕಾರ್ಯಕ್ರಮ ರೂಪಿಸುತ್ತದೆ ಎಂದು ತಿಳಿಸಿದರು.
ಕೇರಗಳ್ಳಿ ಘಟಕ ಅಧ್ಯಕ್ಷ ಸತೀಶ್ ರವರು ಮಾತನಾಡಿ ರಾಜ್ಯ ಸರ್ಕಾರ ಹಾಲು ಉತ್ಪಾದಕರ ಪ್ರೂತ್ಸಹ ಧನ 5 ರೂ ಬಿಡುಗಡೆಗೆ ಒತ್ತಾಯಿಸಿದರು. ತಾಲೂಕ ಅಧ್ಯಕ್ಷ ಪೈಲ್ವಾನ್ ವೆಂಕಟೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು

ಸಿಎಂ ಸಿದ್ದರಾಮಯ್ಯ ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿದ್ದಾರೆ


ಉಪಾಧ್ಯಕ್ಷ ವಾಜಮಂಗಲ ಮಹದೇವ್. ನೀಲಕಂಠಪ್ಪ. ಕೇರಗಹಳ್ಳಿಘಟಕದ ಗೌರವ ಅಧ್ಯಕ್ಷ ನಾಗರಾಜು.ಶಿವಕುಮಾರ.ಬಾಲು. ವಿಜೇಯೆಂದ್ರ. ಮಹದೇವಸ್ವಾಮಿ ವರಕೂಡ ನಾಗೇಶ. ಮಂಜುನಾಥ. ಉಪಾಧ್ಯಕ್ಷರು ಬಾಲು ಆರ್, ಉಪಾಧ್ಯಕ್ಷರು ಶಿವಕುಮಾರ್. ಬಿ ಸಂದೀಪ್ ಸಿ ಕಾರ್ಯದರ್ಶಿ, ಅಭಿಷೇಕ್ ಎಂ ಖಜಾಂಚಿ, ಮಂಜುನಾಥ್ ಸಂಘಟನಾ ಕಾರ್ಯದರ್ಶಿ ಹಾಗೂ ಗ್ರಾಮದ ಯಜಮಾನರು ಬಸವರಾಜ್, ಬಸವಗೌಡ,ಶಿವಪ್ಪ, ಮಲ್ಲೇಶ, ಬಸವರಾಜು, ದೊಳೇಗೌಡ್ರು, ನಾಗಣ್ಣ ಮುಂತಾದವರು ಇದ್ದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಕೇಂದ್ರ ಸಚಿವ ಸಂಪುಟ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಪುನರ್‌ರಚನೆ: ಫಡ್ನವೀಸ್ ಸೇರಿದಂತೆ ನಾಲ್ವರು ಸಿಎಂಗಳಿಗೆ ಉನ್ನತ ಸ್ಥಾನ ಸಾಧ್ಯತೆ

ಮುಂಬರುವ 2027-28ರ ರಾಜ್ಯ ವಿಧಾನಸಭಾ ಚುನಾವಣೆಗಳು ಹಾಗೂ 2029ರ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೇಂದ್ರ ಸಚಿವ ಸಂಪುಟ ಮತ್ತು ಬಿಜೆಪಿಯ 12 ಸದಸ್ಯರ ಸಂಸದೀಯ ಮಂಡಳಿಯನ್ನು ಶೀಘ್ರದಲ್ಲೇ ಪುನರ್‌ರಚಿಸಲು ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಈ ಉನ್ನತ ಮಟ್ಟದ ಬದಲಾವಣೆಯಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!