ರೈಲ್ವೆ ಇಲಾಖೆಯ ಪರೀಕ್ಷೆಗೆ ಜನಿವಾರ ನಿರ್ಬಂಧ ವಿವಾದಕ್ಕೆ ಕೊನೆಗೂ ತೆರೆ ಎಳೆದ ಸೋಮಣ್ಣ….

ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ದೆಹಲಿಯಿಂದ ಸುದ್ದಿಗೊಷ್ಠಿ ನಡೆಸಿ, ವಿವಾದಕ್ಕೆ ತೆರೆ ಎಳೆದಿದ್ದಾರೆ.ಇತ್ತೀಚಗಷ್ಟೆ ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿಚಾರ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿತ್ತು. ಸರ್ಕಾರದ ವಿರುದ್ಧ ಹಿಂದೂ ಪರ ಸಂಘಟನೆಗಳು ಮತ್ತು ಬ್ರಾಹ್ಮಣ ಮಹಾಸಂಘಗಳು ಆಕ್ರೋಶ ವ್ಯಕ್ತಪಡಿಸಿದ್ದವು. ಇದರ ಬೆನ್ನಲ್ಲೇ ರೇಲ್ವೆ ಇಲಾಖೆಯ ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸ್ಪಷ್ಟನೆ ನೀಡಿದ್ದಾರೆ. ಈ ವಿಷಯದ ಬಗ್ಗೆ ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಇಲಾಖೆ ಸಚಿವ ಅಶ್ವಿನಿ ವೈಷ್ಣವ್ ಅವರೊಂದಿಗೆ ಮತ್ತು ರೈಲ್ವೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಈ ಗೊಂದಲ ನಿವಾರಿಸಲಾಗಿದೆ ಎಂದಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ ಅವರು, ಏಪ್ರಿಲ್ 28, 29 ಮತ್ತು 30 ರಂದು ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆ ನಡೆಯುತ್ತದೆ. ಅಭ್ಯರ್ಥಿಗಳು ಜನಿವಾರ, ಮಂಗಳಸೂತ್ರ ತೆಗೆದು ಪರೀಕ್ಷೆ ಬರೆಯಬೇಕೆಂಬ ವಿಷಯವನ್ನು ನಿಯಮದಲ್ಲಿ ಉಲ್ಲೇಖಿಸಲಾಗಿದೆಯೆಂಬ ದೂರುಗಳು ಬಂದಿವೆ. ಈ ಬಗ್ಗೆ ಸರಿಪಡಿಸುವಂತೆ ಸಂಸದರು, ಶಾಸಕರು ಮನವಿ ಮಾಡಿರುತ್ತಾರೆ. ಬ್ರಾಹ್ಮಣ ಮಹಾಸಭಾ, ವಿವಿಧ ಸಂಘಟನೆಗಳು ಸಹ ನನ್ನ ಗಮನ ಸೆಳೆದಿವೆ ಎಂದು ತಿಳಿಸಿದರು. ಹೀಗಾಗಿ, ಈ ಬಗ್ಗೆ ಅಶ್ವಿನಿ ವೈಷ್ಣವ್, ಅಧಿಕಾರಿಗಳ ಜತೆ ಚರ್ಚಿಸಿ ಗೊಂದಲ ನಿವಾರಿಸಲಾಗಿದೆ. ಜನಿವಾರ, ಮಂಗಳಸೂತ್ರ ಧರಿಸಿ ಪರೀಕ್ಷೆ ಬರೆಯಲು ಬಂದರೆ ತೊಂದರೆ ನೀಡಬಾರದೆಂದು ಸೂಚನೆ ನೀಡಲಾಗಿದೆ. ಇತರೆ ನಿಯಮ ಪಾಲಿಸಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಲು ಸೂಚನೆ ನೀಡಲಾಗಿದೆ. ಅಭ್ಯರ್ಥಿಗಳು ಸಹ ನಿಯಮಾನುಸಾರ ಪರೀಕ್ಷೆ ಬರೆಯಲು ಮನವಿ ಮಾಡುತ್ತೇನೆ. ಅಭ್ಯರ್ಥಿಗಳು ಗೊಂದಲಕ್ಕೀಡಾಗಬಾರದೆಂದು ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!