ರೌಡಿ ಶೀಟರ್ ದೊರೆಸ್ವಾಮಿ ಹ* ಪ್ರಕರಣದಲ್ಲಿ ಎಂಟು ಮಂದಿ ಬಂಧನ; ಪ್ರೇಯಸಿ ಪೊಲೀಸ್ ವಶಕ್ಕೆ.

ಮೈಸೂರು:- ರೌಡಿ ಶೀಟರ್ ದೊರೆಸ್ವಾಮಿ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಮಂದಿಯನ್ನು ಬಂಧಿಸಿರುವ ಪೊಲೀಸರು, ಘಟನೆ ವೇಳೆ ದೊರೆಸ್ವಾಮಿ ಜೊತೆಯಲ್ಲಿದ್ದ ಮಹಿಳೆಯ ವಿಚಾರಣೆ ನಡೆಸಿದ್ದಾರೆ.
ದೊರೆಸ್ವಾಮಿ ಕೊಲೆಯಾದ ವೇಳೆ ಜೊತೆಯಲ್ಲಿದ್ದ ಬೆಂಗಳೂರು ಮೂಲದ ಶ್ವೇತಾಳನ್ನು ಮಂಗಳವಾರ ವಶಕ್ಕೆ ಪಡೆದು, ವಿಚಾರಣೆ ನಡೆಸಲಾಗಿದೆ. ಆಕೆಯ ಮೊಬೈಲ್ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆಯ ಲಾಗಿದ್ದು, ಬುಧವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ. ಘಟನೆ ಸಂಬಂಧ ನಿನ್ನೆ ಮತ್ತು ಮೊನ್ನೆ ಒಟ್ಟು 8 ಜನ ಆರೋಪಿಗಳನ್ನು ಬಂಧಿಸಲಾಗಿದೆ.
ಮೈಸೂರು ತಾಲೂಕು, ಜಯಪುರ ಹೋಬಳಿ, ಅನಗನಹಳ್ಳಿ ಸಮೀಪದ ತೋಟದ ಮನೆಯಲ್ಲಿ ಕೆಲ ದಿನಗಳ ಹಿಂದೆ ದೊರೆಸ್ವಾಮಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿತ್ತು. ಆ ರಾತ್ರಿ ಆತನ ಜೊತೆಯಲ್ಲಿದ್ದ ಪ್ರೇಯಸಿ ಬೆಂಗ ಳೂರು ಮೂಲದ ಶ್ವೇತಾ ನಾಪತ್ತೆಯಾಗಿ ದ್ದಳು. ಆದ್ದರಿಂದ ಶ್ವೇತಾ ಮೇಲೆ ಅನುಮಾನ ವ್ಯಕ್ತವಾಗಿತ್ತು. ಆಕೆಯೇ ಕೊಲೆ ಮಾಡಿ, ತಲೆಮರೆಸಿಕೊಂಡಿರುವುದಾಗಿ ದೊರೆಸ್ವಾಮಿ ಪತ್ನಿಯ ಆರೋಪಿಸಿದ್ದರು. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಮೇಲಧಿಕಾರಿಗಳ ನಿರ್ದೇಶನದಂತೆ ವೃತ್ತ ನಿರೀಕ್ಷಕ ಶಿವನಂಜಶೆಟ್ಟಿ ನೇತೃತ್ವದಲ್ಲಿ ತನಿಖೆ ನಡೆಸಿದ ತಂಡ, ಹಳೇ ದ್ವೇಷಕ್ಕೆ ಹತ್ಯೆ ಮಾಡಲಾಗಿದೆ ಎಂಬುದನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿತ್ತು. ಇದೀಗ ಹತ್ಯೆ ನಡೆದ ವೇಳೆ ಜೊತೆಯಲ್ಲಿದ್ದರು ಎನ್ನಲಾದ ಶ್ವೇತಾಳ ವಿಚಾರಣೆ ನಡೆಸ ಲಾಗಿದ್ದು, ಈಕೆ ಭಾಗಿಯಾಗಿದ್ದಾಳೋ, ಇಲ್ಲವೋ ಎನ್ನುವುದು ಮುಂದಿನ ತನಿಖೆಯಲ್ಲಿ ತಿಳಿಯಲಿದೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!