ವರನ ಕೆಲಸ, ಕುಟುಂಬದ ಹಿನ್ನಲೆ ಜೊತೆಗೆ, ಡಿಜಿಟಲ್ ಹಿನ್ನಲೆಯನ್ನೂ ನೋಡಿ ಎಂದ ಯುವತಿ….

ಈಗಿನ ಕಾಲದಲ್ಲಿ ಯುವತಿಯರು ಮದುವೆ ವಿಷಯದಲ್ಲಿ ಎಷ್ಟು ಜಾಗರೂಕರಾಗಿದ್ದರೂ ಸಾಲದು. ಸುಳ್ಳು ಹೇಳಿ ಮದುವೆ ಮಾಡಿಕೊಂಡು ಮೋಸ ಮಾಡುವ ಸುದ್ದಿಗಳನ್ನು ನೀವು ಆಗಾಗ ಕೇಳಿರುತ್ತೀರಿ. ಆದರೆ ಇಲ್ಲೊಬ್ಬ ಯುವತಿಯೂ ತನ್ನ ಬುದ್ಧಿವಂತಿಕೆಯಿಂದ ಅಪಾಯಕಾರಿ ಪುರುಷನಿಂದ ಹೇಗೆ ತಪ್ಪಿಸಿಕೊಂಡೆ ಹಾಗೂ ವೈವಾಹಿಕ ಜೀವನಕ್ಕೆ ಕಾಲಿಡುವ ಮುನ್ನ ವರನ ಡಿಜಿಟಲ್ ಹಿನ್ನಲೆಯ ಬಗ್ಗೆ ತಿಳಿದುಕೊಳ್ಳುವುದು ಎಷ್ಟು ಮುಖ್ಯ ಎನ್ನುವುದನ್ನು ಒತ್ತಿ ಹೇಳಿದ್ದಾರೆ. ಯುವತಿಯ ಪೋಸ್ಟ್ವೊಂದು ವೈರಲ್ ಆಗುತ್ತಿದ್ದಂತೆ ಬಳಕೆದಾರರು ಈಕೆ ನೀಡಿದ ಸಲಹೆಯನ್ನು ಸ್ವೀಕರಿಸಿದ್ದಾರೆ.

ಈಗಿನ ಕಾಲದಲ್ಲಿ ಯಾರು ಹೇಗೆ ಇರುತ್ತಾರೆ ಎಂದು ಹೇಳುವುದೇ ಕಷ್ಟ. ಎದುರುಗಡೆಯಿಂದ ನೋಡಲು ಒಳ್ಳೆಯವರಂತೆ ಕಂಡರೂ ಕೆಟ್ಟ ಗುಣನಡತೆಯನ್ನು ಹೊಂದಿರಬಹುದು. ಅದರಲ್ಲಿಯೂ ಮದುವೆಯಾಗುವ ಮುನ್ನ ಹುಡುಗನೇ ಆಗಿರಲಿ, ಹುಡುಗಿಯೇ ಇರಲಿ, ಜೀವನ ಸಂಗಾತಿಯಾಗಿ ಆಯ್ಕೆ ಮಾಡಿಕೊಳ್ಳುವ ವ್ಯಕ್ತಿಯ ಕುಟುಂಬ ಹಾಗೂ ಉದ್ಯೋಗದ ಹಿನ್ನಲೆಯನ್ನು ಪರಿಶೀಲಿಸುವುದು ಮಾತ್ರವಲ್ಲ, ಡಿಜಿಟಲ್ ಹಿನ್ನಲೆಯನ್ನು ಗಮನಿಸಬೇಕಂತೆ. ಇಲ್ಲದಿದ್ದರೆ ಗೊತ್ತಿಲ್ಲದೇ ಯಾಮಾರುವುದು ಗ್ಯಾರಂಟಿಯಂತೆ. ಈ ಬಗ್ಗೆ 22 ವರ್ಷದ ಯುವತಿಯೊಬ್ಬಳು ಮಾಡಿದ ಪೋಸ್ಟ್ನಲ್ಲಿ ಉಲ್ಲೇಖಿಸಿದ್ದಾಳೆ. ತಾನು ಹೇಗೆ ಅಪಾಯಕಾರಿ ಮದುವೆಯಿಂದ ಪಾರಾದೆ ಎನ್ನುವ ಬಗ್ಗೆ ವಿವರಿಸಿದ್ದು ಈ ಪೋಸ್ಟ್ವೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ರೆಡ್ಡಿಟ್ ಖಾತೆಯಲ್ಲಿ ಯುವತಿಯೂ ಶೇರ್ ಮಾಡಿದ ಪೋಸ್ಟ್ನಲ್ಲಿ, 2025ರಲ್ಲಿ ಅರೇಂಜ್ಡ್ ಮ್ಯಾರೇಜ್: ಹುಡುಗಿಯರು ಡಿಜಿಟಲ್ ಹಿನ್ನೆಲೆ ಪರಿಶೀಲನೆ ಮಾಡಬೇಕಾದ ಅಗತ್ಯ’ ಎಂದು ಶೀರ್ಷಿಕೆಯಲ್ಲಿ ಬರೆದುಕೊಂಡಿದ್ದಾಳೆ. ಈ ಪೋಸ್ಟ್ನಲ್ಲಿ, ನಾನು ಎಲ್ಲವನ್ನೂ ಪರಿಶೀಲಿಸಿದೆ. ಕೆಲವು ಉತ್ತಮ ಸ್ಥಾನದಲ್ಲಿರುವ ಪುರುಷರು ಎಷ್ಟು ಅಪಾಯಕಾರಿ ಎಂಬುದು ನನಗೆ ಚೆನ್ನಾಗಿ ಅರಿವಾಯಿತು. ಸಾಮಾನ್ಯವಾಗಿ ಹೆಚ್ಚಿನ ಹುಡುಗಿಯರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಕಲಿಯುವುದಕ್ಕಾಗಿ ನಾನು ಈ ವಿಚಾರವನ್ನು ಇಲ್ಲಿ ಹಂಚಿಕೊಳ್ಳುತ್ತಿದ್ದೇನೆ ಎಂದು ಆಕೆ ಬರೆದುಕೊಂಡಿದ್ದಾಳೆ.

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!