ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್; ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್‌ನಲ್ಲಿ ಸಿಲುಕಿದ್ದ ಜನ.

ಬೆಂಗಳೂರು ಸೇರಿದಂತೆ ದೊಡ್ಡ ದೊಡ್ಡ ನಗರಗಳಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇವೆ. ಬೆಳಗ್ಗೆ ಕೆಲಸ ಹೋಗುವ ಮತ್ತು ಸಂಜೆ ಕೆಲಸದಿಂದ ವಾಪಸ್ ಆಗುವಂತಹ ಪೀಕ್ ಟೈಮ್ಗಳಲ್ಲಿ ತುಸು ಹೆಚ್ಚೇ ಸಂಚಾರ ದಟ್ಟಣೆ ಇರುತ್ತದೆ. ಈ ಟ್ರಾಫಿಕ್ ಜಾಮ್ನಲ್ಲಿ ಗಂಟೆಗಟ್ಟಲೆ ಸಿಲುಕಿ ನಗರ ಪ್ರದೇಶಗಳಲ್ಲಿನ ಜನ ಪ್ರತಿನಿತ್ಯ ಒದ್ದಾಡುತ್ತಿರುತ್ತಾರೆ. ಸಾಮಾನ್ಯವಾಗಿ ಹೆಚ್ಚೆಂದರೆ ಒಂದರಿಂದ ಎರಡು ಗಂಟೆಗಳ ಕಾಲ ಟ್ರಾಫಿಕ್ ಜಾಮ್ ಆಗುತ್ತವೆ. ಆದ್ರೆ ಇಲ್ಲೊಂದು ಕಡೆ ಬರೋಬ್ಬರಿ 12 ದಿನಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿ, ಜನ ಹೈರಾಣಾಗಿ ಹೋಗಿದ್ದರು. ಅಷ್ಟಕ್ಕೂ ಜಗತ್ತಿನ ಅತಿ ದೊಡ್ಡ ಟ್ರಾಫಿಕ್ ಜಾಮ್ ಆಗಿದ್ದೆಲ್ಲಿ? ಕಾರಣವೇನು? ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.
ವಿಶ್ವದ ಅತಿ ಉದ್ದನೆಯ ಟ್ರಾಫಿಕ್ ಜಾಮ್:
2010 ರ ಆಗಸ್ಟ್ 14 ರಂದು ಚೀನಾದ ರಾಜಧಾನಿ ಬೀಜಿಂಗ್ನಲ್ಲಿ ವಿಶ್ವದ ಅತಿ ಉದ್ದನೆಯ ಟ್ರಾಪಿಕ್ ಜಾಮ್ ಉಂಟಾಗಿತ್ತು. 12 ದಿನಗಳ ಕಾಲ ಈ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಜನ ಹೈರಾಣಾಗಿ ಹೋಗಿದ್ದರು. ಬೀಜಿಂಗ್ನ ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ ವೇ (ಚೀನಾ ರಾಷ್ಟ್ರೀಯ ಹೆದ್ದಾರಿ 110) ನಲ್ಲಿ ಈ ಉದ್ದನೆಯ ಸಂಚಾರ ದಟ್ಟಣೆ ಉಂಟಾಗಿದ್ದು, ಸುಮಾರು 100 ಕಿ.ಮೀ ವರೆಗೆ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಅಂದಿನ ಈ ಟ್ರಾಫಿಕ್ ಜಾಮ್ ಪ್ರಪಂಚದ ಅತ್ಯಂತ ಉದ್ದನೆಯ ಟ್ರಾಫಿಕ್ ಜಾಮ್ ಎಂಬ ಹೆಸರು ಪಡೆದಿದೆ.

ಅಂದು ಬೀಜಿಂಗ್-ಟಿಬೆಟ್ ಎಕ್ಸ್ಪ್ರೆಸ್ವೇ ನಿರ್ಮಾಣ ಹಂತದಲ್ಲಿತ್ತು. ಈ ರಸ್ತೆ ಕಾಮಗಾರಿಗೆ ಬೇಕಾದ ಕಲ್ಲಿದ್ದಲು ಮತ್ತು ಇತರೆ ಸಾಮಾಗ್ರಿಗಳನ್ನು ಮಂಗೋಲಿಯಾದಿಂದ ಟ್ರಕ್ಗಳಲ್ಲಿ ತರಿಸಲಾಗಿತ್ತು. ಈ ದೈತ್ಯ ಟ್ರಕ್ಗಳ ಕಾರಣದಿಂದಾಗಿ ಟ್ರಾಫಿಕ್ ಜಾಮ್ ಸಮಸ್ಯೆ ಉಂಟಾಗಿತ್ತು. ಗಂಟೆಗಳು ಅಲ್ಲ, ಈ ಟ್ರಾಫಿಕ್ ಜಾಮ್ ಅನ್ನು ತೆರವು ಗೊಳಿಸಲು ಬರೋಬ್ಬರಿ 12 ದಿನಗಳು ಬೇಕಾದವು. ಸಂಚಾರ ದಟ್ಟಣೆ ಸಂಭವಿಸಿದ ಪರಿಣಾಮ ಹಲವು ವಾಹನಗಳು ಜಖಂಗೊಂಡಿದ್ದವು. ಇನ್ನೂ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿದ ಜನ ಮನೆಗೆ ಹೋಗಲು ಸಾಧ್ಯವಾಗದೆ ಎಕ್ಸ್ಪ್ರೆಸ್ವೇ ಉದ್ದಕ್ಕೂ ತಾತ್ಕಲಿಕ ಟೆಂಟ್ಗಳನ್ನು ನಿರ್ಮಿಸಿದ್ದರು. ಇನ್ನೂ ಕೆಲವರು ತಮ್ಮ ವಾಹನಗಳಲ್ಲಿ ಕುಳಿತು ದಿನ ಕಳೆದರು. ತಿಂಡಿ, ತಂಪು ಪಾನೀಯ, ಊಟ ಸೇರಿದಂತೆ ಆಹಾರ ಪದಾರ್ಥಗಳನ್ನು ಇಲ್ಲಿ ನಾಲ್ಕು ಪಟ್ಟು ಬೆಲೆಗೆ ಮಾರಾಟ ಮಾಡಲಾಗಿತ್ತು. ಇಲ್ಲಿನ ಸರ್ಕಾರ ಈ ಒಂದು ಟ್ರಾಫಿಕ್ ತೆರವುಗೊಳಿಸಲು ಹಗಲಿರುಳು ಶ್ರಮಿಸಿತ್ತು. 2010 ರ ಆಗಸ್ಟ್ 14 ರಂದು ಉಂಟಾದ ಈ ಟ್ರಾಫಿಕ್ ಜಾಮ್ ಆಗಸ್ಟ್ 26, 2010 ರಂದು ಕೊನೆಗೊಂಡಿತು. ಒಟ್ಟಾರೆ ಈ ಟ್ರಾಫಿಕ್ ತೆರವುಗೊಳಿಸಲು 12 ದಿನಗಳು ಬೇಕಾಯಿತು.

Related Posts

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿದ್ದು, ಅವರ ರಾಜೀನಾಮೆಯನ್ನು ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ ಅಂಗೀಕರಿಸಿದ್ದಾರೆ. ಸಚಿವ ಸಂಪುಟವೂ ವಿಸರ್ಜನೆಯಾಗಿರುವ ಹಿನ್ನೆಲೆಯಲ್ಲಿ, ನೂತನ ಸರ್ಕಾರ ಹಾಗೂ ಸಂಪುಟ ರಚನೆಯ ಪ್ರಕ್ರಿಯೆಗಳು ಬಿರುಸುಗೊಂಡಿವೆ. ಇದರ ಭಾಗವಾಗಿ, ಇಂದು (ಮೇ 30,…

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಭಾರತದ ಉಕ್ಕಿನ ಉತ್ಪಾದನಾ ಕ್ಷೇತ್ರದಲ್ಲಿ ಹೊಸ ಮೈಲಿಗಲ್ಲೊಂದು ನಿರ್ಮಾಣವಾಗಿದೆ. ಸಮುದ್ರ ಹಾಗೂ ಕಡಲಾಚೆಯ ಬೃಹತ್ ಇಂಜಿನಿಯರಿಂಗ್ ಯೋಜನೆಗಳಲ್ಲಿ ಬಳಸಲಾಗುವ ಅತ್ಯಂತ ಹೆಚ್ಚಿನ ಸಾಮರ್ಥ್ಯದ ವೆಲ್ಡೆಡ್ ಪೈಪ್‌ಗಳನ್ನು (EQ70 ಗ್ರೇಡ್) ಉತ್ಪಾದಿಸಿದ ವಿಶ್ವದ ಮೊದಲ ಸ್ಟೀಲ್ ಕಂಪನಿ ಎಂಬ ಹೆಗ್ಗಳಿಕೆಗೆ ‘ಆರ್ಸೆಲರ್ ಮಿತ್ತಲ್…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!