ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾ* ; ಚಾಮರಾಜನಗರದಲ್ಲಿ ಘಟನೆ.

ಚಾಮರಾಜನಗರ :- ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ ಬಾಳಬೇಕಾದ 6 ತಿಂಗಳ ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತನ್ನ ಮಗುವಿನ ಸಾವಿಗೆ ಕಾರಣವಾದ ವೈದ್ಯನ ವಿರುದ್ದ ಕುಟುಂಬಸ್ಥರು ರೊಚ್ಚಿಗೆದ್ದಿದ್ದು ಸರ್ಕಾರಿ ಆಸ್ಪತ್ರೆಯೇ ರಣಾಂಗಣವಾಗಿ ಮಾರ್ಪಟ್ಟಿತ್ತು.

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಆರು ತಿಂಗಳ ಮಗು ಪ್ರಖ್ಯಾತ್ಗೆ ಇಂದು ಕಿವಿ ಚುಚ್ಚಿಸೋಕೆ ಮುಂದಾಗಿದ್ದರು. ಆದರೆ ಚಿಕ್ಕ ಕಂದವಾದ ಕಾರಣ ಮಗುವಿಗೆ ನೋವು ಆಗ ಬಾರದು ಎಂಬ ಕಾರಣಕ್ಕೆ ಬೋಮ್ಮಲಾಪೂರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋದ ಪೋಷಕರು ಕಿವಿಗೆ ಬೆಂಟ್ ಇಂಜೆಕ್ಷನ್(ಅನಸ್ತೀಷಿಯಾ) ಕೊಡಿಸಿದ್ದಾರೆ. ಈ ಇಂಜೆಕ್ಷನ್ ನೀಡಿದ 10 ನಿಮಿಷದೊಳಗೆ ಮಗುವಿಗೆ ರಿಯಾಕ್ಷನ್ ಆಗಿದೆ. ಇದ್ದಕ್ಕಿದ್ದಂತೆ ಪಿಡ್ಸ್ ಬಂದಿದೆ, ತಕ್ಷಣವೇ ಬೋಮ್ಮಲಾಪುರ ಸರ್ಕಾರಿ ಆಸ್ಪತ್ರೆಯಿಂದ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಮಗುವನ್ನ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮುನ್ನವೆ ಮಗು ಉಸಿರು ಚೆಲ್ಲಿದೆ. ಈ ವಿಚಾರ ತಿಳಿದು ಮೃತ ಮಗುವಿನ ಕುಟುಂಬಸ್ಥರು ರೊಚ್ಚಿಗೆದ್ದು ವೈದ್ಯರಿಗೆ ಕ್ಲಾಸ್ ತೆಗೆದು ಕೊಂಡಿದ್ದಾರೆ.
ನಾಗದೋಷ ಯಾವ ಕಾರಣಕ್ಕೆ ಬರುತ್ತೆ?
ವೈದ್ಯ ಓವರ್ ಡೋಸ್ ನೀಡಿದ ಪರಿಣಾಮವೇ ಮಗು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರ ಆರೋಪವಾಗಿದೆ. ಪಿಹೆಚ್ಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಅಲಂಪಾಷಾ ಹೇಳಿದ್ದಾರೆ.

ಕಿವಿಗೆ ನೋವಾಗಬಾರ್ದು ಅಂತ ವೈದ್ಯರ ಬಳಿ ಕರೆದುಕೊಂಡು ಹೋದರೆ, ಆ ವೈದ್ಯ ಮಗುವಿನ ಪ್ರಾಣವನ್ನು ತೆಗೆದಿದ್ದು ನಿಜಕ್ಕೂ ದುರಂತವೇ ಸರಿ. ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಸತ್ಯಾ ಸತ್ಯತೆ ಬೆಳಕಿಗೆ ಬರಬೇಕಿದೆ. ಎಲ್ಲವನ್ನೂ ನೋಡಿ ರೊಚ್ಚಿಗೆದ್ದ ಬೊಮ್ಮಲಾಪುರ ಗ್ರಾಮದ ನಿವಾಸಿಗಳು ಮಾಧ್ಯಮ ಪ್ರತಿನಿಧಿಗಳನ್ನು ಒಳಬಿಡಿ ಎಂದು ಗಲಾಟೆ ಮಾಡಿದ್ದಾರೆ. ಗ್ರಾಮಸ್ಥರು ರೊಚ್ಚಿಗೇಳುತ್ತಿದ್ದಂತೆ ಮಾಧ್ಯಮದವರನ್ನು ಪೊಲೀಸರು ಒಳಬಿಟ್ಟಿದ್ದಾರೆ.

Related Posts

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ ಮೈಸೂರು ಜಿಲ್ಲೆಯ ಕಣಗಾಲ್‌ ಗ್ರಾಮದಲ್ಲಿರುವ ನಿವಾಸವನ್ನು ವಸ್ತು ಸಂಗ್ರಹಾಲಯವನ್ನಾಗಿ ಪರಿವರ್ತಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ಮನೆಯನ್ನು ಮ್ಯೂಸಿಯಂ ಆಗಿ ಪರಿವರ್ತಿಸುತ್ತಿರುವುದು ಇದೇ ಮೊದಲು. ಖ್ಯಾತ ನಿರ್ದೇಶಕ ಪುಟ್ಟಣ್ಣ ಕಣಗಾಲ್‌ ಅವರ…

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

200ಕ್ಕೂ ಹೆಚ್ಚು ವಿದೇಶಿ ಪ್ರಜೆಗಳಿಗೆ ಗೇಟ್​​​ಪಾಸ್ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವಿಸ್ತೃತ ಕಾರ್ಯಾಚರಣೆ ನಡೆಸುತ್ತಿದ್ದಾರೆ. ನಗರ ಆಯುಕ್ತರ ನೇತೃತ್ವದಲ್ಲಿ ನಡೆದ ಈ ತಪಾಸಣೆಯಲ್ಲಿ 200ಕ್ಕೂ ಹೆಚ್ಚು ದಾಖಲೆರಹಿತ ವಿದೇಶಿಗರನ್ನು ಪತ್ತೆಹಚ್ಚಿ ವಶಕ್ಕೆ ಪಡೆಯಲಾಗಿದೆ. ಇವರಲ್ಲಿ ಬಾಂಗ್ಲಾದೇಶ…

You Missed

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಕನ್ನಡ ಚಿತ್ರರಂಗದ ವ್ಯಕ್ತಿಯೊಬ್ಬರ ನಿವಾಸ ಮ್ಯೂಸಿಯಂ ಆಗಲಿದೆ

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಸಚಿನ್ ತೆಂಡೂಲ್ಕರ್ ಸೊಸೆ ಎಷ್ಟು ಶ್ರೀಮಂತೆ ಗೊತ್ತಾ?

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಮೇಲೆ ಪೊಲೀಸ್ ಕಣ್ಣು!

ರಜತ್ ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ರಜತ್  ವಿರುದ್ಧ ಮತ್ತೊಂದು ಕೇಸ್‌ – ಡಾಗ್‌ ಸತೀಶ್‌ಗೆ ಕೊಲೆ ಬೆದರಿಕೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

ಬೆಂಗಳೂರಿನಲ್ಲಿ ವಿದೇಶಿ ಪ್ರಜೆಗಳ ವಿರುದ್ಧ ಪೊಲೀಸರು ವ್ಯಾಪಕ ಕಾರ್ಯಾಚರಣೆ

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್

UPSC ಪರೀಕ್ಷೆಯಲ್ಲಿ ಅನುಜ್‌ ಅಗ್ನಿಹೋತ್ರಿ ಫಸ್ಟ್ ರ‍್ಯಾಂಕ್