ವೈದ್ಯರ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾ* ; ಚಾಮರಾಜನಗರದಲ್ಲಿ ಘಟನೆ.

ಚಾಮರಾಜನಗರ :- ‘ವೈದ್ಯೋ ನಾರಾಯಣೋ ಹರಿಃ’ ಎಂಬ ಉಕ್ತಿಯಂತೆ ವೈದ್ಯನಾದವನು ದೇವರಿಗೆ ಸಮಾನವಾದವನು. ಆದರೆ ಪ್ರಾಣ ಉಳಿಸಬೇಕಿರುವ ವೈದ್ಯನೇ ಬದುಕಿ ಬಾಳ ಬೇಕಾಗಿದ್ದ ಪುಟ್ಟ ಕಂದನ ಪ್ರಾಣ ತೆಗೆದಿರುವ ಆರೋಪ ಕೇಳಿಬಂದಿದೆ. ವೈದ್ಯ ಮಾಡಿದ ಎಡವಟ್ಟಿಗೆ 6 ತಿಂಗಳ ಗಂಡು ಮಗು ಸಾವನ್ನಪ್ಪಿರುವಂತಹ ಘಟನೆ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರದಲ್ಲಿ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ಸರ್ಕಾರಿ ಆಸ್ಪತ್ರೆ ವೈದ್ಯ 6 ತಿಂಗಳ ಮಗುವಿನ ಪ್ರಾಣವನ್ನು ತೆಗೆದಿದ್ದಾನೆ. ಡಾಕ್ಟರ್ ಮಾಡಿದ ಸಣ್ಣದೊಂದು ಎಡವಟ್ಟಿಗೆ ಬದುಕಿ ಬಾಳಬೇಕಾದ 6 ತಿಂಗಳ ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ. ತನ್ನ ಮಗುವಿನ ಸಾವಿಗೆ ಕಾರಣವಾದ ವೈದ್ಯನ ವಿರುದ್ದ ಕುಟುಂಬಸ್ಥರು ರೊಚ್ಚಿಗೆದ್ದಿದ್ದು ಸರ್ಕಾರಿ ಆಸ್ಪತ್ರೆಯೇ ರಣಾಂಗಣವಾಗಿ ಮಾರ್ಪಟ್ಟಿತ್ತು.

ಹಂಗಳ ಗ್ರಾಮದ ನಿವಾಸಿಗಳಾದ ಆನಂದ್ ಮತ್ತು ಶುಭಮಾನಸ ದಂಪತಿಯ ಆರು ತಿಂಗಳ ಮಗು ಪ್ರಖ್ಯಾತ್ಗೆ ಇಂದು ಕಿವಿ ಚುಚ್ಚಿಸೋಕೆ ಮುಂದಾಗಿದ್ದರು. ಆದರೆ ಚಿಕ್ಕ ಕಂದವಾದ ಕಾರಣ ಮಗುವಿಗೆ ನೋವು ಆಗ ಬಾರದು ಎಂಬ ಕಾರಣಕ್ಕೆ ಬೋಮ್ಮಲಾಪೂರ ಸರ್ಕಾರಿ ಆಸ್ಪತ್ರೆಗೆ ಮಗುವನ್ನ ಕರೆದುಕೊಂಡು ಹೋದ ಪೋಷಕರು ಕಿವಿಗೆ ಬೆಂಟ್ ಇಂಜೆಕ್ಷನ್(ಅನಸ್ತೀಷಿಯಾ) ಕೊಡಿಸಿದ್ದಾರೆ. ಈ ಇಂಜೆಕ್ಷನ್ ನೀಡಿದ 10 ನಿಮಿಷದೊಳಗೆ ಮಗುವಿಗೆ ರಿಯಾಕ್ಷನ್ ಆಗಿದೆ. ಇದ್ದಕ್ಕಿದ್ದಂತೆ ಪಿಡ್ಸ್ ಬಂದಿದೆ, ತಕ್ಷಣವೇ ಬೋಮ್ಮಲಾಪುರ ಸರ್ಕಾರಿ ಆಸ್ಪತ್ರೆಯಿಂದ ಗುಂಡ್ಲುಪೇಟೆ ತಾಲೂಕು ಆಸ್ಪತ್ರೆಗೆ ಮಗುವನ್ನ ಕರೆದೊಯ್ಯಲಾಗಿದೆ. ಆದರೆ ಆಸ್ಪತ್ರೆ ತಲುಪುವ ಮುನ್ನವೆ ಮಗು ಉಸಿರು ಚೆಲ್ಲಿದೆ. ಈ ವಿಚಾರ ತಿಳಿದು ಮೃತ ಮಗುವಿನ ಕುಟುಂಬಸ್ಥರು ರೊಚ್ಚಿಗೆದ್ದು ವೈದ್ಯರಿಗೆ ಕ್ಲಾಸ್ ತೆಗೆದು ಕೊಂಡಿದ್ದಾರೆ.
ನಾಗದೋಷ ಯಾವ ಕಾರಣಕ್ಕೆ ಬರುತ್ತೆ?
ವೈದ್ಯ ಓವರ್ ಡೋಸ್ ನೀಡಿದ ಪರಿಣಾಮವೇ ಮಗು ಸಾವನ್ನಪ್ಪಿರುವುದಾಗಿ ಕುಟುಂಬಸ್ಥರ ಆರೋಪವಾಗಿದೆ. ಪಿಹೆಚ್ಸಿ ವೈದ್ಯರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಗುಂಡ್ಲುಪೇಟೆ ತಾಲೂಕು ವೈದ್ಯಾಧಿಕಾರಿ ಡಾ.ಅಲಂಪಾಷಾ ಹೇಳಿದ್ದಾರೆ.

ಕಿವಿಗೆ ನೋವಾಗಬಾರ್ದು ಅಂತ ವೈದ್ಯರ ಬಳಿ ಕರೆದುಕೊಂಡು ಹೋದರೆ, ಆ ವೈದ್ಯ ಮಗುವಿನ ಪ್ರಾಣವನ್ನು ತೆಗೆದಿದ್ದು ನಿಜಕ್ಕೂ ದುರಂತವೇ ಸರಿ. ಮರಣೋತ್ತರ ಪರೀಕ್ಷೆ ವರದಿಯ ಬಳಿಕ ಸತ್ಯಾ ಸತ್ಯತೆ ಬೆಳಕಿಗೆ ಬರಬೇಕಿದೆ. ಎಲ್ಲವನ್ನೂ ನೋಡಿ ರೊಚ್ಚಿಗೆದ್ದ ಬೊಮ್ಮಲಾಪುರ ಗ್ರಾಮದ ನಿವಾಸಿಗಳು ಮಾಧ್ಯಮ ಪ್ರತಿನಿಧಿಗಳನ್ನು ಒಳಬಿಡಿ ಎಂದು ಗಲಾಟೆ ಮಾಡಿದ್ದಾರೆ. ಗ್ರಾಮಸ್ಥರು ರೊಚ್ಚಿಗೇಳುತ್ತಿದ್ದಂತೆ ಮಾಧ್ಯಮದವರನ್ನು ಪೊಲೀಸರು ಒಳಬಿಟ್ಟಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!