ವ್ಯಕ್ತಿಯನ್ನು ಹೊಡೆದು ಕೊಂ* ಗೆಳತಿಯ ಪ್ರಿಯಕರ: ತ್ರಿಕೋನ ಪ್ರೇಮದಲ್ಲಿ ಐವರ ಬಂಧನ..

ಛತ್ತೀಸ್ಗಢ :- ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ ಗಾಯಗಳಾಗಿತ್ತು, ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ತ್ರಿಕೋನ ಪ್ರೇಮ ಪ್ರಕರಣವೊಂದರಲ್ಲಿ ಕೊಲೆಯೇ ನಡೆದು ಹೋಗಿದೆ. ವ್ಯಕ್ತಿಯೊಬ್ಬನನ್ನು ಗೆಳತಿಯ ಪ್ರಿಯಕರ ತನ್ನ ಸ್ನೇಹಿತರೊಟ್ಟಿಗೆ ಸೇರಿ ಕೊಲೆ ಮಾಡಿರುವ ಘಟನೆ ಛತ್ತೀಸ್ಗಢದಲ್ಲಿ ನಡೆದಿದೆ. ಯುವತಿಯ ಪ್ರಿಯಕರ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. ರಾತ್ರಿ 9.30ರ ಸುಮಾರಿಗೆ ಕೆಲವರು ದೊಣ್ಣೆಗಳಿಂದ ಅಮಾನುಷವಾಗಿ ಥಳಿಸಿದ್ದರಿಂದ ಚೇತನ್ ಎಂಬ ವ್ಯಕ್ತಿಗೆ ತುಂಬಾ ಗಾಯಗಳಾಗಿತ್ತು, ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ.
ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ, ಅದರ ಪ್ರಕಾರ ಚೇತನ್ ಯುವತಿಯೊಂದಿಗೆ ಸಂಬಂಧ ಹೊಂದಿದ್ದ. ಇವರಿಬ್ಬರ ತಾಯಂದಿರು ಪೊಲೀಸ್ ಇಲಾಖೆಯಲ್ಲಿದ್ದಾರೆ. ಕೆಲವು ದಿನಗಳ ಹಿಂದೆ, ಹುಡುಗಿಯ ತಾಯಿಯನ್ನು ಸುರ್ಗುಜಾ ಜಿಲ್ಲೆಯ ಪೊಲೀಸ್ ಠಾಣೆಗೆ ವರ್ಗಾಯಿಸಲಾಯಿತು, ನಂತರ ಹುಡುಗಿಯೂ ಆ ಜಾಗ ಬಿಡಬೇಕಾಯಿತು.
ಬಳಿಕ ಆಕೆ ಸುರ್ಗುಜಾಗೆ ಹೋದಾಗ ಅಲ್ಲಿ ಲೋಕೇಶ್ ಸಾಹು ಎಂಬುವವನನ್ನು ಭೇಟಿಯಾದಳು, ಕ್ರಮೇಣ ಅದು ಪ್ರೀತಿಗೆ ತಿರುಗಿತ್ತು. ಇದೇ ವೇಳೆ ಚೇತನ್ ಆಕೆಯನ್ನು ಸಂಪರ್ಕಿಸಲು ಪ್ರಯತ್ನಿಸುತ್ತಿದ್ದ, ಆತನ ಕರೆಗೆ ಪ್ರತಿಕ್ರಿಯೆ ಕೂಡ ನೀಡುತ್ತಿರಲಿಲ್ಲ. ಡಿಸೆಂಬರ್ 24 ರಂದು ಯುವತಿ ತನ್ನ ತಾಯಿಯೊಂದಿಗೆ ದುರ್ಗಕ್ಕೆ ಬಂದಿದ್ದಳು, ಅದು ಚೇತನ್ಗೆ ತಿಳಿದಾಗ, ತನ್ನನ್ನು ಭೇಟಿಯಾಗುವಂತೆ ಕೇಳಿದ್ದ, ಆದರೆ ಆಕೆ ನಿರಾಕರಿಸಿದ್ದಳು.
ಯುವತಿ ಲೋಕೇಶ್ಗೆ ಚೇತನ್ ಬಗ್ಗೆ ತಿಳಿಸಿದ್ದಾಳೆ, ಬಳಿಕ ಆತನಿಗೆ ಕರೆ ಮಾಡಿ ಭೇಟಿಯಾಗುವಂತೆ ಕೇಳಿದ್ದಳು. ಆತ ಆಕೆಯನ್ನು ಭೇಟಿಯಾಗಲು ಬಂದಾಗ ಲೋಕೇಶ್ ತನ್ನ ಸ್ನೇಹಿತರೊಂದಿಗೆ ಅಲ್ಲಿಯೇ ಇದ್ದ. ಇದಾದ ಕೆಲವೇ ಹೊತ್ತಿನಲ್ಲಿ ಇಬ್ಬರ ನಡುವೆ ವಾಗ್ವಾದ ನಡೆಯಿತು.
ಲೋಕೇಶ್ ವ್ಯಕ್ತಿಯ ಮೇಲೆ ದೊಣ್ಣೆಯಿಂದ ಅಮಾನುಷವಾಗಿ ಥಳಿಸಿದ್ದಾನೆ. ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಘಟನೆ ಬಳಿಕ ಸ್ಥಳದಿಂದ ಪರಾರಿಯಾಗಿದ್ದ ಆರೋಪಿಗಳನ್ನು ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಯುವತಿಯನ್ನೂ ವಶಕ್ಕೆ ಪಡೆಯಲಾಗಿದೆ. ಪೊಲೀಸರು ಆರೋಪಿಗಳ ವಿಚಾರಣೆ ನಡೆಸುತ್ತಿದ್ದು, ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!