ಶಿಥಿಲಗೊಂಡ ಮೈಸೂರಿನ ಪಾರಂಪರಿಕ ಮಹಾರಾಣಿ ಕಾಲೇಜು ಕಟ್ಟಡ ಕುಸಿತ : ಅವಶೇಷಗಳಡಿ ಸಿಲುಕಿದ ಕಾರ್ಮಿಕ.

ಮೈಸೂರು: ಪಾರಂಪರಿಕ ಮಹಾರಾಣಿ ಕಾಲೇಜಿನಲ್ಲಿ ಕಾಮಗಾರಿ ವೇಳೆ ಕಟ್ಟಡ ಕುಸಿದಿರುವ ಘಟನೆ (ಜ.28) ನಡೆದಿದೆ. ಮಹಾರಾಣಿ ಕಾಲೇಜಿನ ಶಿಥಿಲಗೊಂಡಿದ್ದ ಕಟ್ಟಡ ದುರಸ್ತಿ ಕಾರ್ಯದ ವೇಳೆ ದುರಂತ ಸಂಭವಿಸಿದೆ. ಅವಶೇಷಗಳಡಿ ಸದ್ದಾಂ ಎಂಬ ಓರ್ವ ಕಾರ್ಮಿಕ ಸಿಲುಕಿದ್ದಾನೆ.
ಮಹಾರಾಣಿ ಕಾಲೇಜು ಕಟ್ಟಡ ಶಿಥಿಲಗೊಂಡಿದ್ದರಿಂದ ಹಿನ್ನೆಲೆಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಿಟಕಿಗಳನ್ನು ತೆಗೆದು ಹಾಕುವ ಕಟ್ಟಡ ಕುಸಿದಿದೆ. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಮಿಕನ ರಕ್ಷಣೆಗೆ ಮುಂದಾಗಿದ್ದಾರೆ. ಜೆಸಿಬಿ ಮೂಲಕ ಅವಶೇಷಗಳನ್ನು ತೆರವು ಮಾಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಶಾಸಕ ಹರೀಶ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

‘ಕಾರ್ಮಿಕರು ಹೊಸ ಕಟ್ಟಡ ನಿರ್ಮಾಣಕ್ಕಾಗಿ ಶಿಥಿಲಗೊಂಡಿದ್ದ ಕಟ್ಟಡವನ್ನು ಒಡೆಯುವ ಕೆಲಸ ಮಾಡುತ್ತಿದ್ದರು. ಹಳೆಯ ಕಟ್ಟಡದಲ್ಲಿದ್ದ ಸಾಮಾಗ್ರಿಗಳನ್ನು ತೆರವುಗೊಳಿಸಿದ ಬಳಿಕ ಮೂವರು ಕಾರ್ಮಿಕರು ಕಿಟಕಿಗಳನ್ನು ತೆರವು ಮಾಡಲು ಮುಂದಾಗಿದ್ದಾರೆ. ಆಗ ಗೋಡೆ ಕುಸಿದಿದೆ. ಇಬ್ಬರು ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದು, ಓರ್ವ ಅವಶೇಷಗಳಡಿ ಸಿಲುಕಿಕೊಂಡಿದ್ದಾನೆ’ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ. ಮಹಾರಾಣಿ ಕಾಲೇಜಿನ ಹೊಸ ಕಟ್ಟಡ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅನುದಾನ ಬಿಡುಗಡೆ ಮಾಡಿದ್ದರು.

‘ಕಟ್ಟಡ ಶಿಥಿಲವಾಗಿದ್ದ ಕಾರಣ ಕಳೆದ ನಾಲ್ಕು ದಿನಗಳಿಂದ ಕಟ್ಟಡ ತೆರವುಗೊಳಿಸುವ ಕೆಲಸ ನಡೆಯುತ್ತಿತ್ತು. ಸ್ಟಾರ್ ಇನ್ಫ್ರಾಟೆಕ್ ಕಂಪನಿಗೆ ಕಾಮಗಾರಿ ನೀಡಲಾಗಿದೆ. ಅವಘಢ ನಡೆದಾಗ 14 ಜನ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಕಟ್ಟಡದ ಕಿಟಕಿ, ಸರಳುಗಳನ್ನು ತೆಗೆಯುವ ಕೆಲಸ ಆಗುತ್ತಿತ್ತು. ಇದ್ದಕಿದ್ದಂತೆ ಮೊದಲ ಮಹಡಿಯ ಮೇಲ್ಚಾವಣಿ ಕುಸಿತ ಆಗಿದೆ. ತಕ್ಷಣ ಎಲ್ಲರೂ ಓಡಿ ಬಂದಿದ್ದಾರೆ. ಒಬ್ಬ ಮಾತ್ರ ಸಿಲುಕಿದ್ದಾನೆ. ದೇವರ ದಯೆಯಿಂದ ಆತನಿಗೆ ಏನೂ ಆಗದಿರಲಿ’ ಎಂದು ಶಾಸಕ ಹರೀಶ್ಗೌಡ ತಿಳಿಸಿದ್ದಾರೆ.

‘ಸುರಕ್ಷತಾ ಕ್ರಮಗಳನ್ನು ಅನುಸರಿಸಿಕೊಂಡು ಕಾಮಗಾರಿ ಮಾಡಬೇಕಿತ್ತು. ಮೊದಲು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಕಾರ್ಮಿಕನ ರಕ್ಷಣೆ ಆಗಬೇಕಿದೆ. ನಂತರದಲ್ಲಿ ತನಿಖೆ ಮಾಡಿ ಅವಘಡಕ್ಕೆ ಕಾರಣ ಆದವರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತರೆಡ್ಡಿ ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ನೇಪಾಳ ಪ್ರವಾಹ: ಕನ್ನಡಿಗರು ಸುರಕ್ಷಿತ, ಧೈರ್ಯ ತುಂಬಿದ ಸಿಎಂ

ನೇಪಾಳ ಹಾಗೂ ಟಿಬೆಟ್ ಗಡಿ ಭಾಗದಲ್ಲಿ ಉಂಟಾಗಿರುವ ಭೀಕರ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ರಸ್ತೆ ಸಂಪರ್ಕ ಸಂಪೂರ್ಣವಾಗಿ ಕಡಿತಗೊಂಡಿದ್ದು, ಮೂಲಸೌಕರ್ಯಗಳಿಗೆ ಅಪಾರ ಹಾನಿಯಾಗಿದೆ. ಈ ನೈಸರ್ಗಿಕ ವಿಕೋಪದ ನಡುವೆ ಸಿಲುಕಿದ್ದ ಕರ್ನಾಟಕದ 3 ಮಂದಿ ಸೇರಿದಂತೆ ಒಟ್ಟು 23 ಭಾರತೀಯರು…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!