ಶಿವರಾಜ್ಕುಮಾರ್ ಸರ್ಜರಿ ಬಳಿಕ ಫಿಟ್ ಆ್ಯಂಡ್ ಫೈನ್ : ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್

ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಕ್ಯಾನ್ಸರ್ ಮುಕ್ತರಾಗಿದ್ದಾರೆ ಮತ್ತು ಅಮೆರಿಕಾದಲ್ಲಿ ತಮ್ಮ ಕುಟುಂಬದೊಂದಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ 24 ರ ನಂತರ ಅವರು ಬೆಂಗಳೂರಿಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ
ನಟ ಶಿವರಾಜ್ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ನಿಂದ ಬಳಲುತ್ತಿದ್ದರು. ಇದರ ಶಸ್ತ್ರಚಿಕಿತ್ಸೆ ಕೂಡ ಅವರು ಮಾಡಿಸಿಕೊಂಡಿದ್ದರು. ಈಗ ಅವರು ಕ್ಯಾನ್ಸರ್ ಮುಕ್ತರಾಗಿದ್ದಾರೆ. ಡಿಸೆಂಬರ್ ಅಂತ್ಯಕ್ಕೆ ಶಸ್ತ್ರಚಿಕಿತ್ಸೆ ನಡೆದಿತ್ತು. ಈಗ ಶಿವಣ್ಣ ಅವರು ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಇದಕ್ಕೆ ಸಂಬಂಧಿಸಿದ ಹೊಸ ಫೋಟೋ ವೈರಲ್ ಆಗಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ. ಅವರು ಆದಷ್ಟು ಬೇಗ ಭಾರತಕ್ಕೆ ಮರಳಲಿ ಎಂದು ಕೋರುತ್ತಿದ್ದಾರೆ.
ಶಿವರಾಜ್ಕುಮಾರ್ ಅವರು ಡಿಸೆಂಬರ್ 18ರಂದು ಅಮೆರಿಕಕ್ಕೆ ತೆರಳಿದರು. ಡಿಸೆಂಬರ್ 24ರಂದು ಅಮೆರಿಕದ ಫ್ಲೋರಿಡಾದಲ್ಲಿ ಮಿಯಾಮಿ ಕ್ಯಾನ್ಸರ್ ಇನ್ಸ್ಟಿಟ್ಯೂಟ್ನಲ್ಲಿ ಶಸ್ತ್ರಚಿಕಿತ್ಸೆ ನಡೆದಿದೆ. ನಾಲ್ಕೈದು ಗಂಟೆಗಳ ಕಾಲ ಸರ್ಜರಿ ನಡೆದಿತ್ತು. ಈಗ ಶಿವಣ್ಣ ಅವರು ಆಸ್ಪತ್ರೆ ಪಕ್ಕದಲ್ಲೇ ಇರುವ ಹೋಟೆಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್ ಆಗಿದೆ.
ಕ್ಯಾನ್ಸರ್ ಸರ್ಜರಿ ಯಶಸ್ವಿ ಆಗಿದ್ದರೂ ಕೆಲ ದಿನಗಳ ಕಾಲ ಅವರು ಅಲ್ಲಿಯೇ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ಹೀಗಾಗಿ, ಜನವರಿ 24ರವರೆಗೆ ಶಿವರಾಜ್ಕುಮಾರ್ ಅಮೆರಿಕದಲ್ಲೇ ಇರಬೇಕಾದ ಅನಿವಾರ್ಯತೆ ಇದೆ. ಆ ಬಳಿಕ ಅವರು ಬೆಂಗಳೂರಿಗೆ ಬಂದ ವಿಶ್ರಾಂತಿ ಪಡೆಯಲಿದ್ದಾರೆ. ನಂತರ ಶಿವರಾಜ್ಕುಮಾರ್ ಅವರು ಸಿನಿಮಾ ಕೆಲಸಕ್ಕೆ ಮರಳಲಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

  ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚನ್ನಮ್ಮಅವರು ಉಸಿರಾಟದ ಸಮಸ್ಯೆಯಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾಜಕೀಯವಾಗಿ ಸದಾ ಬ್ಯುಸಿಯಾಗಿದ್ದ ದೇವೇಗೌಡರ ಸಂಸಾರದ ಬೆನ್ನೆಲುಬಾಗಿದ್ದ ಗಟ್ಟಿಗಿತ್ತಿ ಇಹಲೋಕ ತ್ಯಜಿಸಿದ್ದಾರೆ. ಕೆಲ ವರ್ಷಗಳಿಂದಲೂ ಉಸಿರಾಟ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಇವರ ಆರೋಗ್ಯದಲ್ಲಿ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!