ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊ*

ಶೀಲ ಶಂಕಿಸಿ ಗಂಡನಿಂದಲೆ ಪತ್ನಿಯ ಕೊಲೆ

 

ಪ್ರೀತಿಸಿ ಮದುವೆಯಾದ ಸುಂದರ ಹೆಂಡ್ತಿಯ ಶೀಲ ಶಂಕಿಸಿ ಚೇರ್​ಗೆ ಕಟ್ಟಿಹಾಕಿ ಕತ್ತು ಕೊಯ್ದು ಕೊಂದ ಗಂಡ

ಜೀವನಪೂರ್ತಿ ಕಷ್ಟ ಸುಖಗಳಲ್ಲಿ ಜೊತೆಯಾಗಿರುತ್ತೇನೆ ಎಂದು ಪ್ರೀತಿಸಿ ಮದುವೆಯಾದ ಸುರಸುಂದರಾಂಗಿ ಹೆಂಡತಿಯ ಶೀಲದ ಮೇಲೆ ಶಂಕೆ ವ್ಯಕ್ತಪಡಿಸಿದ ಆಕೆಯ ಗಂಡನೇ ಭೀಕರವಾಗಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಕೊಲೆಯಾದ ಯುವತಿ ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿದ್ದಳು.

ಬೆಂಗಳೂರಿನ ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಕಟ್ಟಿಕೊಂಡ ಗಂಡನೇ ತನ್ನ ಹೆಂಡತಿಯನ್ನು ಮಹಿಳೆಯ ಭೀಕರ ಹತ್ಯೆ ಮಾಡಿರುವ ದುರ್ಘನೆ ನಡೆದಿದೆ. ಕೊಲೆಯಾದ ಮಹಿಳೆಯನ್ನು ನವ್ಯಾ (25) ಎಂದು ಗುರುತಿಸಲಾಗಿದೆ.

ಕೊಲೆ ಮಾಡಿದ ವ್ಯಕ್ತಿಯನ್ನು ಈಕೆಯ ಗಂಡ ಕಿರಣ್ ಎಂದು ಹೇಳಲಾಗಿದೆ. ಕಿರಣ್ ಪತ್ನಿಯನ್ನು ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು, ನೀನು ಯಾರೊಂದಿಗೆ ಅನೈತಿಕ ಸಂಬಂಧ ಹೊಂದಿದ್ದೀಯ ಹೇಳು ಎಂದು ಕೇಳಿದ್ದಾನೆ. ಇಂದು ಮಧ್ಯಾಹ್ನ 1.30ರ ಸುಮಾರಿಗೆ ಕೊಲೆ ಮಾಡಿದ್ದು, ಸಂಜೆ ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ.

ಕಿರಣ್ ಮತ್ತು ನವ್ಯಾ ಕಳೆದ ಮೂರು ವರ್ಷಗಳ ಹಿಂದೆ ಪರಸ್ಪರ ಪ್ರೀತಿಸಿ ಮದುವೆ ಮಾಡಿಕೊಂಡಿದ್ದರು. ಇನ್ನು ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ಹೆಂಡತಿಯೊಂದಿಗೆ ಜಗಳ ಮಾಡಿದ್ದಾನೆ.
ವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದವಳಾದ ನವ್ಯಾ ಕಿರಣ್‌ನನ್ನು ಪ್ರೀತಿಸಿ ಮದುವೆಯಾದ ನಂತರ ಗಂಡನೊಂದಿಗೆ ಬೆಂಗಳೂರಿನಲ್ಲಿ ವಾಸವಾಗಿದ್ದಳು. ಆದರೆ, ಈಗ ಗಂಡನಿಂದಲೇ ಭೀಕರವಾಗಿ, ಚಿತ್ರಹಿಂಸೆ ಅನುಭವಿಸಿ ಪ್ರಾಣ ಬಿಟ್ಟಿದ್ದಾಳೆ. ಇನ್ನು ಘಟನೆ ತಿಳಿದ ಬಳಿಕ ಕೆಂಗೇರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ

 

  • Related Posts

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

      ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

      ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

    You Missed

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

    ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!