ಶ್ರೀ ಕ್ಷೇತ್ರ ಚಿಕ್ಕಲ್ಲೂರು ಜಾತ್ರಾವೈಭವ

ಚಾಮರಾಜನಗರ: ರಾಜ್ಯದ ಪ್ರಸಿದ್ಧ ಜಾತ್ರೆಗಳಲ್ಲಿ ಒಂದಾದ ಕೊಳ್ಳೇಗಾಲ ತಾಲೂಕಿನ ಚಿಕ್ಕಲ್ಲೂರು ಜಾತ್ರೆಯ 4ನೇ ದಿನವಾದ ಭಾನುವಾರ ಪಂಕ್ತಿಸೇವೆ ನಿರ್ವಿಘ್ನದಿಂದ ನಡೆಯಿತು. ದೇಗುಲ ಆವರಣ ಬಿಟ್ಟು ಖಾಸಗಿ ಜಮೀನುಗಳಲ್ಲಿ ಬಿಡಾರ ಹೂಡಿದ್ದ ಭಕ್ತರು, ಮಾಂಸದ ಅಡುಗೆ ಮಾಡಿ ಪಂಕ್ತಿಸೇವೆ ನಡೆಸಿದರು.
ಚಿಕ್ಕಲ್ಲೂರು ಕ್ಷೇತ್ರದಲ್ಲಿ 5 ಹಗಲು, 5 ರಾತ್ರಿ ಜಾತ್ರೆ ನಡೆಯಲಿದ್ದು, 4ನೇ ದಿನದಂದು ಪಂಕ್ತಿಸೇವೆ ನಡೆಸಲಾಗುತ್ತದೆ. ಅದರಂತೆ, ಲಕ್ಷಾಂತರ ಮಂದಿ ಭಕ್ತರು ದೇವರಿಗೆ ಅನ್ನ, ಮುದ್ದೆ, ಮಾಂಸದ ಭಕ್ಷ್ಯಗಳನ್ನು ಎಡೆ ಇಟ್ಟು ಪೂಜೆ ಸಲ್ಲಿಸಿ ಸಹಪಂಕ್ತಿ ಭೋಜನ ಸವಿದಿದ್ದಾರೆ. ಐತಿಹಾಸಿಕ, ಭಕ್ತಿ ಪರಾಕಾಷ್ಠೆಯ ಜಾತ್ರೆ ಎಂದೇ ಜನಜನಿತವಾಗಿರುವ ಚಿಕ್ಕಲ್ಲೂರು ಜಾತ್ರೆಯಲ್ಲಿ ಸಾವಿರಾರು ಮಂದಿ ಭಕ್ತರು ಪಂಕ್ತಿಸೇವೆ ಸಲ್ಲಿಸಿ ತಮ್ಮ ನಂಬಿಕೆ, ಭಕ್ತಿ ಅಚಲ ಎಂದು ಸಾರಿದರು.

ಮಾಂಸದ ಭಕ್ಷ್ಯ ತಯಾರಿಸಿ ದೇವರಿಗೆ ಎಡೆ ಇಟ್ಟು ಬಳಿಕ ಸಹಪಂಕ್ತಿ ಭೋಜನ ಮಾಡುವ ಆಚರಣೆ ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿತ್ತು. ಜಿಲ್ಲಾಡಳಿತ ಪ್ರಾಣಿ ಬಲಿ ನಿಷೇಧಿಸಿ ಹದ್ದಿನ ಕಣ್ಣಿಟ್ಟಿತ್ತು. ಆಚರಣೆಯನ್ನು ಬಿಡಲೊಪ್ಪದ ಜನರು ದೇವಾಲಯ ಆವರಣದಿಂದ ದೂರದ ಪ್ರದೇಶದಲ್ಲಿ ಮಾಂಸದ ಅಡುಗೆ ತಯಾರಿಸಿ ಶ್ರದ್ಧೆ-ಭಕ್ತಿಯಿಂದ ಎಡೆ ಅರ್ಪಿಸಿದ್ದಾರೆ. ಜಿಲ್ಲೆ ಹೊರ ಜಿಲ್ಲೆಗಳಿಂದ ಬಂದ ಸಾವಿರಾರು ಭಕ್ತರು ಮಾಂಸದೂಟ ತಯಾರಿಸಿ ನೀಲಗಾರರ ಸಂಪ್ರದಾಯಕ್ಕೆ ಅನುಗುಣವಾಗಿ ಎಡೆ ಅರ್ಪಿಸಿ ರಾಚಪ್ಪಾಜಿ, ಸಿದ್ದಾಪ್ಪಾಜಿ ದೇವರಿಗೆ ಮದ್ಯ- ಮಾಂಸ ಅರ್ಪಿಸಿ ಭಕ್ತಿ ಮೆರೆದರು.
ಜಾತ್ರೆಯಲ್ಲಿ ಮಹಿಳಾ ಶಕ್ತಿ ಪ್ರದರ್ಶನ: ಮಹಿಳೆಯರಿಗೆ ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತ ಪ್ರಯಾಣ ಹಿನ್ನೆಲೆ ಜಾತ್ರೆಗೆ ಮಹಿಳಾ ಸಾಗರವೇ ಹರಿದುಬಂದಿತ್ತು. ಬಸ್ ಗಳಿಗೆ ಹತ್ತಲು ಮಹಿಳೆಯರು ನಾ ಮುಂದೆ- ತಾ ಮುಂದೆ ಎಂದು ಕಿಟಕಿ, ಚಾಲಕರ ಡೋರ್ ಗಳಲ್ಲಿ ಹತ್ತಿದರು. ಕಿಟಕಿಗಳಿಗೆ ಮಕ್ಕಳನ್ನು ತೂರಿಸಿ ಆಸನ ಹಿಡಿಯುವ ಸಾಹಸ ಮಾಡಿದರು.

Related Posts

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಕರ್ನಾಟಕದ ತಮ್ಮ ಹುಟ್ಟೂರಿನಲ್ಲಿ ಇಂದಿಗೂ ಜಾತಿ ಪದ್ಧತಿ ಜೀವಂತವಾಗಿದ್ದು, ಊರಿನ ದೇವಸ್ಥಾನಕ್ಕೆ ತಮಗೆ ಪ್ರವೇಶ ನಿರಾಕರಿಸಲಾಗಿದೆ ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ, 12 ವರ್ಷದವರಿದ್ದಾಗ ಹೋಟೆಲೊಂದರಲ್ಲಿ ಊಟ ಮಾಡಿದ ನಂತರ ಹಣ ನೀಡಿದರೂ ಸಹ, ಕೆಳಜಾತಿಯವರೆಂಬ ಕಾರಣಕ್ಕೆ ತಟ್ಟೆಯನ್ನು…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು