ಸಚಿವ ಪ್ರಿಯಾಂಕ್ ಖರ್ಗೆರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ : ಗೃಹ ಸಚಿವ ಪರಮೇಶ್ವರ.

ಬೆಂಗಳೂರು,:- ಸಚಿವ ಪ್ರಿಯಾಂಕ್ ಖರ್ಗೆ ಅವರ ಮೇಲೆ ಬಿಜೆಪಿಯವರು ಮಾಡಿರುವ ಆರೋಪ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು.
ಸದಾಶಿವನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರ ಮೇಲೆ ಅನವಶ್ಯಕವಾಗಿ ಆಪಾದನೆ ಮಾಡುವುದು ಯಾವುದೇ ಸರ್ಕಾರಕ್ಕು ಸರಿ ಇರುವುದಿಲ್ಲ. ಡೆತ್ನೋಟ್ನಲ್ಲಿ ಅವರ ಹೆಸರು ಕೂಡ ಇಲ್ಲ ಎಂದು ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆ. ಸಚಿವರ ಹೆಸರನ್ನು ತಂದು, ಸರ್ಕಾರಕ್ಕೆ ಮಸಿ ಬಳಿಯುವ ಕೆಲಸ ಮಾಡುತ್ತಿದ್ದಾರೆ. ಸತ್ಯಾಸತ್ಯತೆ ಹೊರಬರಲಿ ಎಂಬ ದೃಷ್ಟಿಯಿಂದ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಸಿಐಡಿಗೆ ವಹಿಸಲಾಗಿದೆ ಎಂದು ಹೇಳಿದರು.

ತನಿಖೆಯ ವರದಿ ಬಂದ ನಂತರ ಏನು ಎಂಬುದನ್ನು ಹೇಳೋಣ. ಸಚಿವ ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ. ಅನವಶ್ಯಕವಾಗಿ ಅವರ ಹೆಸರನ್ನು ತೆಗೆದುಕೊಂಡು ರಾಜೀನಾಮೆ ಕೊಡುವಂತೆ ಒತ್ತಾಯ ಮಾಡುತ್ತಿದ್ದಾರೆ ಎಂದು ತಿಳಿಸಿದರು.
ಸಿಬಿಐಗೆ ವಹಿಸುವಂತೆ ಬಿಜೆಪಿಯವರು ಒತ್ತಾಯಿಸುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಎಲ್ಲ ಪ್ರಕರಣಗಳನ್ನು ಸಿಬಿಐಗೆ ವಹಿಸಲು ಆಗುವುದಿಲ್ಲ. ಸಿಐಡಿ ಸಮರ್ಥವಾಗಿದೆ. ಅನೇಕ ಪ್ರಕರಣಗಳಲ್ಲಿ ಸಿಐಡಿ ತನಿಖೆಯ ವರದಿ ಬಂದಿದೆಯಲ್ಲವೇ? ಬಿಜೆಪಿಯವರು ಹೇಳಿದ್ದೆಲ್ಲ ಕೇಳುವುದಿಲ್ಲ. ಸಕರಾತ್ಮಕವಾಗಿ ಸಲಹೆ, ಸೂಚನೆ ನೀಡಿದರೆ ಕೇಳುತ್ತೇವೆ. ಅನವಶ್ಯಕವಾಗಿ ಎಲ್ಲದರಲ್ಲು ರಾಜಕೀಯ ಮಾಡಲು ಹೋದರೆ ಕೇಳುವುದಿಲ್ಲ ಎಂದರು.ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಮೇಲೆ ಶಾಸಕ ಸಿ.ಟಿ.ರವಿ ಅವಾಚ್ಯ ಪದ ಬಳಕೆ ಮಾಡಿರುವ ಪ್ರಕರಣದ ಸತ್ಯಾಸತ್ಯತೆ ಹೊರಬರಬೇಕಲ್ಲವೇ. ಈ ನಿಟ್ಟಿನಲ್ಲಿ ಸಿಐಡಿ ಅವರು ತಮ್ಮ ಕೆಲಸವನ್ನು ಪ್ರಾರಂಭಿಸಿದ್ದಾರೆ ಎಂದು ತಿಳಿಸಿದರು.

ಸಾರ್ವಜನಿಕರು ಬಹಳ ಎಚ್ಚರಿಕೆಯಿಂದ ಹೊಸ ವರ್ಷದ ಸಂತೋಷವನ್ನು ಹಂಚಿಕೊಳ್ಳಬೇಕು. ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಅಗತ್ಯ ಬಂದೋಬಸ್ತ್ ಕೈಗೊಳ್ಳಲಾಗಿದೆ. ಯಾರಿಗೂ ತೊಂದರೆಯಾಗದಂತೆ ಹೊಸ ವರ್ಷ ಆಚರಿಸುವಂತೆ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ತಿಳಿಸಿದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!