ಸಾ.ರಾ.ಮಹೇಶ್ ಕುಟುಂಬದ ಒಡೆತನದ “ಸಾರಾ ಕನ್‌ವೆನ್ನನ್ ಹಾಲ್” ಸಂಬಂಧ ತನಿಖೆಗೆ ಸರ್ಕಾರ ಆದೇಶ.

ಮೈಸೂರು : ಇಲ್ಲಿನ ದಟ್ಟಗಳ್ಳಿಯಲ್ಲಿರುವ ಜೆಡಿಎಸ್ ರಾಜ್ಯ ಘಟಕದ ಕಾರ್ಯಾಧ್ಯಕ್ಷ, ಮಾಜಿ ಸಚಿವ ಸಾ.ರಾ.ಮಹೇಶ್ ಕುಟುಂಬದ ಒಡೆತನದ ‘ಸಾರಾ ಕನ್‌ವೆನ್ಸನ್ ಹಾಲ್’ ನಿರ್ಮಾಣದ ಕುರಿತು ತನಿಖೆಗೆ ಸರ್ಕಾರವು ಆದೇಶಿಸಿದೆ. ಈ ಬಗ್ಗೆ ನಗರಾಭಿ ವೃದ್ಧಿ ಇಲಾಖೆಯ ಅಧೀನ ಕಾರ್ಯ ದರ್ಶಿ ಕೆ. ಲತಾ, ಅಭಿವೃದ್ಧಿ ಪ್ರಾಧಿ ಕಾರಗಳು ಹಾಗೂ ನಗರ ಮತ್ತು ಗ್ರಾಮಾಂತರ ಯೋಜನಾ ಆಯು ಕಾಲಯದ ಆಯುಕ್ತರಿಗೆ ಮಾರ್ಚ್ 10ರಂದು ಪತ್ರ ಬರೆದಿದ್ದಾರೆ.
ದಟ್ಟಗಳ್ಳಿಯ ಸರ್ವೆ ಸಂಖ್ಯೆ 130/3ರಲ್ಲಿ 2 ಎಕರೆ 15 ಗುಂಟೆ ಜಾಗದಲ್ಲಿ ಮಾಲೀಕರು ಕಾನೂನು ಬಾಹಿರವಾಗಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಅಧಿಕಾರಿಗಳು ಸಹಕರಿಸಿದ್ದಾರೆ ಎಂದು ಗಂಗರಾಜು ಎಂಬುವರು ಮುಖ್ಯಮಂತ್ರಿಗಳಿಗೆ ದೂರು ಸಲ್ಲಿಸಿದ್ದಾರೆ. ಈ ದೂರಿನ ಕುರಿತು ಆಯುಕ್ತರ ಮಟ್ಟದಲ್ಲಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಪತ್ರದಲ್ಲಿ ಸೂಚಿಸಿದ್ದಾರೆ.
ದೂರು: ಸಾ.ರಾ. ಮಹೇಶ್ ಪತ್ನಿ ಅನಿತಾ ಮಹೇಶ್ ಅವರು ಕಾನೂನುಬಾಹಿರ ವಾಗಿ ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ಸರ್ಕಾರ ಹಾಗೂ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ನಷ್ಟ ಉಂಟು ಮಾಡಿ, ದಟ್ಟಗಳ್ಳಿಯಲ್ಲಿ ಅಕ್ರಮವಾಗಿ ವಾಣಿಜ್ಯ ಕಟ್ಟಡವನ್ನು ನಿರ್ಮಿಸಿದ್ದಾರೆ. ನಿರ್ಮಾಣದ ವೇಳೆ ನಿಯಮಗಳನ್ನು ಉಲ್ಲಂಘಿಸಿದ್ದು, ಮುಡಾ ಆಸ್ತಿ ಅತಿಕ್ರಮಿಸಲಾಗಿದೆ. ಇದಕ್ಕೆ ಜಿಲ್ಲಾಡಳಿತ ಹಾಗೂ ಮುಡಾದ ಹಿರಿಯ ಅಧಿಕಾರಿ ಗಳು ಸಹಕರಿಸಿದ್ದಾರೆ. ಒತ್ತುವರಿ ಕುರಿತು ತನಿಖೆ ನಡೆಸಬೇಕು. ಅಕ್ರಮಕ್ಕೆ ಸಹಕರಿಸಿರುವ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಸಾಮಾಜಿಕ ಕಾರ್ಯಕರ್ತ ಎನ್. ಗಂಗರಾಜು ಕಳೆದ ಫೆ.9ರಂದು ಮುಖ್ಯಮಂತ್ರಿ ಕಚೇರಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ಸಲ್ಲಿಸಿದ್ದರು.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!