ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.
ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ.
ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ. ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ವೇಳೆ ತೆರಿಗೆ ಕಟ್ಟದ, ವೈಟ್ ಬೋರ್ಡ್ನಲ್ಲಿ ಬೇರೆ ಬೇರೆ ರಾಜ್ಯದ ವಾಹನಗಳು ಅನಧಿಕೃತವಾಗಿ ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿರುವ ಮತ್ತು ಟ್ರಾವೆಲ್ಸ್ ನಡೆಸುತ್ತಿರುವ ವೈಟ್ ಬೋರ್ಡ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!