ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.
ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ.
ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ. ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ವೇಳೆ ತೆರಿಗೆ ಕಟ್ಟದ, ವೈಟ್ ಬೋರ್ಡ್ನಲ್ಲಿ ಬೇರೆ ಬೇರೆ ರಾಜ್ಯದ ವಾಹನಗಳು ಅನಧಿಕೃತವಾಗಿ ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿರುವ ಮತ್ತು ಟ್ರಾವೆಲ್ಸ್ ನಡೆಸುತ್ತಿರುವ ವೈಟ್ ಬೋರ್ಡ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ರಾಮ್‌ಚರಣ್‌, ಕಿಚ್ಚ ಸುದೀಪ್‌ ಬಾಡಿಗಾರ್ಡ್‌ಗಳ ನಂತರ ಈಗ ಯಶ್‌ ಅಂಗರಕ್ಷಕನ ಹವಾ!

ಚಿತ್ರರಂಗದಲ್ಲಿ ನೆಚ್ಚಿನ ನಟರ ಜೊತೆಗೆ ಅವರ ಪರ್ಸನಲ್‌ ಬಾಡಿಗಾರ್ಡ್‌ಗಳೂ ಇತ್ತೀಚೆಗೆ ಭಾರಿ ಸದ್ದು ಮಾಡುತ್ತಿದ್ದು, ಅಭಿಮಾನಿಗಳಲ್ಲಿ ಸಖತ್ ಟ್ರೆಂಡ್ ಸೃಷ್ಟಿಸುತ್ತಿದ್ದಾರೆ. ನಟ ರಾಮ್‌ ಚರಣ್‌ ಅಭಿನಯದ ಪ್ಯಾನ್‌ ಇಂಡಿಯಾ ಸಿನಿಮಾ ‘ಪೆದ್ದಿ’ ಪ್ರಚಾರದ ವೇಳೆಯಲ್ಲಿ ಅವರ ಪರ್ಸನಲ್ ಸೆಕ್ಯೂರಿಟಿ ಗಾರ್ಡ್, ಆಫ್ರಿಕಾ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!