ಸಾಲದ ಆರೋಪ ತಳ್ಳಿ ಹಾಕಿದ ಸಿಎಂ ಸಿದ್ದರಾಮಯ್ಯ: “ಅಭಿವೃದ್ಧಿಗೆ ನಿಯಮಬದ್ಧ ಸಾಲ ಅವಶ್ಯ”

ಬೆಂಗಳೂರು: ರಾಜ್ಯ ಸರ್ಕಾರ ಸಾಲದ ಮೇಲೆ ನಡೆಯುತ್ತಿದೆ ಎಂಬ ವಿರೋಧ ಪಕ್ಷಗಳ ಟೀಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಯಲ್ಲಿ ಸಮಗ್ರ ಅಂಕಿ-ಅಂಶಗಳೊಂದಿಗೆ ತಿರುಗೇಟು ನೀಡಿದರು. ಯಾವುದೇ ರಾಜ್ಯ ಅಥವಾ ದೇಶ ಸಾಲವಿಲ್ಲದೆ ಅಭಿವೃದ್ಧಿ ಸಾಧಿಸಲು ಸಾಧ್ಯವಿಲ್ಲ ಎಂದು ಹೇಳಿದ ಅವರು, ಸರ್ಕಾರ ನಿಯಮದ ಮಿತಿಯೊಳಗೆ ಮಾತ್ರ ಸಾಲ ಮಾಡುತ್ತಿದ್ದು, ಅದನ್ನು ಜನಕಲ್ಯಾಣ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಬಳಸಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಆರ್ಥಿಕ ಸ್ಥಿತಿ ದೃಢವಾಗಿದ್ದು, ಜಿಡಿಪಿ ಬೆಳವಣಿಗೆಯಲ್ಲಿ ಕರ್ನಾಟಕ ರಾಷ್ಟ್ರದ ಸರಾಸರಿಗಿಂತ ಮುಂಚೂಣಿಯಲ್ಲಿದೆ ಎಂದು ಸಿಎಂ ತಿಳಿಸಿದರು. ಗ್ಯಾರಂಟಿ ಯೋಜನೆಗಳಿಂದ ಸಾಲ ಹೆಚ್ಚುತ್ತಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಅವರು, ₹1.31 ಲಕ್ಷ ಕೋಟಿ ವೆಚ್ಚದ ಮೂಲಕ ಜನಪರ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗಿದೆ ಎಂದರು. ಕೇಂದ್ರದ ಜಿಎಸ್‌ಟಿ ನೀತಿಗಳಿಂದ ರಾಜ್ಯಕ್ಕೆ ಆದಾಯ ನಷ್ಟವಾಗುತ್ತಿದೆ ಎಂಬುದನ್ನೂ ಉಲ್ಲೇಖಿಸಿದ ಅವರು, ಈ ವಿಷಯದಲ್ಲಿ ಹಲವು ರಾಜ್ಯಗಳು ಒಟ್ಟಾಗಿ ನ್ಯಾಯ ಕೋರುತ್ತಿವೆ ಎಂದು ಹೇಳಿದರು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!