ಸಿಂಹಿಣಿ ಹಾಗೂ ಚಿರತೆಯ ರೋಚಕ ಕಾಳಗದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್.!

ಸೋಷಿಯಲ್ ಮೀಡಿಯಾದಲ್ಲಿ ಪ್ರತಿನಿತ್ಯ ಪ್ರಾಣಿ ಸಾಮ್ರಾಜ್ಯಗಳಿಗೆ ಸಂಬಂಧಪಟ್ಟ ಹಲವಾರು ಕುತೂಹಲಕಾರಿ ವಿಡಿಯೋಗಳು ಹರಿದಾಡುತ್ತಿರುತ್ತವೆ. ಇದೀಗ ಮರದ ಮೇಲೆ ಸಿಂಹ ಮತ್ತು ಚಿರತೆಯೂ ಕಾದಾಟ ನಡೆಸಿದೆ. ಆದರೆ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಪ್ರಾಣಿಗಳ ಕಾಳಗದ ವಿಡಿಯೋವು ಮೈ ಜುಮ್ಮ್ ಎನ್ನುವಂತಿದ್ದು,
ಪ್ರಾಣಿಗಳ ಲೋಕದಲ್ಲಿ ಬೇಟೆಗಾಗಿ ಪ್ರಾಣಿಗಳ ನಡುವೆ ಪರಸ್ಪರ ಕಾದಾಟಗಳು ನಡೆಯುತ್ತಲೇ ಇರುತ್ತವೆ. ಹೀಗಾಗಿ ಸಾಕಷ್ಟು ಪ್ರಾಣಿಗಳು ಬೇಟೆಯಲ್ಲಿ ಪಳಗಿರುತ್ತವೆ. ಈ ಪ್ರಾಣಿ ಪ್ರಪಂಚದಲ್ಲಿನ ಕಾದಾಟದ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿರುತ್ತದೆ. ಈ ಕ್ರೂರ ಪ್ರಾಣಿಗಳಾದ ಹುಲಿ, ಚಿರತೆ, ಸಿಂಹವು ಹೊಂಚು ಹಾಕಿ ಬೇಟೆಯಾಡುವುದರಲ್ಲಿ ಒಂದು ಕೈ ಮುಂದೆ ಎನ್ನಬಹುದು. ಈ ಬಲಿಷ್ಠ ಜೀವಿಗಳು ಒಮ್ಮೆ ಗುರಿ ಇಟ್ಟು ಬೇಟೆಗಿಳಿದರೆ ಮುಗಿದೇ ಹೋಯಿತು ವಿಫಲವಾಗುವುದು ಬಹಳ ಕಡಿಮೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಮರದ ಮೇಲೆ ಸಿಂಹ ಹಾಗೂ ಚಿರತೆಯ ನಡುವಿನ ಕಾಳಗವು ಮೈ ಜುಮ್ಮ್ ಎನಿಸುವಂತಿದೆ.


AMAZlNGNATURE ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದೆ. ಈ ಸಿಂಹ ಮತ್ತು ಚಿರತೆಯ ನಡುವಿನ ಸಂಘರ್ಷದ ವಿಡಿಯೋ ಇದಾಗಿದ್ದು, ಈ ಈ ಕಾಳಗ ಯಾವುದೇ ಕಾಡಿನಲ್ಲಿ ನಡೆಯದೇ ಮರದಲ್ಲಿ ನಡೆದಿದೆ. ಹೌದು, ಸಿಂಹ ಹಾಗೂ ಚಿರತೆ ನಡುವಿನ ಸಂಘರ್ಷ ನಡೆದಿದ್ದು, ಈ ಕ್ರೂರ ಪ್ರಾಣಿಗಳು ಮರದ ಮೇಲೆಯೇ ಉಗ್ರ ಹೋರಾಟಕ್ಕೆ ಇಳಿದಿದ್ದು, ಇತ್ತ ಈ ಸಿಂಹಿಣಿ ಕೂಡ ತನ್ನ ಶಕ್ತಿಯಿಂದ ಚಿರತೆಯನ್ನು ಮಣಿಸಲು ಮುಂದಾಗಿದೆ.
ಚಿರತೆಯು ನಾನೇನು ಕಮ್ಮಿ ಎಂದು ತನಗಿರುವ ಬಲದಿಂದ, ಸಿಂಹದ ಮೇಲೆ ಎರಗಿದೆ. ಆದರೆ ಕೊನೆಗೆ ಮರದ ಕೊಂಬೆಯೇ ಮುರಿದು ಬಿದಿದೆ. ಇತ್ತ ಚಿರತೆ ತನ್ನ ಚಾಣಾಕ್ಷತೆಯಿಂದ ಸಿಂಹಿಣಿಯ ದಾಳಿಯನ್ನು ತಪ್ಪಿಸಿ ಕೊಂಡಿದೆ. ಈ ಮೈ ಜುಮ್ಮ್ ಎನಿಸುವ ಕಾದಾಟದ ವಿಡಿಯೋ ವೈರಲ್ ಆಗುತ್ತಿದ್ದಂತೆ ಹತ್ತು ಮಿಲಿಯನ್ಸ್ ಗೂ ಅಧಿಕ ವೀಕ್ಷಣೆಗಳನ್ನು ಕಂಡಿದೆ.
ವೀಡಿಯೋ ನೋಡಿ ನೆಟ್ಟಿಗರು, ಕ್ರೂರ ಪ್ರಾಣಿಗಳ ಕಾದಾಟದ ಬಗ್ಗೆ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ. ಒಬ್ಬ ಬಳಕೆದಾರನು “ಪ್ರಕೃತಿಯನ್ನು ಪ್ರಕೃತಿಗಾಗಿ ನಿರ್ಮಿಸಲಾಗಿದೆ” ಎಂದು ಬರೆದಿದ್ದಾರೆ. ಮತ್ತೊಬ್ಬರು, ‘ಈ ಕ್ರೂರ ಪ್ರಾಣಿಗಳು ಮರದಲ್ಲಿ ಏನು ಮಾಡುತ್ತಿವೆ’ ಎಂದು ಕಾಮೆಂಟ್ ಮಾಡಿದ್ದಾರೆ. ಇನ್ನೊಬ್ಬರ ಬಳಕೆದಾರರು, ‘ಈ ಪ್ರಾಣಿಗಳ ಕಾದಾಟ ನೋಡುವುದಕ್ಕೆ ಭಯಂಕರವಾಗಿದೆ’ ಎಂದಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!