ಸಿಎಂ ಸಿದ್ದರಾಮಯ್ಯ ಅವರ ಆರೋಗ್ಯ ಏಕಾಏಕಿ ಬಿಗಡಾಯಿಸಿದ ಕಾರಣ ಅವರು ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಗೌರಿಬಿದನೂರಿಗೆ ಇವತ್ತು ತೆರಳಬೇಕಿತ್ತು ಆ ಒಂದು ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ.
ಆಸ್ಪತ್ರೆಗೆ ದಾಖಲಾದ ಹಿನ್ನೆಲೆಯಲ್ಲಿ ಇಂದು ನಿಗದಿಯಾಗಿದ್ದ ಚಿಕ್ಕಬಳ್ಳಾಪುರ ಮತ್ತು ರಾಮನಗರ ಪ್ರವಾಸ ರದ್ದಾಗಿದೆ. ಚಿಕ್ಕಬಳ್ಳಾಪುರದ ಹೊಸೂರು ಗ್ರಾಮಕ್ಕೆ ಇಂದು ಸಿದ್ದರಾಮಯ್ಯ ಭೇಟಿ ನೀಡಬೇಕಿತ್ತು. ಆದರೆ ಇದೀಗ ದಿಢೀರ್ ಆಗಿ ಸಿದ್ದರಾಮಯ್ಯ ಭೇಟಿ ರದ್ದಾಗಿದೆ.
ಮುಂದಿನ ಎಲ್ಲಾ ಕಾರ್ಯಕ್ರಮಗಳು ಮುಂದೂಡುವ ಸಾಧ್ಯತೆಗಳು ಇವೆ. ಗೌರಿಬಿದನೂರಿಗೆ ತೆರಳುವ ವೇಳೆ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಸಿಎಂ ಸಿದ್ದರಾಮಯ್ಯ ಮಣಿಪಾಲ್ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೈದ್ಯರ ಸಲಹೆಯ ಮೇರೆಗೆ ಮುಂದಿನ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕಾ ಬೇಡವಾ ಎಂಬ ನಿರ್ಧಾರಗಳಿಗೆ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ
ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…





