ಸುಂದರ ಕ್ಷಣಕ್ಕೆ ಸಾಕ್ಷಿಯಾದ ಗೆಲುವು…. ಪತ್ನಿಯ ಗೆಲುವನ್ನು ತನ್ನ ಗೆಲುವೆಂದು ಸಂಭ್ರಮಿಸಿದ ಪತಿ….

ಮದುವೆಯಾದ ಬಳಿಕ ಹೆಣ್ಣು ಮಕ್ಕಳ ಜೀವನದಲ್ಲಿ ಸಾಕಷ್ಟು ಬದಲಾವಣೆಯಾಗುತ್ತದೆ. ಗಂಡ ಮನೆ ಮಕ್ಕಳು ಎಂದು ತನ್ನ ಕುಟುಂಬಕ್ಕಾಗಿ ತನ್ನ ಆಸೆ ಆಕಾಂಕ್ಷೆಗಳನ್ನು ತ್ಯಜಿಸಬೇಕಾಗುತ್ತದೆ. ಆದರೆ ತನ್ನ ಕನಸುಗಳಿಗೆ ಬೆಂಬಲ ನೀಡುವ ಪತಿ ಸಿಕ್ಕರೆ ಆಕೆಯಷ್ಟು ಅದೃಷ್ಟವಂತೆ ಬೇರೆ ಯಾರು ಇಲ್ಲ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ ಪತ್ನಿ ವೇದಿಕೆಯ ಮೇಲೆ ಗೆಲುವಿನ ಕಿರೀಟ ಅಲಂಕರಿಸಿದರೆ ಪತಿ ಸಿಳ್ಳೆ ಹೊಡೆದು ಆ ಕ್ಷಣವನ್ನು ಸಂಭ್ರಮಿಸಿರುವ ವಿಡಿಯೋವೊಂದು ನೆಟ್ಟಿಗರ ಹೃದಯವನ್ನು ಗೆದ್ದುಕೊಂಡಿದೆ.

ಪ್ರತಿಯೊಬ್ಬ ಹೆಣ್ಣು ಗಂಡ ತನ್ನ ಜೊತೆಗೆ ನಿಲ್ಲಬೇಕು, ತನ್ನ ಸಂತೋಷ, ನೋವು ಹಾಗೂ ಕನಸುಗಳಿಗೆ ಬೆಂಬಲವಾಗಿ ನಿಲ್ಲಬೇಕು ಎಂದು ಬಯಸುತ್ತಾಳೆ. ಅಂತಹ ಗಂಡ ಸಿಕ್ಕರೆ ಅದಕ್ಕಿಂತ ಹೆಚ್ಚು ಇನ್ನೇನು ಬೇಕು ಅಲ್ಲವೇ, ಅಂತಹ ಗಂಡನನ್ನು ಪಡೆದಿರುವುದೇ ಆಕೆಯ ಅದೃಷ್ಟ ಎನ್ನಬಹುದು. ಇದೀಗ ವೈರಲ್ ಆಗಿರುವ ಈ ವಿಡಿಯೋವು ಪತಿಯೂ ತನ್ನ ಪತ್ನಿಯ ಕನಸಿಗೆ ಹಾಗೂ ಗೆಲುವಿಗೆ ಹೇಗೆ ಬೆಂಬಲವಾಗಿ ನಿಂತಿದ್ದಾನೆ ಎನ್ನುವುದಕ್ಕೆ ಸಾಕ್ಷಿಯಾಗಿದೆ. ಹೌದು, ವೇದಿಕೆಯ ಮೇಲೆ ಮಹಿಳೆಯೊಬ್ಬಳು ಗೆಲುವಿನ ಕಿರೀಟ ಮುಡಿಗೇರಿಸಿಕೊಂಡಿದ್ದಾಳೆ. ವೇದಿಕೆ ಮುಂಭಾಗದಲ್ಲಿ ಪತಿಯೂ ಮಗನನ್ನು ಎತ್ತಿಕೊಂಡು ಈ ಗೆಲುವನ್ನು ಸಂಭ್ರಮಿಸಿದ್ದಾನೆ. ಈ ವಿಡಿಯೋವೊಂದು ಸೋಶಿಯಲ್ ಮೀಡಿಯಾ ದಲ್ಲಿ ವೈರಲ್ ಆಗುತ್ತಿದ್ದಂತೆ ಈಕೆ ನಿಜಕ್ಕೂ ಅದೃಷ್ಟವಂತೆ ಎಂದು ಕಾಮೆಂಟ್ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಎಲ್ಲಾ ಗಂಡಸರು ಅಡುಗೆ ಮಾಡೋದಕ್ಕೆ, ಮನೆ ಸ್ವಚ್ಛಗೊಳಿಸುವುದಕ್ಕೆ ಹಾಗೂ ಮನೆಯ ನಿರ್ವಹಿಸುವುದಕ್ಕೆ ಮದುವೆಯಾಗಲ್ಲ, ಕೆಲವರು ಮಾತ್ರ ತಮ್ಮ ಪತ್ನಿ ಗೆಲುವುದನ್ನು ನೋಡಲು ಇಷ್ಟ ಪಡುತ್ತಾರೆ. ಗೆದ್ದರೆಅದನ್ನು ಸಂಭ್ರಮಿಸುತ್ತಾರೆ ಎಂದು ಬರೆಯಲಾಗಿದೆ ಈ ವಿಡಿಯೋದಲ್ಲಿ ಮಹಿಳೆಯೊಬ್ಬರು ಅಡುಗೆ ಕೆಲಸದಲ್ಲಿ ಬ್ಯುಸಿಯಾಗಿರುವುದನ್ನು ನೋಡಬಹುದು. ಆ ಬಳಿಕ ಬಾಡಿ ಬಿಲ್ಡಿಂಗ್ನಲ್ಲಿ ಗೆಲುವು ಸಾಧಿಸಿ ವೇದಿಕೆಯ ಮೇಲೆ ನಿಂತಿರುವ ಪತ್ನಿಯನ್ನು ಕಂಡು ಪತಿಯೂ ಖುಷಿ ಪಟ್ಟಿದ್ದಾನೆ. ಮಗುವನ್ನು ಎತ್ತಿಕೊಂಡು ಸ್ಟೇಜ್ ಮುಂದೆ ನಿಂತಿದ್ದ ಸಿಳ್ಳೆ ಹೊಡೆದು ಪತ್ನಿಯ ಗೆಲುವನ್ನು ಸಂಭ್ರಮಿಸುತ್ತಿರುವುದನ್ನು ಕಾಣಬಹುದು.

 

 

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!