ಹಣ್ಣುಗಳ ರಾಣಿ ಎಂದೇ ಕರೆಸಿಕೊಳ್ಳುವ ಈ ಹಣ್ಣಿನ ಹೆಸರು ಗೊತ್ತಾ?..

ಹಣ್ಣುಗಳು ಎಂದೊಡನೆ ಎಂತವರಿಗಾದರೂ ತಿನ್ನಬೇಕೆಂಬ ಆಸೆ ಆಗುತ್ತದೆ. ನಮಗೆ ಗೊತ್ತೇ ಇರದ ಅದೆಷ್ಟೋ ವಿಶಿಷ್ಟ ಜಾತಿಯ ಹಣ್ಣುಗಳು ಈ ಸೃಷ್ಟಿಯಲ್ಲಿವೆ.ಸಾಮಾನ್ಯವಾಗಿ ಹಣ್ಣುಗಳ ರಾಜ ಎಂದ ಕೇಳಿದ ಕೂಡಲೇ ನೆನಪಿಗೆ ಬರುವುದೇ ಈ ಮಾವಿನಹಣ್ಣು. ಹಾಗಾದ್ರೆ ಹಣ್ಣುಗಳ ರಾಣಿ ಎಂದು ಯಾವ ಹಣ್ಣನ್ನು ಕರೆಯುತ್ತಾರೆ ಎಂದು ನಿಮಗೆ ತಿಳಿದಿದೆಯೇ. ಹಣ್ಣುಗಳ ರಾಣಿ ಕೂಡ ಇದೆಯೇ ಎಂದು ನಿಮಗೆ ಅಚ್ಚರಿಯಾಗಬಹುದು. ಹೌದು, ಈ ಬಗ್ಗೆ ಹೆಚ್ಚಿನವರಿಗೆ ತಿಳಿದೇ ಇಲ್ಲ. ಕ್ವೀನ್ ಆಫ್ ಫ್ರೂಟ್ಸ್ ಎನ್ನುವ ಖ್ಯಾತಿಗೆ ಪಾತ್ರರಾಗಿರುವ ಈ ಹಣ್ಣಿನ ಕುರಿತಾದ ಕೆಲವು ಕುತೂಹಲಕಾರಿ ಮಾಹಿತಿ ಇಲ್ಲಿದೆ. ಹಣ್ಣುಗಳ ರಾಣಿ ಎಂದೇ ಖ್ಯಾತಿ ಪಡೆದಿರುವ ಹಣ್ಣು ಮ್ಯಾಂಗೋಸ್ಟೀನ್. ಇದೊಂದು ಉಷ್ಣವಲಯದಲ್ಲಿ ಬೆಳೆಯಲಾಗುವ ಹಣ್ಣಾಗಿದ್ದು, ಇಲ್ಲಿಯವರೆಗೆ ಈ ಹಣ್ಣಿನ ಹೆಸರನ್ನು ಕೇಳಿರಲೇ ಇಲ್ಲವಲ್ಲ ಎಂದು ನಿಮಗೆ ಅನಿಸಬಹುದು. ಆದರೆ ಇದೇ ಹಣ್ಣುಗಳ ರಾಣಿ.

ಇನ್ನು ಈ ಹಣ್ಣು ಯಾವ ರೀತಿ ಇರುತ್ತದೆ ಎಂಬುದನ್ನು ನೋಡುವುದಾದರೆ, ಈ ಮ್ಯಾಂಗೋಸ್ಟೀನ್ ಹಣ್ಣು ನೋಡುವುದಕ್ಕೆ ಗಾಢ ನೇರಳೆ ಬಣ್ಣದಲ್ಲಿದ್ದು, ಒಳಗೆ ಬಿಳಿ ಬಣ್ಣದ ತಿರುಳನ್ನು ಹೊಂದಿದ್ದು, ನೋಡುವುದಕ್ಕೆ ಮಾತ್ರವಲ್ಲ ರುಚಿ ಕೂಡ ಅಷ್ಟೇ ಅದ್ಭುತ. ಈ ಹಣ್ಣಿನ ಸೇವನೆಯಿಂದ ಆರೋಗ್ಯ ಲಾಭಗಳು ಸಾಕಷ್ಟು ಇವೆ.ಥೈಲ್ಯಾಂಡ್, ಮಲೇಷಿಯಾ, ಇಂಡೋನೇಷ್ಯಾ ಹಾಗೂ ಫಿಲಿಪೈನ್ಸ್ ನಲ್ಲಿ ಹೇರಳವಾಗಿ ಬೆಳೆಯಲಾಗುವ ಈ ಹಣ್ಣು ಋತುಮಾನದ ಹಣ್ಣಾಗಿದೆ. ಕೇರಳ, ಕರ್ನಾಟಕದ ಕರಾವಳಿ ಪ್ರದೇಶಗಳಲ್ಲಿ ಈ ಹಣ್ಣು ಕಾಣಸಿಗುತ್ತದೆ.

ಭಾರತದಲ್ಲಿ ಈ ಹಣ್ಣು ಮೇ ಆಗಸ್ಟ್ ತಿಂಗಳಿನಲ್ಲಿ ಹೇರಳವಾಗಿ ಕಾಣಸಿಗುತ್ತದೆ. ಇದು ರುಚಿಯಲ್ಲಿ ಮಾವಿನ ಹಣ್ಣಿನಂತೆ ಇದ್ದು, ಹೀಗಾಗಿ ಇದಕ್ಕೆ ಮ್ಯಾಂಗೋಸ್ಟೀನ್ ಎಂಬ ಹೆಸರು ಬಂದಿತಂತೆ. ಅಷ್ಟೇ ಅಲ್ಲದೇ, 1930ರ ದಶಕದಲ್ಲಿ ಅಮೆರಿಕಾದ ಸಸ್ಯಶಾಸ್ತ್ರಜ್ಞ ಡೇವಿಡ್ ಫೇರ್ಚೈಲ್ಡ್ ಮ್ಯಾಂಗೋಸ್ಟೀನ್ಗೆ “ಹಣ್ಣುಗಳ ರಾಣಿ” ಎಂದು ಕರೆದಿದ್ದು, ಅಂದಿನಿಂದ ರಸಭರಿತವಾದ ಈ ಹಣ್ಣು ಈ ಹೆಸರಿನಿಂದಲೇ ಜನಪ್ರಿಯವಾಯಿತು.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!