ಇವರಿಗೆ ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ್ ಸೇರಿದಂತೆ ಇಬ್ಬರು ಗಂಡು ಓರ್ವ ಮಗಳಿದ್ದಾರೆ. ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ಇಂದು ಸಂಜೆ ಶುಂಠಿ ತುಂಬಿಕೊಳ್ಳಲು ಕುಕ್ಕೆ ತರಲು ಕಾರ್ಮಿಕ ಗಣೇಶ್ ತೋಟದ ಮನೆಗೆ ಬಂದಾಗ ಕೃತ್ಯ ಬೆಳಕಿಗೆ ಬಂದಿದೆ.ರಕ್ತದ ಮಡುವಿನಲ್ಲಿ ಮೃತದೇಹಗಳನ್ನ ಕಂಡ ಗಣೇಶ್ ಕೂಡಲೇ ಪುತ್ರ ದೇವರಾಜ್ ಗೆ ತಿಳಿಸಿದ್ದಾರೆ.

ದೇವರಾಜ್ಮ ನೆಗೆ ಬಂದ ವೇಳೆಗೆ ಇಬ್ಬರೂ ಸಾವನ್ನಪ್ಪಿದ್ದರೆಂದು ಹೇಳಲಾಗಿದೆ. ಕೂಡಲೇ ಬಿಳಿಕೆರೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಸ್ಥಳಕ್ಕೆ ದಕ್ಷಿಣ ವಲಯ ಐಜಿಪಿ ಡಾ.ಬೋರಲಿಂಗಯ್ಯ,ಎಸ್ಪಿ ವಿಷ್ಣುವರ್ಧನ್ ,ಡಿವೈಎಸ್ಪಿ ಗೋಪಾಲಕೃಷ್ಣ,ಸಬ್ ಇನ್ಸ್ಪೆಕ್ಟರ್ ಲೋಲಾಕ್ಷಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಮೈಸೂರಿನಿಂದ ಶ್ವಾನದಳ. ಬೆರಳಚ್ಚು ತಜ್ಞರು ಭೇಟಿ ನೀಡಿದ್ದಾರೆ…





