ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….

ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ ಹೆಚ್ಚಿಸುವುದಕ್ಕಲ್ಲ. ಇದರ ಹಿಂದೆ ಮಹತ್ತರ ಕಾರಣವಿದೆ. ಹೌದು, ಈ ರೀತಿ ಮೂಗು ಚುಚ್ಚುವುದರ ಹಿಂದೆ ಕಾರಣವಿದೆ. ಹಾಗಾದರೆ ಏನದು? ಯಾಕೆ ಎಡಭಾಗದಲ್ಲಿ ಮೂಗುತಿ ಹಾಕಬೇಕು ಎಂಬುದರ ವಿಶೇಷ ಮಾಹಿತಿ ಇಲ್ಲಿದೆ ನೋಡಿ….

ಅಲಂಕಾರಿಕ ದೃಷ್ಟಿಕೋನದಿಂದ ನೋಡುವುದಾದರೆ ಇದು ಹೆಣ್ಣಿನ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. ಆದರೆ ಇದು ಅಂದ ಹೆಚ್ಚಿಸುವುದಕ್ಕೆ ಮಾತ್ರವಲ್ಲ ಬದಲಾಗಿ ಈ ಆಭರಣಗಳು ಮಹಿಳೆಯರ ಆರೋಗ್ಯ ಕಾಪಾಡುತ್ತವೆ. ಕೆಲವು ಕಡೆಗಳಲ್ಲಿ ಮದುವೆಯಾದ ಹೆಂಗಸರು ಇದನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಇದೊಂದು ವಿವಾಹಿತರ ಸಂಕೇತ ಅದಲ್ಲದೆ ಮೂಗುತಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ನಂಬಿಕೆಗಳ ಪ್ರಕಾರ, ಮೂಗು ಚುಚ್ಚುವುದು ಪಾರ್ವತಿ ದೇವಿಯನ್ನು ಗೌರವಿಸುವ ಒಂದು ಮಾರ್ಗವಾಗಿದೆ. ಇದನ್ನು ಹದಿನಾರು ಅಲಂಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಗು ಅಥವಾ ಕಿವಿಗಳನ್ನು ಚುಚ್ಚಿಕೊಳ್ಳುವುದನ್ನು ಅಲಂಕಾರದ ಒಂದು ರೂಪವೆಂದು ನಾವು ಪರಿಗಣಿಸಬಹುದು, ಆದರೆ ಅದರ ಹಿಂದೆ ವೈಜ್ಞಾನಿಕ ಕಾರಣವಿದೆ. ವಾಸ್ತವವಾಗಿ, ಮೂಗು ಚುಚ್ಚುವುದರಿಂದ ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಪರಿಹಾರ ಸಿಗುತ್ತದೆ ಎಂದು ವೇದಗಳು ಮತ್ತು ಧರ್ಮಗ್ರಂಥಗಳಲ್ಲಿ ಬರೆಯಲಾಗಿದೆ. ಹೆಚ್ಚುವರಿಯಾಗಿ, ಹೆರಿಗೆಯ ಸಮಯದಲ್ಲಿ ಮಗುವಿಗೆ ಜನ್ಮ ನೀಡುವುದು ಸಹ ತುಂಬಾ ಸುಲಭವಾಗುತ್ತದೆ ಇದು ಆ ನೋವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ನಡೆದ ಕೆಲವು ಸಂಶೋಧನಗೆಳು ಕೂಡ ಇದಕ್ಕೆ ಪೂರಕವಾಗಿದೆ. ಮಾತ್ರವಲ್ಲ ಇದು ಮೈಗ್ರೇನ್ ನೋವಿನಿಂದ ಕೂಡ ಪರಿಹಾರ ನೀಡುತ್ತದೆ.

 

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

  ಒಡಿಶಾದ ಶಿಕ್ಷಾ ಓ ಅನುಸಂಧಾನ ವಿಶ್ವವಿದ್ಯಾಲಯವು ಕರ್ನಾಟಕದ ಹೆಮ್ಮೆಯ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಿ ಸನ್ಮಾನಿಸಿದೆ. ನ್ಯಾಯಾಂಗ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಟ ಸೇವೆ, ನ್ಯಾಯದ ಪರವಾದ ಬದ್ಧತೆ, ವಿದ್ವತ್ತು ಹಾಗೂ ಮಾನವೀಯ ಮೌಲ್ಯಗಳ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!