ಹೆಣ್ಣುಮಕ್ಕಳಿಗೆ ಏಕೆ ಮೂಗು ಚುಚ್ಚುತ್ತಾರೆ ಗೊತ್ತಾ? ಇದರ ಹಿಂದಿದೆ ಒಂದು ಮಹತ್ತರ ಕಾರಣ ….

ಭಾರತೀಯರಿಗೆ ಮೂಗು ಚುಚ್ಚುವುದು ವಿವಾಹ ಸಂಪ್ರದಾಯದ ಒಂದು ಪ್ರಮುಖ ಆಚರಣೆ ಅಥವಾ ಭಾಗ. ಪ್ರಾಚೀನ ಕಾಲದಲ್ಲಿ, ಪುರುಷರು ಮತ್ತು ಮಹಿಳೆಯರು ಇಬ್ಬರೂ ಕೂಡ ತಮ್ಮ ಕಿವಿಗಳನ್ನು ಚುಚ್ಚಿಕೊಳ್ಳುತ್ತಿದ್ದರು. ಮಾತ್ರವಲ್ಲ ಮಹಿಳೆಯರು ಮೂಗು ಚುಚ್ಚಿಕೊಳ್ಳುತ್ತಿದ್ದರು. ಮೂಗು ಚುಚ್ಚಿ ಮೂಗುತಿ ಹಾಕುವುದು ಮಹಿಳೆಯರ ಅಂದ ಹೆಚ್ಚಿಸುವುದಕ್ಕಲ್ಲ. ಇದರ ಹಿಂದೆ ಮಹತ್ತರ ಕಾರಣವಿದೆ. ಹೌದು, ಈ ರೀತಿ ಮೂಗು ಚುಚ್ಚುವುದರ ಹಿಂದೆ ಕಾರಣವಿದೆ. ಹಾಗಾದರೆ ಏನದು? ಯಾಕೆ ಎಡಭಾಗದಲ್ಲಿ ಮೂಗುತಿ ಹಾಕಬೇಕು ಎಂಬುದರ ವಿಶೇಷ ಮಾಹಿತಿ ಇಲ್ಲಿದೆ ನೋಡಿ….

ಅಲಂಕಾರಿಕ ದೃಷ್ಟಿಕೋನದಿಂದ ನೋಡುವುದಾದರೆ ಇದು ಹೆಣ್ಣಿನ ಸೌಂದರ್ಯವನ್ನು ಇಮ್ಮಡಿಗೊಳಿಸುವುದರಲ್ಲಿ ಸಂಶಯವಿಲ್ಲ. ಆದರೆ ಇದು ಅಂದ ಹೆಚ್ಚಿಸುವುದಕ್ಕೆ ಮಾತ್ರವಲ್ಲ ಬದಲಾಗಿ ಈ ಆಭರಣಗಳು ಮಹಿಳೆಯರ ಆರೋಗ್ಯ ಕಾಪಾಡುತ್ತವೆ. ಕೆಲವು ಕಡೆಗಳಲ್ಲಿ ಮದುವೆಯಾದ ಹೆಂಗಸರು ಇದನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಇದೊಂದು ವಿವಾಹಿತರ ಸಂಕೇತ ಅದಲ್ಲದೆ ಮೂಗುತಿ ಧರಿಸುವುದು ಶುಭವೆಂದು ಪರಿಗಣಿಸಲಾಗುತ್ತದೆ. ಕೆಲವು ನಂಬಿಕೆಗಳ ಪ್ರಕಾರ, ಮೂಗು ಚುಚ್ಚುವುದು ಪಾರ್ವತಿ ದೇವಿಯನ್ನು ಗೌರವಿಸುವ ಒಂದು ಮಾರ್ಗವಾಗಿದೆ. ಇದನ್ನು ಹದಿನಾರು ಅಲಂಕಾರಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಮೂಗು ಅಥವಾ ಕಿವಿಗಳನ್ನು ಚುಚ್ಚಿಕೊಳ್ಳುವುದನ್ನು ಅಲಂಕಾರದ ಒಂದು ರೂಪವೆಂದು ನಾವು ಪರಿಗಣಿಸಬಹುದು, ಆದರೆ ಅದರ ಹಿಂದೆ ವೈಜ್ಞಾನಿಕ ಕಾರಣವಿದೆ. ವಾಸ್ತವವಾಗಿ, ಮೂಗು ಚುಚ್ಚುವುದರಿಂದ ಮಹಿಳೆಯರಿಗೆ ಮುಟ್ಟಿನ ನೋವಿನಿಂದ ಪರಿಹಾರ ಸಿಗುತ್ತದೆ ಎಂದು ವೇದಗಳು ಮತ್ತು ಧರ್ಮಗ್ರಂಥಗಳಲ್ಲಿ ಬರೆಯಲಾಗಿದೆ. ಹೆಚ್ಚುವರಿಯಾಗಿ, ಹೆರಿಗೆಯ ಸಮಯದಲ್ಲಿ ಮಗುವಿಗೆ ಜನ್ಮ ನೀಡುವುದು ಸಹ ತುಂಬಾ ಸುಲಭವಾಗುತ್ತದೆ ಇದು ಆ ನೋವನ್ನು ಕಡಿಮೆ ಮಾಡುತ್ತದೆ ಎಂದು ಹೇಳಲಾಗುತ್ತದೆ. ಈ ಬಗ್ಗೆ ನಡೆದ ಕೆಲವು ಸಂಶೋಧನಗೆಳು ಕೂಡ ಇದಕ್ಕೆ ಪೂರಕವಾಗಿದೆ. ಮಾತ್ರವಲ್ಲ ಇದು ಮೈಗ್ರೇನ್ ನೋವಿನಿಂದ ಕೂಡ ಪರಿಹಾರ ನೀಡುತ್ತದೆ.

 

Related Posts

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

ಕನ್ನಡ ಚಿತ್ರರಂಗದ ಕ್ಲಾಸಿಕ್ ಸಿನಿಮಾ ಎಂಬ ಖ್ಯಾತಿ ‘ಹಳ್ಳಿ ಮೇಷ್ಟ್ರು’ ಚಿತ್ರಕ್ಕಿದೆ. ಈ ಸಿನಿಮಾ ಬಿಡುಗಡೆಯಾಗಿ 3 ದಶಕಗಳೇ ಕಳೆದಿವೆ. ಈ ಚಿತ್ರದ ಶೂಟಿಂಗ್ ಸಮಯದಲ್ಲಿ ನಡೆದಿದ್ದ ಒಂದು ವಿವಾದ ಮಾತ್ರ ನಟಿ ಬಿಂದಿಯಾ ಮತ್ತು ಕ್ರೇಜಿಸ್ಟಾರ್ ರವಿಚಂದ್ರನ್ ನಡುವೆ ದೊಡ್ಡ…

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ವಿಜಯಪುರ ಜಿಲ್ಲೆಯ ಭೀಮಾ ನದಿ ತೀರದಲ್ಲಿ ಮತ್ತೆ ನೆತ್ತರ ಹರಿದಿದ್ದು, ಭೀಕರ ಸಾಮೂಹಿಕ ಹತ್ಯಾಕಾಂಡ ಇಡೀ ಜಿಲ್ಲೆಯನ್ನು ತಲ್ಲಣಗೊಳಿಸಿದೆ. ಜಮೀನು ವ್ಯಾಜ್ಯದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ಐವರು ಹಾಗೂ ಅವರ ಸ್ನೇಹಿತ ಸೇರಿದಂತೆ ಒಟ್ಟು ಆರು ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ, ಗುಂಡು…

You Missed

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

ಮತದಾರರ ಪಟ್ಟಿ ಪರಿಷ್ಕರಣೆ (SIR): ಅಧಿಕಾರಿಗಳಿಗೆ ಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ

3 ದಶಕಗಳ ಬಳಿಕ ನಟಿ ಬಿಂದ್ಯಾ ಕ್ಷಮೆ ಕೇಳಿದ್ದೇಕೆ?

3 ದಶಕಗಳ ಬಳಿಕ  ನಟಿ ಬಿಂದ್ಯಾ  ಕ್ಷಮೆ ಕೇಳಿದ್ದೇಕೆ?

ಭೀಮಾ ನದಿ ತೀರದಲ್ಲಿ ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಭೀಮಾ ನದಿ ತೀರದಲ್ಲಿ  ಒಂದೇ ಕುಟುಂಬದ ಐವರು ಸೇರಿ 6 ಜನರ ಭೀಕರ ಕೊ*ಲೆ!

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಕರ್ನಾಟಕ ನೂತನ ಸಿಎಂ ಆಯ್ಕೆ: ಇಂದು ಸಂಜೆ ವಿಧಾನಸೌಧದಲ್ಲಿ ಮಹತ್ವದ ಸಿಎಲ್‌ಪಿ ಸಭೆ

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಆತ್ಮನಿರ್ಭರ ಭಾರತಕ್ಕೆ ದೊಡ್ಡ ಬಲ: ಅತ್ಯಂತ ಬಲಿಷ್ಠ ‘ವೆಲ್ಡೆಡ್ ಪೈಪ್’ ಉತ್ಪಾದಿಸಿ ದಾಖಲೆ ಬರೆದ AM/NS ಇಂಡಿಯಾ!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!

ಕರ್ನಾಟಕ ರಾಜಕೀಯದಲ್ಲಿ ಹೈಡ್ರಾಮಾ: ಸಿದ್ದರಾಮಯ್ಯ ರಾಜೀನಾಮೆಗೆ ಹೈಕಮಾಂಡ್ ಗಡುವು!