ಹೈಕೋರ್ಟ್ ವರ್ಚುವಲ್ ವಿಚಾರಣೆಗೆ ಟಾಯ್ಲೆಟ್ನಲ್ಲಿ ಕುಳಿತು ಹಾಜರಾದ ಆರೋಪಿ;

ಕೊವಿಡ್ -19 ಸಾಂಕ್ರಾಮಿಕ ರೋಗ ಪ್ರಾರಂಭವಾದಾಗಿನಿಂದ ವರ್ಚುವಲ್ ಮೀಟಿಂಗ್ ದೈನಂದಿನ ಜೀವನದ ಭಾಗವಾಗಿದ್ದು, ವೈಯಕ್ತಿಕ ಮತ್ತು ವೃತ್ತಿಪರ ಸ್ಥಳಗಳ ನಡುವಿನ ಗೆರೆಗಳನ್ನು ಮಸುಕುಗೊಳಿಸುತ್ತಿವೆ. ಆನ್ಲೈನ್ ಮೀಟಿಂಗ್ ಸಮಯದಲ್ಲಿ ಬೆಡ್ರೂಂನಿಂದ ವಿಡಿಯೊ ಕರೆಗಳಿಗೆ ಹಾಜರಾಗುವುದು, ಮೀಟಿಂಗ್ ವೇಳೆಯೂ ಬೇರೆ ಕೆಲಸ ಮಾಡುವುದು ಅಸಾಮಾನ್ಯವೇನಲ್ಲ. ಆದರೆ, ಗುಜರಾತ್ ಹೈಕೋರ್ಟ್ ವಿಚಾರಣೆಗೆ ಶೌಚಾಲಯದಿಂದಲೇ ವ್ಯಕ್ತಿಯೊಬ್ಬರು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗುವ ಮೂಲಕ ನೆಟ್ಟಿಗರನ್ನು ಬೆರಗುಗೊಳಿಸಿದ್ದಾರೆ. ಇಂತಹ ಘಟನೆಗಳು ಕಾನೂನಿಗೆ ಮಾಡುವ ಅವಮಾನ ಎಂದು ಹಲವರು ಆಕ್ರೋಶ ಹೊರಹಾಕಿದ್ದಾರೆ.

ಗುಜರಾತ್ ಹೈಕೋರ್ಟ್ನ ವರ್ಚುವಲ್ ವಿಚಾರಣೆಗೆ ಹಾಜರಾದ ವ್ಯಕ್ತಿಯೊಬ್ಬರು ಟಾಯ್ಲೆಟ್ ಸೀಟಿನ ಮೇಲೆ ಕುಳಿತು ವಿಚಾರಣೆಯಲ್ಲಿ ಭಾಗಿಯಾದ ಕ್ಷಣವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲಾಗಿದೆ. ಈ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಜೂನ್ 20ರಂದು ನ್ಯಾಯಮೂರ್ತಿ ನಿರ್ಜಾರ್ ಎಸ್ ದೇಸಾಯಿ ಅವರ ಪೀಠದ ಮುಂದೆ ಈ ಘಟನೆ ನಡೆದಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ ವ್ಯಕ್ತಿ “ಸಮದ್ ಬ್ಯಾಟರಿ” ಎಂಬ ಹೆಸರಿನಲ್ಲಿ ವರ್ಚುವಲ್ ಕೋರ್ಟ್ ವಿಚಾರಣೆಗೆ ಲಾಗಿನ್ ಆಗಿದ್ದಾನೆ. ಆತ ಕುತ್ತಿಗೆಗೆ ಬ್ಲೂಟೂತ್ ಇಯರ್ಫೋನ್ ಧರಿಸಿರುವುದು ಕಂಡುಬಂದಿದೆ. ಕೋರ್ಟ್ ವಿಚಾರಣೆ ಪ್ರಾರಂಭವಾಗುತ್ತಿದ್ದಂತೆ ಅವನು ಆರಂಭದಲ್ಲಿ ತನ್ನ ಫೋನ್ ಅನ್ನು ದೂರದಲ್ಲಿ ಇರಿಸಿದನು. ಆಗ ಆತ ಟಾಯ್ಲೆಟ್ನಲ್ಲಿ ಕುಳಿತಿರುವುದು ಕಂಡಿತು. ಹಾಗೇ, ಬಾತ್ರೂಂನಿಂದ ಹೊರಬರುವ ಮೊದಲು ಅವನು ತನ್ನನ್ನು ತಾನು ಒರೆಸಿಕೊಳ್ಳುವುದನ್ನು ದೃಶ್ಯಗಳು ತೋರಿಸುತ್ತವೆ. ಅವನು ಮತ್ತೊಂದು ರೂಂನಲ್ಲಿ ಕುಳಿತು ವಿಚಾರಣೆಗೆ ಹಾಜರಾಗುವ ಮೊದಲು ಸ್ವಲ್ಪ ಹೊತ್ತು ಮೊಬೈಲನ್ನು ಮೇಜಿನ ಮೇಲಿಟ್ಟು ಕಣ್ಮರೆಯಾಗುತ್ತಾನೆ.

Related Posts

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

  ಹೃದಯವೇದ್ರಾವಕ ಘಟನೆಯೊಂದು ಹುಣಸೂರಿನಲ್ಲಿ ನಡೆದಿದೆ ಪತ್ನಿ ಮಕ್ಕಳನ್ನು ಹತ್ಯೆಗೈದು ಪತಿ ನೇಣಿಗೆ ಶರಣಾಗಿರುವ ಪ್ರಕರಣ ಹುಣಸೂರು ನಗರದ ನ್ಯೂ ಮಾರುತಿ ಬಡಾವಣೆಯಲ್ಲಿ ಘಟನೆ ನ್ಯೂ ಮಾರುತಿ ಬಡಾವಣೆಯ ಹರೀಶ್ 49, ಪತ್ನಿ ನಿಶ್ಚಿತ 36 ಮಕ್ಕಳಾದ ನೆಕ್ಸಾ 13 ರಕ್ಷಾ…

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

  ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ ! ಆದಿಚುಂಚನಗಿರಿ ಮಠದ ಶಿಕ್ಷಣ ಟ್ರಸ್ಟ್‌ಗೆ ಸೇರಿದ 100 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಆರು ಎಕರೆ ಭೂಮಿ ಕಬಳಿಸಲು ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆರೋಪದ…

You Missed

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ಪತ್ನಿ ಮಕ್ಕಳನ್ನ ಹ* ಗೈದು ಪತಿ ನೇಣಿಗೆ ಶರಣು !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿಗೆ ಗೌರವ ಡಾಕ್ಟರೇಟ್ !

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರ ಪತ್ನಿ ಚನ್ನಮ್ಮ ನಿಧನ

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಚುಂಚನಗಿರಿ ಮಠದ 120 ಕೋಟಿ ಆಸ್ತಿ ಲೂಟಿ ಯತ್ನ, 11 ಜನ ಬಂಧನ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಒಡಿಶಾದ ಪುರಿಯಲ್ಲಿ ಇಂದಿನಿಂದ ಭವ್ಯ ‘ಜಗನ್ನಾಥ ರಥಯಾತ್ರೆ’ ಆರಂಭ !

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!

ಟೀಮ್ ಇಂಡಿಯಾದಲ್ಲಿ ಈಗಲೂ ಕೊಹ್ಲಿಯೇ ‘ಕಿಂಗ್’..!