ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿಯ ಮಾಲೀಕನ ಕೈ ಸಿಕ್ಕಿಬಿದ್ದಿದ್ದಾನೆ. ತೆಲಂಗಾಣದ ಮೇದಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.
ಈ ಕುರಿತು ಮಾಹಿತಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಹ್ಮದ್ ಮೊಯಿನುದ್ದೀನ್ “ಕಳ್ಳನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಧಿಸಲಾಗಿದೆ. ಆತನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲು ಅವನಿಗೆ ಪ್ರಜ್ಞೆ ಮರಳಲು ಪೊಲೀಸ್ ತಂಡ ಕಾಯುತ್ತಿದೆ ” ಎಂದು ಹೇಳಿದ್ದಾರೆ.

Related Posts

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಕ್ರೀಡೆ ಅಂದಾಗ ಅಲ್ಲಿ ಎದುರಾಳಿಗಳ ವಿರುದ್ಧ ಗೆಲ್ಲಲೇಬೇಕು ಎನ್ನುವ ಹಠ ಇದ್ದೇ ಇರುತ್ತದೆ. ಆದರೆ ಇಲ್ಲೊಂದು ಮ್ಯಾರಾಥಾನ್‌ನಲ್ಲಿ ಸೋಲು-ಗೆಲುವುಗಿಂತಲೂ ಮಾನವೀಯತೆ ಮುಖ್ಯ ಅನ್ನೋದನ್ನು ಇಬ್ಬರು ಯುವ ಕ್ರೀಡಾಪಟುಗಳು ತೋರಿಸಿಕೊಟ್ಟಿದ್ದಾರೆ‌. ತಮ್ಮ ವೈಯಕ್ತಿಕ ದಾಖಲೆಯನ್ನು ಬದಿಗಿಟ್ಟು ಸಂಕಷ್ಟದಲ್ಲಿದ್ದ ಸಹ ಕ್ರೀಡಾಪಟುವಿಗೆ ಸಹಾಯ ಮಾಡುವ…

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 25 ರಿಂದ 28 ರೂಪಾಯಿಗಳಷ್ಟು ಹೆಚ್ಚಾಗಲಿದೆ ಎಂಬ ವದಂತಿಗಳು ಹರಡಿವೆ. ಆದರೆ, ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯವು ಈ ವರದಿಗಳನ್ನು ಅಧಿಕೃತವಾಗಿ…

You Missed

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಗೆಲುವನ್ನು ಲೆಕ್ಕಿಸದೆ ಕುಸಿದು ಬಿದ್ದ ಓಟಗಾರನಿಗೆ ನೆರವಾದ ಸಹ-ಸ್ಪರ್ಧಿಗಳು; ಹೃದಯಸ್ಪರ್ಶಿ ವಿಡಿಯೋ!

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಚುನಾವಣೆ ನಂತರ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ? ಕೇಂದ್ರ ಸರ್ಕಾರದ ಸ್ಪಷ್ಟನೆ

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ 2026: ದಾಖಲೆ ಬರೆದ ವಿದ್ಯಾರ್ಥಿಗಳು, 7 ವಿದ್ಯಾರ್ಥಿಗಳಿಗೆ ಪೂರ್ಣ ಅಂಕ!

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸಿ.ಟಿ. ರವಿ, ಪ್ರಧಾನಿ ಮೋದಿಯವರ ಕುರಿತಾದ ಮಲ್ಲಿಕಾರ್ಜುನ ಖರ್ಗೆಯವರ ಹೇಳಿಕೆಯನ್ನು ಕಠಿಣವಾಗಿ ಖಂಡಿಸಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ಸೂರ್ಯವಂಶಿ, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಬಾಲ್ಯದಿಂದಲೂ ಎದುರಿಸುತ್ತಾ ಬಂದಿರುವ ಜಾತಿ ತಾರತಮ್ಯ ಮತ್ತು ಬಣ್ಣದ ಅಸಮಾನತೆಯ ಬಗ್ಗೆ ಕಹಿ ಸತ್ಯಗಳನ್ನು ಹಂಚಿಕೊಂಡಿದ್ದಾರೆ.

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು

ನ್ಯಾಯಾಂಗದ ಮೇಲೆ ಭರವಸೆ ಮೂಡಿಸಿದ ಇತ್ತೀಚಿನ ಮಹತ್ವದ ತೀರ್ಪುಗಳು