ಹೊಸ ವರ್ಷದ ಸಂಭ್ರಮಾಚರಣೆಗೆ ಬಾರ್ಗೆ ಕಳ್ಳತನ ಮಾಡಲು ಹೋಗಿ ಕಂಠಪೂರ್ತಿ ಕುಡಿದು ಅಲ್ಲೇ ಮಲಗಿದ ಕಳ್ಳ

ತೆಲಂಗಾಣ :- ಹೊಸ ವರ್ಷದ ಸಂಭ್ರಮಾಚರಣೆಗೆ ದುಡಿಲ್ಲದೇ ಕಾರಣ ತೆಲಂಗಾಣ ವ್ಯಕ್ತಿಯೊಬ್ಬ ಮದ್ಯದ ಅಂಗಡಿಗೆ ನುಗ್ಗಿ ಮದ್ಯದ ಬಾಟಲಿಗಳನ್ನು ದೋಚಿದ್ದಾನೆ. ಕದ್ದ ಬಾಟಲಿಯೊಂದಿಗೆ ಬಾರ್ನಿಂದ ಹೊರಗಡೆ ಬರುವ ಮುನ್ನ ಅಲ್ಲಿದ್ದ ಒಂದಿಷ್ಟು ಮದ್ಯವನ್ನು ಕುಡಿದು ಮತ್ತೆ ಹೋಗುವ ಎಂದು ಪ್ಲಾನ್ ಮಾಡಿದ್ದಾನೆ. ಆದರೆ ಕಂಠಪೂರ್ತಿ ಕುಡಿದ ಕಳ್ಳ ಅಲ್ಲೇ ಮಲಗಿದ್ದು, ಮರುದಿನ ಬೆಳಿಗ್ಗೆ ಅಂಗಡಿಯ ಮಾಲೀಕನ ಕೈ ಸಿಕ್ಕಿಬಿದ್ದಿದ್ದಾನೆ. ತೆಲಂಗಾಣದ ಮೇದಕ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಭಾನುವಾರ ರಾತ್ರಿ ‘ಕನಕದುರ್ಗಾ ವೈನ್ಸ್’ ಹೆಸರಿನ ಅಂಗಡಿಗೆ ನುಗ್ಗಿ ಛಾವಣಿಯ ಕೆಲವು ಹೆಂಚುಗಳನ್ನು ಕಿತ್ತು ಸಿಸಿಟಿವಿ ಕ್ಯಾಮೆರಾ ನಿಷ್ಕ್ರಿಯಗೊಳಿಸಿ ದುಬಾರಿ ಬೆಲೆಯ ಮದ್ಯದ ಬಾಟಲಿಗಳನ್ನು ಕದ್ದಿದ್ದ ಕಳ್ಳ, ಇನ್ನೇನು ಅಂಗಡಿಯಿಂದ ಪಾರಾಗಬೇಕು ಎನ್ನುವಷ್ಟರಲ್ಲಿ ಚಳಿಗೆ ಸ್ಪಲ್ಪ ಕುಡಿದು ಮತ್ತೆ ಹೋಗುವ ಎಂದು ಯೋಚಿಸಿದ್ದಾನೆ. ಆದರೆ ಮದ್ಯದ ಆಸೆಗೆ ಕಂಠಪೂರ್ತಿ ಕುಡಿದಿದ್ದಾನೆ. ಸೋಮವಾರ ಮುಂಜಾನೆ ಅಂಗಡಿ ಮಾಲೀಕ ಅಂಗಡಿಯ ಬಾಗಿಲು ತೆಗೆದಾಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಅಪರಿಚಿತ ವ್ಯಕ್ತಿಯನ್ನು ಕಂಡು ಶಾಕ್ ಆಗಿದ್ದಾರೆ.

ಸೋಮವಾರ ಬೆಳಗ್ಗೆ ಪೊಲೀಸರು ಸ್ಥಳಕ್ಕೆ ಬಂದ ನಂತರ ಘಟನೆಯ ದೃಶ್ಯಗಳು ಆನ್ಲೈನ್ನಲ್ಲಿ ಕಾಣಿಸಿಕೊಂಡಿವೆ. ಕಳ್ಳ ಮದ್ಯದಂಗಡಿಯಲ್ಲಿ ನೆಲದ ಮೇಲೆ ಮಲಗಿದ್ದು ನಗದು ಮತ್ತು ಮದ್ಯದ ಬಾಟಲಿಗಳು ಅವನ ಸುತ್ತಲೂ ಬಿದ್ದಿರುವುದನ್ನು ತೋರಿಸುವ ಫೋಟೋ ವೈರಲ್ ಆಗಿದೆ.
ಈ ಕುರಿತು ಮಾಹಿತಿ ನೀಡಿದ ಸಬ್ ಇನ್ಸ್ಪೆಕ್ಟರ್ ಅಹ್ಮದ್ ಮೊಯಿನುದ್ದೀನ್ “ಕಳ್ಳನನ್ನು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಂಧಿಸಲಾಗಿದೆ. ಆತನ್ನು ಆಂಬ್ಯುಲೆನ್ಸ್ನಲ್ಲಿ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಸಲು ಅವನಿಗೆ ಪ್ರಜ್ಞೆ ಮರಳಲು ಪೊಲೀಸ್ ತಂಡ ಕಾಯುತ್ತಿದೆ ” ಎಂದು ಹೇಳಿದ್ದಾರೆ.

Related Posts

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ರಾಜ್ಯದಲ್ಲಿ ಸೆಪ್ಟೆಂಬರ್ 21ರಿಂದ ಮೂರು ದಿನಗಳ ಕಾಲ ವಿಶೇಷ ವಿಧಾನಮಂಡಲ ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸೆ. 21ರಿಂದ ಸೆ.…

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಗುಂಡ್ಲುಪೇಟೆ ಪಟ್ಟಣದ ಇಂದಿರಾ ಕ್ಯಾಂಟೀನ್‌ಗೆ ಸೋಮವಾರ ಬೆಳಿಗ್ಗೆ ಅಧಿಕಾರಿಗಳ ತಂಡ ದಿಢೀರ್ ಭೇಟಿ ನೀಡಿ ಆಹಾರದ ಶುಚಿತ್ವ, ಗುಣಮಟ್ಟ ಹಾಗೂ ಕುಡಿಯುವ ನೀರಿನ ಪೂರೈಕೆಯನ್ನು ಕೂಲಂಕಷವಾಗಿ ಪರಿಶೀಲಿಸಿತು. ಬಡವರು ಮತ್ತು ಶ್ರಮಿಕರಿಗೆ ಪೌಷ್ಟಿಕ ಹಾಗೂ ಶುಚಿ-ರುಚಿಯಾದ ಆಹಾರ ದೊರೆಯಬೇಕು ಎಂಬ ಶಾಸಕರ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!