ಟ್ರಾಫಿಕ್‌ ಫೈನ್‌ ನಲ್ಲಿ 50% ರಿಯಾಯಿತಿ : 2.65 ಲಕ್ಷ ಹಣ ಕಳೆದುಕೊಂಡ ಟೆಕ್ಕಿ !

ಬೆಂಗಳೂರು: ಟ್ರಾಫಿಕ್‌ ದಂಡದ ಮೊತ್ತವನ್ನು ಪಾವತಿಸುವ ಮುನ್ನ ಎಚ್ಚರವಾಗಿರಿ. ಸೈಬರ್‌ ಕಳ್ಳರು ಯಾವುದೋ ಲಿಂಕ್‌ ಕಳುಹಿಸಿ ನಿಮ್ಮ ಹಣಕ್ಕೆ ಕನ್ನ ಹಾಕಲು ಮುಂದಾಗಿದ್ದು, ಟೆಕ್ಕಿಯೊಬ್ಬರು 2.65 ಲಕ್ಷ ರೂ. ಕಳೆದುಕೊಂಡಿದ್ದಾರೆ.

ಹೌದು. ಸಂಚಾರ ಪೊಲೀಸರು 50% ರಿಯಾಯಿತಿ ನೀಡಿ ದಂಡ ಕಟ್ಟಲು ಅವಕಾಶ ನೀಡಿದ್ದಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಳ್ಳುತ್ತಿರುವ ಸೈಬರ್ ವಂಚಕರು ವಾಹನ ಸವಾರರ ಮೊಬೈಲ್ ನಂಬರ್‌ಗಳಿಗೆ ಕೆಲ ಲಿಂಕ್‌ಗಳು, ಎಪಿಕೆ ಫೈಲ್‌ಗಳನ್ನು ಕಳುಹಿಸಿ ವಾಹನಗಳ ದಂಡವನ್ನು ಚೆಕ್‌ ಮಾಡಿಕೊಳ್ಳಿ. ಹಾಗೆಯೇ ಇಲ್ಲೇ ದಂಡ ಕಟ್ಟಬಹುದು ಎಂಬ ಮೆಸೇಜ್‌ಗಳನ್ನು ಕಳುಹಿಸುತ್ತಿದ್ದಾರೆ.

ವಂಚಕರ ಮೆಸೇಜ್‌ಗಳನ್ನು ನಂಬಿದ ಹಲವರು ಅದನ್ನು ಓಪನ್ ಮಾಡಿದ ತಕ್ಷಣ ಅಕೌಂಟ್ ನಲ್ಲಿದ್ದ ಹಣ ಮಾಯವಾಗುತ್ತದೆ. ಕೊಡಿಗೇಹಳ್ಳಿ ವ್ಯಾಪ್ತಿಯ ಟೆಕ್ಕಿಯೊಬ್ಬರಿಗೆ ಸೈಬರ್ ವಂಚಕರು ಓಪನ್ ಮಾಡಿ ನಿಮ್ ವಾಹನದ ಫೈನ್ ಎಷ್ಟಿದೆ ಚೆಕ್ ಮಾಡಿಕೊಳ್ಳಿ ಅಂತಾ ಎಪಿಕೆ ಫೈಲ್‌ ಕಳುಹಿಸಿದ್ದರು.

ಆ ಮಸೇಜ್ ನಂಬಿದ ಟೆಕ್ಕಿ ಆ ಲಿಂಕ್ ನ ಓಪನ್ ಮಾಡಿದ ಕೆಲವೇ ನಿಮಿಷಗಳಲ್ಲಿ ಖಾತೆಯಲ್ಲಿದ್ದ 2.65 ಲಕ್ಷ ರೂ. ಹಣವನ್ನು ಸೈಬರ್ ವಂಚಕರು ಎಗರಿಸಿದ್ದಾರೆ. ಈ ಸಂಬಂಧ ಕೊಡಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಮುರಳಿ ದೂರು ನೀಡಿದ್ದಾರೆ.

ದಂಡ ಬಾಕಿ ಉಳಿಸಿಕೊಂಡಿರುವ ವಾಹನ ಮಾಲೀಕರು ಆ.23ರಿಂದ ಸೆ.12ರವರೆಗೂ ದಂಡದ ಕೇವಲ ಶೇ.50ರಷ್ಟನ್ನು ಪಾವತಿಸಬಹುದು.

ಹಲವು ವರ್ಷಗಳಿಂದ ಟ್ರಾಫಿಕ್ ದಂಡ ಕಟ್ಟದೇ ಹಾಗೇ ಉಳಿಸಿಕೊಂಡವರಿಗೆ ಈ ರಿಯಾಯಿತಿ ನೀಡಲಾಗಿದೆ. ಇದಕ್ಕೂ ಮುನ್ನ ರಾಜ್ಯ ಸರ್ಕಾರ ಇದೇ ರೀತಿ ರಿಯಾಯಿತಿ ಘೋಷಿಸಿ ಮೊತ್ತದ ದಂಡ ಸಂಗ್ರಹಿಸಿತ್ತು. ಈ ಆದೇಶದಂತೆ ಕೇವಲ ಬೆಂಗಳೂರು ವ್ಯಾಪ್ತಿಯಲ್ಲಿ ನಿಯಮ ಉಲ್ಲಂಘಿಸಿದವರಿಗೆ ಮಾತ್ರ ದಂಡ ಪಾವತಿಸಲು ಅವಕಾಶವಿರುತ್ತದೆ.

 

Related Posts

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸತತ 6 ಬಾರಿ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊತ್ತು ನಾಡಹಬ್ಬಕ್ಕೆ ಸಾಕ್ಷಿಯಾಗಿದ್ದ ದಸರಾ ಗಜಪಡೆಯ ದಿಗ್ಗಜ ಅಭಿಮನ್ಯು, 2026ರ ಮೈಸೂರು ದಸರಾದಲ್ಲಿ ನಿಶಾನೆ ಆನೆಯಾಗಿ ಹೆಜ್ಜೆ ಹಾಕಲು ಸಜ್ಜಾಗಿದ್ದಾನೆ. 60 ವರ್ಷ ವಯೋಮಿತಿ ಪೂರೈಸಿದ ಹಿನ್ನೆಲೆಯಲ್ಲಿ ಈ ಹಿಂದೆ ಆನೆಗೆ ನಿವೃತ್ತಿ…

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

‘ಟಾಕ್ಸಿಕ್‌’ ಸಿನಿಮಾದಲ್ಲಿ ರಾಕಿಂಗ್‌ ಸ್ಟಾರ್‌ ಯಶ್‌ ಅವರ ಅಭಿನಯ ಹಾಗೂ ವಿಭಿನ್ನ ಆವತಾರಕ್ಕೆ ಸ್ಯಾಂಡಲ್‌ವುಡ್‌ ಮಂದಿ ಫಿದಾ ಆಗಿದ್ದು, ಇದೀಗ ಕಿಚ್ಚ ಸುದೀಪ್‌ ಪುತ್ರಿ, ಗಾಯಕಿ ಸಾನ್ವಿ ಸುದೀಪ್‌ ಕೂಡ ಯಶ್ ಅವರ ಪರ್ಫಾರ್ಮೆನ್ಸ್ ಅನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ‘ಟಾಕ್ಸಿಕ್: ಎ…

You Missed

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಅಭಿಮಾನಿಗಳ ಬೇಡಿಕೆಗೆ ಮಣಿದ ಸರ್ಕಾರ, ನಿಶಾನೆ ಆನೆಯಾಗಿ ಕಂಗೊಳಿಸಲಿರುವ ಅಭಿಮನ್ಯು

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಸೆ. 21ರಿಂದ ಮೂರು ದಿನಗಳ ಕಾಲ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಇಂದಿರಾ ಕ್ಯಾಂಟೀನ್‌ಗೆ ಅಧಿಕಾರಿಗಳ ಆಕಸ್ಮಿಕ ಭೇಟಿ: ಶುಚಿತ್ವ ಹಾಗೂ ಆಹಾರದ ಗುಣಮಟ್ಟ ಪರಿಶೀಲನೆ

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಬಿಗ್ ಬಾಸ್ ಕನ್ನಡ 13: ಈ ಭಾನುವಾರದಿಂದ ‘ಏವಿಯೇಷನ್’ ಥೀಮ್‌ನೊಂದಿಗೆ ಗ್ರ್ಯಾಂಡ್ ಟೇಕ್ ಆಫ್!

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

ಟಾಕ್ಸಿಕ್‌’ನಲ್ಲಿ ಯಶ್‌ ಅಭಿನಯಕ್ಕೆ ಕಿಚ್ಚನ ಪುತ್ರಿ ಫಿದಾ: ಪ್ರತಿಯೊಂದು ಫ್ರೇಮ್‌ನಲ್ಲೂ ಮ್ಯಾಜಿಕ್‌ ಎಂದ ಸಾನ್ವಿ ಸುದೀಪ್‌

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!

FSSAI ಅಸಮಾಧಾನ: ಎವರೆಸ್ಟ್ ಮತ್ತು LG ಇಂಗಿನ ಪುಡಿ ಮಾರಾಟಕ್ಕೆ ತಡೆ!